ತುರ್ತು ಅರ್ಜಿ ವಿಚಾರಣೆ ಸಾಧ್ಯವಿಲ್ಲ: ಅನರ್ಹ ಶಾಸಕರಿಗೆ ಸುಪ್ರೀಂ ಶಾಕ್

Public TV
1 Min Read
supreme court

ನವದೆಹಲಿ: ತುರ್ತು ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಪಡಿಸುವಂತೆ ಇಂದು ಅನರ್ಹ ಶಾಸಕರು ನ್ಯಾ. ಎನ್.ವಿ.ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದರು.

ಈ ಹಿಂದೆ ಅನರ್ಹ ಶಾಸಕರು ನ್ಯಾ.ಅರುಣ್ ಮಿಶ್ರಾ ದ್ವಿಸದಸ್ಯ ಪೀಠದ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ನ್ಯಾ.ಅರುಣ್ ಮಿಶ್ರಾ ದ್ವಿಸದಸ್ಯ ಪೀಠ ತುರ್ತು ವಿಚಾರಣೆಗೆ ಒಪ್ಪಿರಲಿಲ್ಲ. ಇಂದು ಮತ್ತೊಮ್ಮೆ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿಕೊಂಡಿದ್ದರು. ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

Rebel MLA 7

ನ್ಯಾ.ಎನ್.ವಿ.ರಮಣ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ಅನರ್ಹ ಶಾಸಕರು ಮತ್ತೊಮ್ಮೆ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ಅಯೋಧ್ಯೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಎನ್ ವಿ ರಮಣ ಪೀಠಕ್ಕೆ ಪ್ರಕರಣ ವರ್ಗಾಯಿಸಲಾಯಿತು. ಮಂಗಳವಾರ ಮುಖ್ಯನಾಯಧೀಶರು ಕೆಲಕಾಲ ಬೇರೆ ಅರ್ಜಿಗಳ ವಿಚಾರಣೆ ನಡೆಸಲಿದ್ದು, ಈ ವೇಳೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸಂಬಂಧ ಪ್ರಸ್ತಾಪ ಮಾಡುವ ಬಗ್ಗೆ ವಕೀಲರು ಚಿಂತಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *