ಮರ್ಡರ್ ಮಿಸ್ಟರಿಯ ಕಥೆಗಳಿಗೆ ಕೊರತೆಯಿಲ್ಲ. ಕನ್ನಡದಲ್ಲಿ ಸಾಕಷ್ಟು ಚಿತ್ರಗಳು ಬಂದಿದ್ದರೂ ಕಥೆಯನ್ನು ಸರಿಯಾಗಿ ನಿರೂಪಿಸದ ಕಾರಣ ಸಿನಿಮಾಗಳಿಗೆ ಸೋಲಾಗುತ್ತದೆ. ಆದರೆ ಸದಭಿರುಚಿಯ ಸಿನಿಮಾಗಳ ನಿರ್ದೇಶಕ ಎಂದೇ ಪ್ರಸಿದ್ಧರಾಗಿರುವ ಜಯತೀರ್ಥ ಅವರು ಸಿನಿ ಪ್ರಿಯರ ನಿರೀಕ್ಷೆಗಳನ್ನು ಹುಸಿಗೊಳಿಸದೇ ಸುಂದರವಾಗಿ ಸವಿಯಲು `ವೆನಿಲ್ಲಾ’ವನ್ನು ನಿಮ್ಮ ಮುಂದಿಟ್ಟಿದ್ದಾರೆ.
ಒಂದು ಭಯಾನಕ ಕೊಲೆ, ಕ್ಷಣಕ್ಷಣಕ್ಕೂ ರೋಚಕ ಟ್ವಿಸ್ಟ್, ಕೊಲೆಗೂ ನಾಯಕ ನಟಿಗೂ ಇರೋ ಸಂಬಂಧ ಏನು? ಕೊಲೆ ಮಾಡಿದ್ದು ಯಾಕೆ? ಕೊಲೆ ಮಾಡಿದವರು ಯಾರು? ಈ ರೀತಿಯಾಗಿ ಪ್ರತಿಹಂತದಲ್ಲಿ ವೀಕ್ಷಕರಿಗೆ ರೋಚಕತೆಯನ್ನು ತೋರಿಸುವಲ್ಲಿ ಬ್ಯೂಟಿಫುಲ್ ಮನಸುಗಳು ಚಿತ್ರದ ಯಶಸ್ಸಿನಲ್ಲಿರುವ ನಿರ್ದೇಶಕ ಜಯತೀರ್ಥ ಯಶಸ್ವಿಯಾಗಿದ್ದಾರೆ.
- Advertisement 2
ಮರ್ಡರ್, ಒಂದು ಭಯಾನಕ ರೋಗ ಮತ್ತು ಎಂಥಾ ಕಾಯಿಲೆಗಳನ್ನೂ ವಾಸಿ ಮಾಡಬಲ್ಲ ಪ್ರಾಂಜಲ ಪ್ರೀತಿಯ ಸುತ್ತಾ ಸುತ್ತುವ ಈ ಕಥೆಯಲ್ಲಿ ನಾಯಕ ಮತ್ತು ನಾಯಕಿ ಬಾಲ್ಯ ಸ್ನೇಹಿತರು. ಈ ನಡುವೆ ನಾಯಕಿಯ ಕಡೆಯಿಂದ ಅಚಾನಕ್ಕಾಗುವ ಒಂದು ಆಕ್ಸಿಡೆಂಟ್, ಅದಕ್ಕೆ ತಲೆ ಕೊಟ್ಟು ಹೋರಾಡುವ ಹೀರೋ ಹೀಗೆ ಒಂದು ಚಿತ್ರಕ್ಕೆ ಏನೆಲ್ಲ ಫ್ಲೇವರ್ ಗಳು ಬೇಕೋ ಆ ಎಲ್ಲ ಫ್ಲೇವರ್ ಗಳ ಘಮ ವೆನಿಲ್ಲಾದಲ್ಲಿದೆ.
- Advertisement 3
- Advertisement 4
ಮಂಡ್ಯ ರಮೇಶ್ ಗರಡಿಯಲ್ಲಿ ಪಳಗಿ ರಂಗಭೂಮಿಯಲ್ಲಿ ಸೈ ಎನಿಸಿ ಉತ್ತಮ ಕಥೆಯ ಮೂಲಕವೇ ಕನ್ನಡ ಚಿತ್ರದಲ್ಲಿ ಎಂಟ್ರಿಯಾಗಬೇಕು ಎಂದು ಕನಸು ಕಾಣುತ್ತಿದ್ದ ಅವಿನಾಶ್ ಅವರು ಅನುಭವಿ ನಟನಂತೆ ಅಭಿನಯಿಸಿದ್ದಾರೆ. ಅವಿನಾಶ್ ಮತ್ತು ಸ್ವಾತಿ ಕೊಂಡೆ ನಾಯಕ ನಾಯಕಿಯರಾಗಿ ಅಭಿನಯಿಸಿರುವ ಈ ಚಿತ್ರದಲ್ಲಿ ಪಯಣ ರವಿಶಂಕರ್ ಪೊಲೀಸ್ ಆಫಿಸರ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರತೀ ಪಾತ್ರಗಳೂ ಕಾಡುವಂತೆ ಮೂಡಿ ಬಂದಿದ್ದು ಕಿರಣ್ ಹಂಪಾಪುರ ಅವರ ಛಾಯಾಗ್ರಹಣ ಮತ್ತು ಹಿನ್ನಲೆ ಸಂಗೀತವಿದೆ. ಪ್ರತೀ ಕ್ಷಣವೂ ಕುತೂಹಲವನ್ನು ಮೂಡಿಸುವ `ವೆನಿಲ್ಲಾ’ವನ್ನು ಥಿಯೇಟರ್ ನಲ್ಲಿ ಕುಳಿತು ಚೆನ್ನಾಗಿ ಸವಿಯಬಹುದು.