Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ

Bengaluru City

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ

Public TV
Last updated: June 18, 2018 2:02 pm
Public TV
Share
2 Min Read
PUTTASWAMY 1
SHARE

ಬೆಂಗಳೂರು: ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಬಿ.ಜೆ. ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಪ್ತ ಬಿ.ಜೆ. ಪುಟ್ಟಸ್ವಾಮಿ ಅಸಮಾಧಾನಗೊಂಡಿದ್ದು, ಯಡಿಯೂರಪ್ಪಗೆ ಬಹಿರಂಗವಾಗಿ ಪತ್ರ ಬರೆದು ರಾಜೀನಾಮೆ ನೀಡಿದ್ದಾರೆ.

ಪತ್ರದಲ್ಲಿ ಏನಿದೆ?
ತಮ್ಮಿಂದ ನನ್ನ ಸ್ವಂತ ಲಾಭಕ್ಕೆ ಯಾವುದೇ ಆಸೆ ಪಟ್ಟವನಲ್ಲ. ನಮ್ಮ ಜನಾಂಗಕ್ಕೆ ತಾವು ಮಾಡಿರುವ ಸಹಾಯಕ್ಕೆ ನಾನು ಮತ್ತು ನಮ್ಮ ಜನಾಂಗ ಚಿತ ಋಣಿಯಾಗಿದೆ. ಅದರಲ್ಲಿ ಯಾವುದೇ ಲೋಪವಿಲ್ಲದಂತೆ ಸಾರ್ವಜನಿಕ ಉಪಯೋಗಕ್ಕೆ ಬಳಸಿದ್ದೇನೆ.

ನಾನು ನಂಬಿದ್ದು ಪಕ್ಷದಲ್ಲಿ ಒಬ್ಬ ದೇವರನ್ನು ಮಾತ್ರ. ಪಕ್ಷದ ಹಿತದೃಷ್ಟಿಯಿಂದ ಯಾವುದೇ ಒಳ ಒಪ್ಪಂದವಿಲ್ಲದೇ ವಿರೋಧಿಗಳ ಹಲವು ಹಗರಣಗಳನ್ನು ಬಯಲಿಗೆ ಎಳೆದಿದ್ದೇನೆ. ಈಗ ನನ್ನ ರಕ್ಷಣೆಗೆ ಗತಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ತಾವು ಮಾಡಿದ ಸಹಾಯಕ್ಕೆ ಋಣ ಮುಕ್ತನಾಗಿ ನಡೆದುಕೊಂಡಿದ್ದೇನೆ.

PUTTASWAMY

ನಾನು ಒಂದು ಜಾತಿಯ ಪ್ರತಿನಿಧಿಯೂ ಹೌದು. ಮುಖ್ಯವಾಗಿ ಹಿಂದುಳಿದ ವರ್ಗಗಳನ್ನು ಪ್ರತಿನಿಧಿಸುವ ನಾಯಕನಾಗಿದ್ದೇನೆ. ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ನನ್ನ ಉಪಸ್ಥಿತಿ ವಿಧಾನ ಪರಿಷತ್ತಿನ ಒಳಗೆ ಹಾಗೂ ಹೊರಗೆ ಮತ್ತು ಹಿಂದುಳಿದ ವರ್ಗಗಳ ಮತ್ತಷ್ಟು ಹೆಚ್ಚಿನ ಸಂಘಟನೆಗೆ ಮತ್ತು ಲೋಕಸಭಾ ಚುನಾವಣೆಗೆ ಅತ್ಯಂತ ಪರಿಣಾಮಕಾರಿಯಾಗಿ ಸಹಕಾರಿಯಾಗುತ್ತಿತ್ತು ಎಂಬ ದೃಢ ನಂಬಿಕೆ ನನಗಿತ್ತು.

