ಅನರ್ಹ ಶಾಸಕರಿಗೆ ಮತ್ತೆ ಢವ ಢವ

Public TV
1 Min Read
rebel congress jds resigns e 1000x582 1

ಬೆಂಗಳೂರು: ಅನರ್ಹ ಶಾಸಕರ ವಿರುದ್ಧ 52ನೇ ಎನ್‍ಐಎ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿ ಸೇರ್ಪಡೆಯಾಗಿದ್ದಾರೆಂದು ಆರೋಪಿಸಿ ವಕೀಲ ಎಸ್.ಬಾಲಕೃಷ್ಣನ್ ಎಂಬವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಾಲಕೃಷ್ಣನ್ ಅರ್ಜಿ ಪರಿಗಣಿಸಿರುವ ನ್ಯಾಯಾಲಯ ಇಂದು ಸಂಜೆ 4 ಗಂಟೆಗೆ ಸಾಕ್ಷಿ ಸಮೇತ ವಾದ ಮಂಡಿಸಲು ಅವಕಾಶ ನೀಡಿದೆ.

ftg rebel mla 1707.transfer.Sub .01 e1573608854450

17 ಅನರ್ಹ ಶಾಸಕರು ಮತ್ತು ಇನ್ನಿತರರ ವಿರುದ್ಧ ಬಾಲನ್ ದೂರು ದಾಖಲು ಮಾಡಿದ್ದಾರೆ. ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿ ಸೇರಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಅಕ್ರಮ ಹಣ ಬಳಕೆ ಮಾಡಿದ್ದು, ದುಡ್ಡಿನ ಮೂಲ ಯಾವುದು ಅಂತಾ ಗೊತ್ತಾಗಬೇಕಿದೆ. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಅನರ್ಹರಿಂದಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡಿದ್ದೇವೆ. ಚುನಾವಣೆಯಲ್ಲಿ ಗೆದ್ದ ಬಳಿಕ ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

ಅನರ್ಹ ಶಾಸಕರು ಪಡೆದಿರುವ ಹಣದ ಬಗ್ಗೆ ತನಿಖೆಯಾಗಬೇಕಿದೆ. ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ರೂ. ಅಕ್ರಮ ಹಣ ಬಳಕೆಯಾಗಿದಿದೆ. ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ಆಡಿಯೋಗಳು ಸಹ ಲೀಕ್ ಆಗಿದೆ ಎಂದು ಬಾಲಕೃಷ್ಣನ್ ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *