Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಗೊತ್ತಿಲ್ಲ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಗೊತ್ತಿಲ್ಲ: ಮುನಿರತ್ನ

Bengaluru City

ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಗೊತ್ತಿಲ್ಲ: ಮುನಿರತ್ನ

Public TV
Last updated: July 29, 2019 11:21 am
Public TV
Share
2 Min Read
muniratna
SHARE

ಬೆಂಗಳೂರು: ನಾವು ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಎಂಬುದು ಗೊತ್ತಿಲ್ಲ, ಈಗ ಕಣ್ಣು ತೆರೆದಿದ್ದೇವೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಕೇಳಿದ್ದೇನೆ ಎಂದು ಅನರ್ಹ ಶಾಸಕ ಮುನಿರತ್ನ ಅವರು ತಿಳಿಸಿದ್ದಾರೆ.

ಮುಂಬೈಯಿಂದ ಬಂದ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಈಗ ನ್ಯಾಯಯುತವಾಗಿ ಹೋರಾಟ ಮಾಡುತ್ತೇವೆ. ಈಗಾಗಲೇ ಇದಕ್ಕೆ ಸಂಬಂಧಪಟ್ಟಂತೆ ದಾಖಲೆಯನ್ನು ಪಡೆದು ಸ್ಪೀಕರ್ ಕಚೇರಿಯಿಂದ ಸುಪ್ರೀಂ ಕೋರ್ಟಿಗೆ ಹೋಗುವುದಾಗಿ ತಿಳಿಸಿದರು.

speaker Ramesh Kumar letter

ಅಲ್ಲದೆ ಸ್ಪೀಕರ್ ಅವರ ಈ ಪ್ರಕಿಯೆ ನಮಗೆ ಮೊದಲೇ ಗೊತ್ತಿತ್ತು. ನಾನು ಇದನ್ನು ಪಿತೂರಿ ಎಂದು ಹೇಳುವುದಿಲ್ಲ. ಈಗ ಎಲ್ಲ ಮುಗಿದಿದೆ. ನಾವೇನಿದ್ದರೂ ನ್ಯಾಯಯುತವಾಗಿ ಹೋರಾಟ ಮಾಡುತ್ತೇವೆ. ಈಗಾಗಲೇ ಕೆಲವು ಶಾಸಕರು ಸುಪ್ರೀಂ ಕೋರ್ಟಿಗೆ ತೆರಳಿದ್ದಾರೆ. ನಾವು ತಪ್ಪು ಮಾಡಿದ್ದೇವೆ ಎಂದು ನಮಗೆ ಅನಿಸುತ್ತಿಲ್ಲ. ಏಕೆಂದರೆ ಶಾಸಕ ಎಂದು ಅನಿಸಿಕೊಂಡ ಮೇಲೆ ಅವರು ಕ್ಷೇತ್ರಕ್ಕೆ ನ್ಯಾಯ ಒದಗಿಸುವುದು ಪ್ರತಿಯೊಬ್ಬ ಅವರ ಕರ್ತವ್ಯ ಎಂದರು.

supreme court

ನಾನು ಅಭಿವೃದ್ಧಿ ಕೇಳಿದ್ದೇನೆ ಹೊರತು ನನ್ನ ಕುಟುಂಬಕ್ಕೆ ಅಥವಾ ನನ್ನ ಲಾಭಕ್ಕೆ ನಾನು ಬೇಡಿಕೆ ಇಟ್ಟಿಲ್ಲ. ನನಗಿದ್ದ ಒಂದು ಕನಸು ತುಮಕೂರು ರಸ್ತೆ ರಾಜ್‍ಕುಮಾರ್ ಅವರ ಸಮಾಧಿಯ ಮುಂದೆ ರಿಂಗ್ ರೋಡ್‍ನಲ್ಲಿ ಮೆಟ್ರೋ ಬರಬೇಕು ಎಂದು ಕೇಳಿದ್ದೆ. ನಾನು ಹೆಚ್ಚೇನು ಕೇಳಲಿಲ್ಲ. ಈಗ ಬೆಂಗಳೂರು ಕೇವಲ ಐಟಿಬಿಟಿಯಲ್ಲಿ ಅಭಿವೃದ್ಧಿ ಆಗುತ್ತಿದೆ. ಬೆಂಗಳೂರು ಪಶ್ಚಿಮದ ಕಡೆ ಮಧ್ಯಮ ವರ್ಗ, ಬಡ ಕುಟುಂಬ ಹೆಚ್ಚು ಇದೆ. ನಾವು ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಎಂಬುದು ಗೊತ್ತಿಲ್ಲ, ಈಗ ಕಣ್ಣು ತೆರೆದಿದ್ದೇವೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಕೇಳಿದ್ದೇನೆ ಎಂದರು.

