ಯಾದಗಿರಿ: 1950ರಲ್ಲಿ ಅಶೋಕ ಚಕ್ರವನ್ನು (Ashoka Chakra) ರಾಷ್ಟ್ರ ಲಾಂಛನವನ್ನಾಗಿ ಮಾಡಲಾಗಿದೆ. ರಾಷ್ಟ್ರ ಲಾಂಛನಕ್ಕೆ ಗೌರವ ಕೊಡಬೇಕಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಕರ್ತವ್ಯವೂ ಕೂಡಾ. ಆದರೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.
1996ರಲ್ಲಿ ಗ್ರಾಮದಲ್ಲಿ 50-60 ಸಾವಿರ ರೂ. ಖರ್ಚು ಮಾಡಿ ವಡಗೇರಾದ ಮುಖ್ಯದ್ವಾರಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರ ಲಾಂಛನವನ್ನು ಅಳವಡಿಸಲಾಗಿತ್ತು. ಆದರೆ ಕಳೆದ 4-5 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ವೇಳೆ ರಾಷ್ಟ್ರ ಲಾಂಛನ ತೆಗೆದು ಆಂಜನೇಯ ದೇವಸ್ಥಾನದ ಪಕ್ಕದಲ್ಲಿ ಕೊಳಚೆ ಪ್ರದೇಶದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ಗರಂ- ಕಾಂಗ್ರೆಸ್ ಜೊತೆ ಸಭೆ ಮಾಡಿದ್ರಾ?
ಅಂದಿನಿಂದ ಇಂದಿನವರೆಗೂ ರಾಷ್ಟ್ರ ಲಾಂಛನ ಅನಾಥವಾಗಿ ಬಿದ್ದಿರೋದು ಅಧಿಕಾರಿಗಳ ಅವಿವೇಕತನವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ರಾಷ್ಟ್ರ ಲಾಂಛನವನ್ನ ಸೂಕ್ತ ಸ್ಥಳದಲ್ಲಿರಿಸಿ, ಗೌರವ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಲಿಗೆ ಪೆಟ್ಟಾಗಿದ್ರೂ ಜೈಲಿನ ಗೋಡೆ ಹಾರಿ ಅತ್ಯಾಚಾರಿ ಪರಾರಿ
Web Stories