Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಕೆಗೆ ತಾತ್ಕಾಲಿಕ ರಿಲೀಫ್‌ – ಸರ್ಕಾರ, ಸಿಬಿಐ ವಾದ ಏನಿತ್ತು? ಹೈಕೋರ್ಟ್‌ ಹೇಳಿದ್ದು ಏನು? ಡಿಕೆ ಕೇಸ್‌ ಮುಂದೇನು? – ಕೋರ್ಟ್‌ ಕಲಾಪದ ಪೂರ್ಣ ವರದಿ ಓದಿ

Public TV
Last updated: November 29, 2023 7:50 pm
Public TV
Share
4 Min Read
dk shivakumar 4
SHARE

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ (Disproportionate Assets Case) ಆರೋಪ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ (CBI) ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಹಿಂದಕ್ಕೆ ಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ (High Court) ಪರಿಗಣಿಸಿದ್ದು, ಡಿಕೆಶಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ (Kapil Sibal) ಸರ್ಕಾರದ ಅಧಿಸೂಚನೆಯನ್ನು ನ್ಯಾ.ಪಿ.ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿಂದ ವಿಭಾಗೀಯ ನ್ಯಾಯಪೀಠಕ್ಕೆ ಮೆಮೋ ಮೂಲಕ ಸಲ್ಲಿಸಿದರು. ಇದನ್ನು ಪರಿಗಣಿಸಿದ ಹೈಕೋರ್ಟ್ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಸಂಪುಟದ ನಿರ್ಧಾರವನ್ನು ಇಲ್ಲಿಯವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ತಮ್ಮನ್ನು ಪ್ರತಿವಾದಿಯಾಗಿ ಸೇರಿಸಿಕೊಳ್ಳಬೇಕೆಂಬ ಯತ್ನಾಳ್ ಅರ್ಜಿಯನ್ನು ಪರಿಗಣಿಸುವುದಿಲ್ಲ. ಸಂಪುಟದ ನಿರ್ಧಾರವನ್ನು ಯಾರೂ ಬೇಕಿದ್ದರು ಪ್ರಶ್ನಿಸಬಹುದು ಎಂದು ತಿಳಿಸಿತು. ಇದೇ ವೇಳೆ ಸಿಬಿಐ ತನಿಖೆ ಪ್ರಶ್ನಿಸಿ ಈ ಹಿಂದೆ ಡಿಕೆ ಸಲ್ಲಿಸಿದ್ದ ರಿಟ್ ಅರ್ಜಿ ಮತ್ತು ಮೇಲ್ಮನವಿ ಅರ್ಜಿಯನ್ನು ಡಿಕೆ ಶಿವಕುಮಾರ್ ಹಿಂಪಡೆದರು. .

 

 

ಲೋಕಸಭೆ ಚುನಾವಣೆ (Lok Sabha Election) ಹೊಸ್ತಿಲಲ್ಲಿ ಸಿಬಿಐ ಇಕ್ಕಳಕ್ಕೆ ಸಿಲುಕುವ ಆತಂಕದಲ್ಲಿದ್ದ ಡಿಸಿಎಂ ಡಿಕೆಶಿವಕುಮಾರ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಸಂಪುಟದ ತೀರ್ಮಾನ ಸದ್ಯಕ್ಕೆ ಡಿಕೆ ಶಿವಕುಮಾರ್ ಕೈಹಿಡಿದಂತೆ ಕಾಣುತ್ತಿದೆ. ಸಿಬಿಐ ಮುಂದಿನ ನಡೆಯವರೆಗೂ ಡಿಕೆಶಿ ನಿಟ್ಟುಸಿರು ಬಿಡಬಹುದಾಗಿದೆ.

ಸರ್ಕಾರದ ವಾದ ಏನಿತ್ತು?
ಡಿಕೆಶಿ ವಿರುದ್ಧ ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲಾಗಿದೆ. ಸಿಬಿಐ ಸಂಸ್ಥೆ ತನಿಖೆ ಮುಂದುವರೆಸಲು ಬಯಸುವುದು ಬೇರೆ ವಿಚಾರ. ಆದರೆ ಒಮ್ಮೆ ಅನುಮತಿ ಹಿಂಪಡೆದರ ತನಿಖೆ ಮುಂದುವರೆಸುವುದಕ್ಕೆ ಅವಕಾಶವಿಲ್ಲ ಎಂದು ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆಯ ಸೆಕ್ಷನ್ 6 ಹೇಳುತ್ತದೆ. ಖಾಜಿ ದೋರ್ಜಿ ವರ್ಸಸ್ ಸಿಬಿಐ ಪ್ರಕರಣ ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ. ಈ ಹಿಂದಿನ ಸರ್ಕಾರ ಅನುಮತಿಸುವಾಗ ಕೆಲ ನಿಯಮ ಉಲ್ಲಂಘನೆ ಮಾಡಿದೆ. ಹೀಗಾಗಿಯೇ ರಾಜ್ಯ ಸರ್ಕಾರ ಕಾನೂನುಬದ್ಧವಾಗಿ ಅನುಮತಿ ಹಿಂಪಡೆದಿದೆ.

ಡಿಕೆ ಪರ ವಕೀಲರ ವಾದ ಏನು?
ಡಿಕೆಯನ್ನು ಪ್ರತಿನಿಧಿಸಿದ ಅಭಿಷೇಕ್ ಮನು ಸಿಂಘ್ವಿ, ಉದಯ್ ಹೊಳ್ಳ ಅವರು, ರಾಜ್ಯ ಸರ್ಕಾರ ನ.28ರಂದು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದು ಆದೇಶ ಹೊರಡಿಸಿದೆ. ಹೀಗಾಗಿ ರಿಟ್ ಅರ್ಜಿ ಅಮಾನ್ಯಗೊಂಡಿದೆ. ಈ ನೆಲೆಯಲ್ಲಿ ರಿಟ್ ಅರ್ಜಿ, ಮೇಲ್ಮನವಿ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದು ವಾದಿಸಿದರು.

 

ಸಿಬಿಐ ಪರ ವಕೀಲರ ವಾದ ಏನಿತ್ತು?
ಸರ್ಕಾರದ ಈ ಆದೇಶ ಈ ಹಂತದಲ್ಲಿ ಅಸಮಂಜಸವಾಗಿದ್ದು ರಿಟ್ ಅರ್ಜಿಯನ್ನು ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿದೆ. ಮೇಲ್ಮನವಿ ಅರ್ಜಿ ಹಿಂಪಡೆಯುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಎಫ್‌ಐಆರ್‌ಅನ್ನು ರಾಜ್ಯ ಸರ್ಕಾರ ಹಿಂಪಡೆಯಲಾಗದು. ಕೋರ್ಟ್ ಮಾತ್ರ ಸಿಆರ್‌ಪಿಸಿ ಸೆಕ್ಷನ್ 482ರ ಅಡಿ ಎಫ್‌ಐಆರ್ ವಜಾ ಮಾಡಬಹುದು. 2019ರಲ್ಲಿ ಸಿಬಿಐಗೆ ನೀಡಿದ್ದ ಅನುಮತಿ ಭಾಗವಾಗಿ ಎಫ್‌ಐಆರ್ ದಾಖಲಿಸಿ ಪ್ರಕ್ರಿಯೆ ನಡೆದಿದೆ. ಈಗಾಗಲೇ ಪ್ರಕರಣದ ಭಾಗಶಃ ತನಿಖೆ ನಡೆದಿದ್ದು 1994ರ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಇದು ಊರ್ಜಿತ ಆಗುವುದಿಲ್ಲ. ರಾಜ್ಯ ಸರ್ಕಾರ ಅನುಮತಿ ಹಿಂಪಡೆದಿರುವುದನ್ನು ಒಪ್ಪಲಾಗದು.  ಇದನ್ನೂ ಓದಿ: ಇನ್ನು ಮುಂದೆ ಬೇಕಾಬಿಟ್ಟಿ ಸಿಮ್‌ ಕಾರ್ಡ್‌ ಖರೀದಿಸುವಂತಿಲ್ಲ – ಡಿ.1ರಿಂದ ಜಾರಿಯಾಗಲಿರುವ ಕಠಿಣ ನಿಯಮಗಳು ಏನು?

ಹೈಕೋರ್ಟ್ ವಿಭಾಗೀಯ ಪೀಠ ಹೇಳಿದ್ದೇನು?
ಪ್ರತಿಪಕ್ಷ ಬದಲಾದಾಗ ಈ ರೀತಿ ಆದೇಶ ಮಾಡಿದ್ರೆ ತನಿಖೆ ಮೇಲೆ ಪ್ರಭಾವ ಬೀರಲ್ವಾ ಎಂದು ಪ್ರಶ್ನಿಸಿದ ಪೀಠ ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಎಫ್‌ಐಆರ್ ವಿಚಾರದಲ್ಲಿ ಸಿಬಿಐ ಮುಂದುವರೆಯಬಹುದು. ನಿಮ್ಮ ಎಫ್‌ಐಆರ್ ವಿಚಾರವನ್ನು ನಾವು ಮೈಲಿ ದೂರ ಇಟ್ಟಿದ್ದೇವೆ. ರಿಟ್ ಅರ್ಜಿಯನ್ನು, ಮೇಲ್ಮನವಿ ಅರ್ಜಿ ಹಿಂಪಡೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿತು.

 

ಏನಿದು ಖಾಜಿ ದೋರ್ಜಿ ವರ್ಸಸ್ ಸಿಬಿಐ ಕೇಸ್?
ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಪದೇ ಪದೇ ಕೇಳಿಬಂದಿದ್ದು 1994ರಲ್ಲಿ ಖಾಜಿ ದೋರ್ಜಿ ವರ್ಸಸ್ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪು. ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಸಿಕ್ಕಿಂ ಸಿಎಂ ನಾಡಬಹದ್ದೂರ್ ಭಂಡಾರಿ ವಿರುದ್ಧ 2 ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಈ ಕೇಸ್‌ಗಳ ಬಗ್ಗೆ ಸಿಬಿಐ ತನಿಖೆ ಆರಂಭವಾಗಿತ್ತು. 1987ರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸಿಕ್ಕಿಂ ಸರ್ಕಾರ ಹಿಂಪಡೆದಿತ್ತು. ಇದನ್ನು ಮಾಜಿ ಸಿಎಂ ಖಾಜಿ ದೋರ್ಜಿ ಸುಪ್ರೀಂನಲ್ಲಿ ಪ್ರಶ್ನಿಸಿದರು. ಈ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಒಮ್ಮೆ ಅನುಮತಿ ಕೊಟ್ಟ ನಂತರ ವಾಪಸ್ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಸಿಬಿಐ ತನಿಖೆಗೂ ಸಮ್ಮತಿ ವಾಪಸ್‌ಗೂ ಸಂಬಂಧವಿಲ್ಲ ಎಂದ ಕೋರ್ಟ್‌ ಸಿಬಿಐಗೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ಅವಕಾಶ ನೀಡಿತ್ತು.

ಡಿಕೆ ಕೇಸ್: ಮುಂದೇನು?
ಸಿಬಿಐ ತನ್ನ ತನಿಖೆ ಮುಂದುವರೆಸಬಹುದೇ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ರಾಜ್ಯ ಸಂಪುಟದ ಆದೇಶ ಸಿಂಧುವಾಗುತ್ತದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.ಈ ಪ್ರಕರಣ ತಾರ್ಕಿಕ ಅಂತ್ಯ ಕಾಣಲು ಸಾಕಷ್ಟು ಸಮಯ ಹಿಡಿಯಬಹುದು. ಅಲ್ಲಿಯವರೆಗೆ ಡಿಕೆಶಿಗೆ ರಿಲೀಫ್‌ ಸಿಕ್ಕಿದೆ.

 

TAGGED:cbiDK Shivakumarkapil sibalkarnatakaಕಪಿಲ್ ಸಿಬಲ್ಕರ್ನಾಟಕಡಿಕೆ ಶಿವಕುಮಾರ್ಸಿಬಿಐಹೈಕೋರ್ಟ್
Share This Article
Facebook Whatsapp Whatsapp Telegram

You Might Also Like

Shubhanshu Shukla 3
Latest

ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

Public TV
By Public TV
14 minutes ago
RV Deshpande
Bengaluru City

ಶಕ್ತಿ ಯೋಜನೆಯಿಂದ ಗಂಡಸರಿಗೆ ತೊಂದರೆಯಾಗ್ತಿದೆ: ಆರ್‌ವಿ ದೇಶಪಾಂಡೆ

Public TV
By Public TV
49 minutes ago
donald trump 1
Latest

ಕದನ ವಿರಾಮ ಉಲ್ಲಂಘನೆ; ‘ಫ..’ 4 ಪದದ ಆಕ್ಷೇಪಾರ್ಹ ಪದ ಬಳಸಿ ಇಸ್ರೇಲ್‌-ಇರಾನ್‌ಗೆ ಟ್ರಂಪ್‌ ತರಾಟೆ

Public TV
By Public TV
1 hour ago
Chitradurga Murder
Chitradurga

ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

Public TV
By Public TV
2 hours ago
Trisha
Cinema

ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

Public TV
By Public TV
3 hours ago
Ravichandran Hamsalekha
Cinema

ಹಂಸಲೇಖ, ರವಿಚಂದ್ರನ್ `ಯಾ’ ಸಾಹಿತ್ಯದ ಹಿಟ್ ಸೀಕ್ರೆಟ್..!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?