ಕೆಲಸದಿಂದ ವಜಾ – ಮನನೊಂದು ಬಿಎಂಟಿಸಿ ನೌಕರ ಆತ್ಮಹತ್ಯೆ

Public TV
1 Min Read
BMTC BUS DRIVER

ರಾಯಚೂರು: ಕೆಲಸ ಕಳೆದುಕೊಂಡಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ.

ಬಿಎಂಟಿಸಿ ನೌಕರನಾಗಿದ್ದ ವಿನೋದ್ ಕುಮಾರ್ ಪತ್ರಿ (42) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯಲ್ಲಿ ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

WhatsApp Image 2022 05 05 at 2.00.49 PM

ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿದ್ದ ವಿನೋದ್ ಕಳೆದ ವರ್ಷ ನೌಕರಿಯಿಂದ ವಜಾಗೊಂಡ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

Police Jeep

ಅವರನ್ನು ಈ ಹಿಂದೆ ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕೆ ಕಳೆದ ಮಾರ್ಚ್‍ವಜಾಗೊಳಿಸಲಾಗಿತ್ತು. ಮರಳಿ ಕೆಲಸ ಸಿಗದ ಹಿನ್ನೆಲೆ ಮನನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *