‘ಸಂಕ್ರಾಂತಿ ಹಬ್ಬ’ಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಆಸ್ಕರ್ ಕೃಷ್ಣ

Public TV
1 Min Read
Oscar Krishna 2

ನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ನಿರ್ದೇಶನದ (Direction) ಸಿನಿಮಾದಲ್ಲಿ ನಾಯಕನಾಗಿ ನಟಿಸುವವರ ಸಂಖ್ಯೆ ತೀರಾ ಕಡಿಮೆ. ಅವರಲ್ಲಿ ಆಸ್ಕರ್ ಕೃಷ್ಣ (Oscar Krishna) ಕೂಡ ಒಬ್ಬರು. ಸ್ಕರ್ ಸಿನಿಮಾದ ಮೂಲಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದವರು ಇದೀಗ ‘ಕೃತ್ಯ’ ಸಿನಿಮಾದ ಮೂಲಕ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್ (Poster) ಅನ್ನು ಸಂಕ್ರಾಂತಿ ಹಬ್ಬದ ದಿನದಂದು ರಿಲೀಸ್ ಮಾಡಿದ್ದಾರೆ.

Oscar Krishna 1

ಈ ಹಿಂದೆ ಕೃಷ್ಣ ಅವರು ‘ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡ್ಸಬಿಟ್ಟ’ ಚಿತ್ರದಲ್ಲೂ ನಾಯಕರಾದರು. ಎರಡನೇ ಬಾರಿ ಕೃತ್ಯ ಸಿನಿಮಾದ ಮೂಲಕ ಮತ್ತೆ ನಾಯಕರಾಗುತ್ತಿರುವುದು ವಿಶೇಷ. ಈ ಹಿಂದೆ ಇದೇ ಸಿನಿಮಾದ ಪೋಸ್ಟರ್ ಅನ್ನು ಶ್ರೀಮುರಳಿ ಬಿಡುಗಡೆ ಮಾಡಿ, ಕೃತ್ಯದ ಕೆಲ ವಿಷಯಗಳನ್ನೂ ಹಂಚಿಕೊಂಡಿದ್ದರು. ಇದನ್ನೂ ಓದಿ: ಬಿಗ್ ಬಾಸ್ ನಂದು- ಜಶ್ವಂತ್ ಬ್ರೇಕಪ್‌ಗೆ ಕಾರಣವಾದ್ರಾ ಸಾನ್ಯ ಅಯ್ಯರ್?

Oscar Krishna 3

’ಆಸ್ಕರ್’, ’ಮಿಸ್ ಮಲ್ಲಿಗೆ’ ’ಮೋನಿಕಾ ಈಸ್ ಮಿಸ್ಸಿಂಗ್’ ’ಮನಸಿನ ಮರೆಯಲಿ’ ಹಾಗೂ ಇತ್ತೀಚಿನ ’ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡ್ಸುಬಿಟ್ಟ’ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಆಸ್ಕರ್ ಕೃಷ್ಣ’ಕೃತ್ಯ’ ಸಿನಿಮಾಗೆ ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣ ಮತ್ತು ನಾಯಕನ ಸ್ಥಾನವನ್ನೂ ಅಲಂಕರಿಸಿರುವುದು ವಿಶೇಷ. ಗೌತಮ್‌ ರಾಮಚಂದ್ರ ಈ ಚಿತ್ರದ ಸಹ ನಿರ್ಮಾಪಕ. ಆಸ್ಕರ್‌ ಕೃಷ್ಣರೊಂದಿಗೆ ಹಲವು ವರ್ಷಗಳಿಂದ ಒಡನಾಟದಲ್ಲಿರುವ ಗೌತಮ್‌ ರಾಮಕೃಷ್ಣರವರು ಸಾಫ್ಟ್‌ವೇರ್ ಉದ್ಯೋಗಿ. ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಇವರ ಜೊತೆ ಸೇರಿಕೊಂಡು ಬಂಡವಾಳ ಹೂಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *