Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜೊತೆ ಚರ್ಚೆ: ಕುಮಾರಸ್ವಾಮಿ ಭರವಸೆ

Public TV
Last updated: September 14, 2024 6:38 pm
Public TV
Share
3 Min Read
HD Kumaraswamy Madakasira
SHARE

ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ (Madakasira) ಭಾಗದಲ್ಲಿ ಬೃಹತ್ ಕೈಗಾರಿಕೆಗಳನ್ನು ( Heavy Industries) ಸ್ಥಾಪಿಸುವ ಉದ್ದಿಮೆದಾರರ ಜೊತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಹೇಳಿದರು.

ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜೊತೆ ಮಾತನಾಡಿದ ಕೇಂದ್ರ ಸಚಿವರು ಈ ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ. ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದರು. ಇದನ್ನೂ ಓದಿ: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ

HD Kumaraswamy Madakasira

ಉದ್ಯಮಿಗಳ ಜೊತೆ ಸಮಾಲೋಚನೆ ನಡೆಸುತ್ತೇನೆ. ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು, ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿರುವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದು ಹೇಳಿದರು. ಇದನ್ನೂ ಓದಿ: PUBLiC TV Impact | ಅರೆಹೊಟ್ಟೆಯಲ್ಲಿ ಪರದಾಡಿದ್ದ ವಿದ್ಯಾರ್ಥಿನಿಯರ ಶಾಲೆಗೆ ತಲುಪಿದ ಆಹಾರ ಸಾಮಗ್ರಿ

ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜೊತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದರು. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

HD Kumaraswamy Madakasira 1

ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ, ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3,000 ಎಕರೆ ಜಾಗ ಇದೆ. ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜೊತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಇದನ್ನೂ ಓದಿ: ಗ್ರಾಹಕರಿಗೆ ಬೆಲೆ ಏರಿಕೆ ಮಾಡಿ ರೈತರಿಗೂ ಸಿದ್ದರಾಮಯ್ಯ ಸರ್ಕಾರ ಮೋಸ ಮಾಡ್ತಿದೆ: ಹೆಚ್‌ಡಿಕೆ ಕಿಡಿ

ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1,600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಡಿಕೆ ಸುರೇಶ್ ಹಿನ್ನೆಲೆ ಎಲ್ಲರಿಗೆ ಗೊತ್ತಿದೆ, ಅವರಿಂದ ನನಗೆ ಸರ್ಟಿಫಿಕೇಟ್ ಬೇಡ: ಕುಮಾರಸ್ವಾಮಿ

ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು. ಇದನ್ನೂ ಓದಿ: ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

TAGGED:bengaluruhd kumaraswamyHeavy IndustrieskarnatakaMadakasiraಕರ್ನಾಟಕಬೃಹತ್ ಕೈಗಾರಿಕೆಬೆಂಗಳೂರುಮಡಕಶಿರಾಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories

You Might Also Like

KSRTC 2
Bengaluru City

ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

Public TV
By Public TV
3 hours ago
Siddaramaiah 7
Bengaluru City

22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

Public TV
By Public TV
3 hours ago
PM Modi Meeting
Latest

100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

Public TV
By Public TV
3 hours ago
Mamata Banerjee
Latest

ಬಂಗಾಳಿ ವಲಸೆಗಾರರ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಳ; ದೀದಿ ನೇತೃತ್ವದಲ್ಲಿ ಪ್ರತಿಭಟನೆ

Public TV
By Public TV
3 hours ago
Kodagu Rain 2
Districts

ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

Public TV
By Public TV
4 hours ago
Israel Bobm
Latest

ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?