ಬೆಂಗಳೂರು: ದೋಸ್ತಿ ಸರ್ಕಾರದ ಪತನಕ್ಕೆ ಕಾರಣವಾದ ಅನರ್ಹ ಶಾಸಕರು ಗುರುವಾರ ಅಥವಾ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ.
ಅನರ್ಹ ಶಾಸಕರ ಪೈಕಿ ಹಲವು ಮಂದಿ ಉಪಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು ದೆಹಲಿಯಲ್ಲಿ ಸೇರ್ಪಡೆಯಾಗುತ್ತಾರೋ ಅಥವಾ ಬೆಂಗಳೂರಿನಲ್ಲಿ ಸೇರ್ಪಡೆಯಾಗುತ್ತಾರೋ ಎನ್ನುವುದು ನಿರ್ಧಾರವಾಗಬೇಕಿದೆ.
- Advertisement 2
- Advertisement 3
ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಇಂದು ಸಿಎಂ ಸಂಜೆ 3 ಗಂಟೆಯವರೆಗೆ ಧವಳಗಿರಿಯಲ್ಲೇ ಇರಲಿದ್ದಾರೆ. ಇಂದು ಸಂಜೆ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು ಇಲ್ಲಿ ನಿರ್ಧಾರವಾಗಲಿದೆ.
- Advertisement 4
ಪಕ್ಷದ ಹೈಕಮಾಂಡ್ ದೆಹಲಿಯಲ್ಲಿ ಸೇರ್ಪಡೆಗೆ ಅನುಮತಿ ನೀಡಿದರೆ ರಾಷ್ಟ್ರ ರಾಜಧಾನಿಯಲ್ಲೇ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.
17 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆಯ ಅವಧಿ ಮುಗಿಯುವವರೆಗೆ ಅನರ್ಹತೆ ಮಾಡಿದ್ದು ಸರಿಯಲ್ಲ. ಈ ಅನರ್ಹಗೊಂಡ ಶಾಸಕರು ಈಗ ಯಾವುದೇ ಹುದ್ದೆ, ಅಧಿಕಾರವನ್ನು ಹೊಂದುವಂತಿಲ್ಲ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.