ಆದರೆ, ಯಾವ ಮಾನದಂಡ ಅನುಸರಿಸಿ ವಿಧಾನ ಪರಿಷತ್ತಿನ ಸದಸ್ಯತ್ವದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡದಿರುವುದು ನನಗಾಗಲೀ ಅಧವಾ ಕರ್ನಾಟಕದ ಜನತೆಗಾಗಲೀ ಅರ್ಥವಾಗುತ್ತಿಲ್ಲ. ತಾವು ವಿಧಾನ ಪರಿಷತ್ತಿನ ಸದಸ್ಯತ್ವವನ್ನು ಮುಂದುವರೆಸುವುದರ ಜೊತೆಗೆ ಪಕ್ಷವನ್ನು ಪರಿಣಾಮಕಾರಿಯಾಗಿ ಸಮರ್ಥಿಸಲು ವಿಪಕ್ಷ ನಾಯಕರನ್ನಾಗಿ ಮಾಡಲು ಇಚ್ಛೆಯನ್ನು ಸಹ ವ್ಯಕ್ತಪಡಿಸಿದ್ದೀರಿ. ಆ ಮಾತು ತಪ್ಪಿದ್ದಕ್ಕೆ ಕಾರಣ ತಿಳಿಯುತ್ತಿಲ್ಲ.

ನನ್ನ ಅವಿರತ ಶ್ರಮ, ಬದ್ಧತೆ, ನಂಬಿಕೆ, ಪ್ರಾನವನ್ನು ಲೆಕ್ಕಿಸದೆ ಮಾಡಿದ ಸಮರ್ಥನೆ ಇವುಗಳೆಲ್ಲವೂ ಸೋತಿರುವುದಕ್ಕೆ ಅತೀವ ನೋವಾಗಿದೆ. ನನ್ನ ಜೀವನದ ಕೊನೆ ಹಂತದಲ್ಲಿ ಸಕ್ರಿಯ ರಾಜಕೀಯಕ್ಕೆ ತೆರೆ ಎಳೆದಿರುವುದು ಯಾವ ತಪ್ಪಿಗೆ ಎಂದು ತಿಳಿಯುತ್ತಿಲ್ಲ.

ಪಕ್ಷದ ಸಂಘಟನೆಯಲ್ಲಿ ನನ್ನ ಜೊತೆ ಎಲ್ಲಾ ವಿಧದಲ್ಲೂ ಸಹಕರಿಸಿದ ನನ್ನ ಸಹಪಾಠಿಗಳಿಗೆ ಮತ್ತು ಹಿಂದುಳಿದ ವರ್ಗಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ತಮ್ಮಗಳನ್ನು ರಾಜಕೀಯದಲ್ಲಿ ಸಾಧ್ಯವಾದಷ್ಟು ಗಟ್ಟಿ ಮಾಡುವ ಆಸೆ ನನ್ನದಾಗಿತ್ತು. ಅದು ಸಾಧ್ಯವಾಗದಿರುವುದಕ್ಕೆ ವಿಷಾಧಿಸುತ್ತೇನೆ.

ಮಾಧ್ಯಮಗಳಲ್ಲಿ ಮತ್ತು ಕನಾಟಕ ಜನತೆಯ ಮನಸ್ಸಿನಲ್ಲಿ ನನ್ನನ್ನು ತಮ್ಮ ಆಪ್ತನೆಂದು ಗುರುತಿಸಲಾಗಿದೆ. ಅದಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ನಿಷ್ಠೆಯಿಂದ ನಡೆದುಕೊಂಡಿದ್ದೇನೆ ಎಂದು ನನ್ನ ಆತ್ಮಸಾಕ್ಷಿಯಾಗಿ ಈ ಮೂಲಕ ಕರ್ನಾಟಕ ಜನತೆಯ ಮುಂದೆ ಪ್ರಮಾಣಿಕರಿಸುತ್ತೇನೆ. ಅದಕ್ಕಾಗಿ ಈ ವಿವರಣೆ.

ಈ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಮತ್ತೊಮ್ಮೆ ಕೋರುತ್ತೇನೆ.

TAGGED:BangalorePublic TVPuttaswamyResignationyeddyurappaಪಬ್ಲಿಕ್ ಟಿವಿಪುಟ್ಟಸ್ವಾಮಿಬೆಂಗಳೂರುಯಡಿಯೂರಪ್ಪರಾಜೀನಾಮೆ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Chaluvaraya Swamy Newcastle University
Bengaluru City

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿವಿಗೆ ನಿಯೋಗ ಭೇಟಿ

Public TV
By Public TV
8 minutes ago
Sri Kshetra Sigandur Dharmadarshi Ramappa
Latest

ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Public TV
By Public TV
30 minutes ago
Nayana Motamma D.K.Shivakumar
Bengaluru City

ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Public TV
By Public TV
49 minutes ago
Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
1 hour ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
3 hours ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?