REVANNA

ಅಭಿವೃದ್ಧಿಗೆ ಸಹಕರಿಸಿ, ಗೊರಗೊಂಟೆಪಾಳ್ಯ ಜಂಕ್ಷನ್‍ಗೆ ಸಂಬಂಧಪಟ್ಟಂತೆ ರೇವಣ್ಣ ಅವರಿಗೆ ಸುಮಾರು ಪತ್ರ ಬರೆದು ಬೇಡಿಕೆ ಇಟ್ಟಿದ್ದೇನೆ. ಸಿಗ್ನಲ್ ಫ್ರೀ ಕಾರಿಡಾರ್ ಮಾಡಿಕೊಡಿ, ಎಲಿವೆಟೆಡ್ ಕಾರಿಡಾರ್ ನಮ್ಮ ಕ್ಷೇತ್ರಕ್ಕೆ ಅವಶ್ಯಕತೆ ಇದೆ. 24 ಸಾವಿರ ಕೋಟಿ ಬೆಂಗಳೂರಿಗೆ ಖರ್ಚು ಮಾಡ್ತೀರಾ. ದಯವಿಟ್ಟು ನಮ್ಮ ಮಾತು ಕೇಳಿ ಎಂದು ಕೇಳಿಕೊಂಡೆ. ಆದರೆ ಅವರು ನಮ್ಮ ಮಾತು ಕೇಳಲಿಲ್ಲ. ಸಮ್ಮಿಶ್ರ ಸರ್ಕಾರ ಎಂದರೆ ಎರಡು ಮನಸ್ಸು ಒಂದಾದ ಮೇಲೆ ಮಕ್ಕಳು ಚೆನ್ನಾಗಿರುತ್ತಾರೆ. ಎರಡು ಮನಸ್ಸು ಒಂದಾಗಿಲ್ಲ ಎಂದರೆ ಪ್ರತಿ ದಿನ ಜಗಳ, ಮುಸುಕಿನ ಗುದ್ದಾಟ ನಡೆಯುತ್ತದೆ ಎಂದು ತಿಳಿಸಿದರು.

RAMALINGAREDDY

ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡದೇ ಇರುವುದರಿಂದ ಬೆಂಗಳೂರಿನ ಶಾಸಕರಿಗೆ ಮನಸ್ತಾಪ ಬಂದಿದೆ. ರಾಮಲಿಂಗಾರೆಡ್ಡಿ ಅವರು ಹಿರಿಯರು, 7 ಬಾರಿ ಶಾಸಕರಾಗಿದ್ದರು ಸಹ ಅವರಿಗೆ ಸಚಿವ ಸ್ಥಾನ ಕೊಡದೇ ಇದದ್ದು ನಮಗೆ ಬೇಸರವಾಗಿತ್ತು. ಅವರು ಬೆಂಗಳೂರಿನ ಅಭಿವೃದ್ಧಿಗೆ ಬಗ್ಗೆ ಹೆಚ್ಚು ಕೆಲಸ ಮಾಡಿದ್ದರು. ಬೆಂಗಳೂರು ಶಾಸಕರ ಸಮಸ್ಯೆ ಕೇಳುವವರು ಇಲ್ಲದಂತಾದ ಪರಿಸ್ಥಿತಿ ನಮಗೆ ಬಂದಿತ್ತು. ಇಡೀ ರಾಜ್ಯದಲ್ಲಿ ಬೆಂಗಳೂರಿಗೆ ಆದಾಯ ಬರುತ್ತದೆ. ಬೆಂಗಳೂರು ಅಭಿವೃದ್ಧಿ ಮಾಡಲು ಅವರಿಗೇನು ಕಷ್ಟ. ಕೆಲಸ ಮಾಡಬೇಕು ಎಂದು ನಾವು ಬಂದಿದ್ದೇವೆ. ಕೆಲಸ ಆಗಿಲ್ಲ ಎಂದು ಈಗ ಹೊರ ನಡೆದಿದ್ದೇವೆ. ಕ್ಷೇತ್ರದ ಜನ ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

BJP SULLAI 1

ನಾವು ಯಾವುದೋ ಆಪರೇಷನ್ ಕಮಲಕ್ಕೊ ಅಥವಾ ಹಣದ ಆಮೀಷಕ್ಕೆ ಒಳಗಾಗಿಲ್ಲ. ನಾವು ಯಾವುದೇ ಕಾರಣಕ್ಕೂ ಈ ಪಾಪದ ಕೆಲಸಕ್ಕೆ ಕೈ ಹಾಕಲ್ಲ. ನಮಗೆ ಇದು ಬೇಕಾಗಿಲ್ಲ. ನಮ್ಮ ಕ್ಷೇತ್ರಕ್ಕೆ ಯಾರು ಅಭಿವೃದ್ಧಿ ಮಾಡುತ್ತಾರೋ ಅವರ ಹಿಂದೆ ಹೋಗುತ್ತೇವೆ ಎಂದು ಮುನಿರತ್ನ ಅವರು ಪ್ರತಿಕ್ರಿಯಿಸಿದ್ದಾರೆ.

TAGGED:bengaluruMuniratnaPublic TVResignationrevannaspeakerSupreme Courtಪಬ್ಲಿಕ್ ಟಿವಿಬೆಂಗಳೂರುಮುನಿರತ್ನರಾಜೀನಾಮೆರೇವಣ್ಣಸುಪ್ರೀಂ ಕೋರ್ಟ್ಸ್ಪೀಕರ್
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
24 minutes ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
27 minutes ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
31 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
58 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
1 hour ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?