Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ

Bengaluru City

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ

Public TV
Last updated: September 14, 2024 6:38 pm
Public TV
Share
3 Min Read
HD Kumaraswamy Madakasira
SHARE

ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ (Madakasira) ಭಾಗದಲ್ಲಿ ಬೃಹತ್ ಕೈಗಾರಿಕೆಗಳನ್ನು ( Heavy Industries) ಸ್ಥಾಪಿಸುವ ಉದ್ದಿಮೆದಾರರ ಜೊತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಹೇಳಿದರು.

ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜೊತೆ ಮಾತನಾಡಿದ ಕೇಂದ್ರ ಸಚಿವರು ಈ ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ. ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದರು. ಇದನ್ನೂ ಓದಿ: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ

HD Kumaraswamy Madakasira

ಉದ್ಯಮಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ. ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು, ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿರುವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದು ಹೇಳಿದರು. ಇದನ್ನೂ ಓದಿ: PUBLiC TV Impact | ಅರೆಹೊಟ್ಟೆಯಲ್ಲಿ ಪರದಾಡಿದ್ದ ವಿದ್ಯಾರ್ಥಿನಿಯರ ಶಾಲೆಗೆ ತಲುಪಿದ ಆಹಾರ ಸಾಮಗ್ರಿ

ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜೊತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದರು. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

HD Kumaraswamy Madakasira 1

ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ, ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3,000 ಎಕರೆ ಜಾಗ ಇದೆ. ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜೊತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ: ಗ್ರಾಹಕರಿಗೆ ಬೆಲೆ ಏರಿಕೆ ಮಾಡಿ ರೈತರಿಗೂ ಸಿದ್ದರಾಮಯ್ಯ ಸರ್ಕಾರ ಮೋಸ ಮಾಡ್ತಿದೆ: ಹೆಚ್‌ಡಿಕೆ ಕಿಡಿ

ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1,600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಡಿಕೆ ಸುರೇಶ್ ಹಿನ್ನೆಲೆ ಎಲ್ಲರಿಗೆ ಗೊತ್ತಿದೆ, ಅವರಿಂದ ನನಗೆ ಸರ್ಟಿಫಿಕೇಟ್ ಬೇಡ: ಕುಮಾರಸ್ವಾಮಿ

ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು. ಇದನ್ನೂ ಓದಿ: ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

TAGGED:bengaluruhd kumaraswamyHeavy IndustrieskarnatakaMadakasiraಕರ್ನಾಟಕಬೃಹತ್ ಕೈಗಾರಿಕೆಬೆಂಗಳೂರುಮಡಕಶಿರಾಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

asha nath
Latest

ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

Public TV
By Public TV
7 minutes ago
Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
38 minutes ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
1 hour ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
1 hour ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
2 hours ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?