ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ (president) ಬಗ್ಗೆ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಎಂಎಲ್ಸಿ ಭೋಜೇಗೌಡ (BojeGowda) ಹೇಳಿದ್ದಾರೆ.
ಚಿತ್ರದುರ್ಗದಲ್ಲಿ (Chitradurga) ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ರಾಷ್ಟ್ರಪತಿಗಳ ಕುರಿತು ಸಿದ್ದರಾಮಯ್ಯನವರು (Siddaramaiah) ಏಕವಚನದಲ್ಲಿ ಮಾತನಾಡಿದ ವಿಚಾರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡುವುದು ಸರಿಯಲ್ಲ. ರಾಷ್ಟ್ರಪತಿ ಅವರು ದೇಶದ ಪ್ರಥಮ ಪ್ರಜೆ. ಮುಖ್ಯಮಂತ್ರಿಯಾಗಿ ಈ ರೀತಿ ಅಗೌರವ ತೋರುವುದು ಸರಿಯಲ್ಲ. ಅವರಿಗೆ ಇದು ಶೋಭೆ ತರುವುದಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಕೊಡಬೇಕು ಎಂದು ತಿಳಿ ಹೇಳಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು
ಕೆರಗೋಡು ಹನುಮ ಧ್ವಜ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ರಾಮ ಮಂದಿರ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದೆ. ವಿನಾಕಾರಣ ಬಿಜೆಪಿಯ ಮೇಲೆ ಆರೋಪ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು
ಸುಮಲತಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿ, ಸುಮಲತಾ ಬಿಜೆಪಿಗೆ ಸೇರಿದರೆ ಮಂಡ್ಯ ಕ್ಷೇತ್ರದ ಬಗ್ಗೆ ಪ್ರಶ್ನೆ ಬರಲ್ಲ. ಜೆಡಿಎಸ್ ಬಹುಶಃ ನಾಲ್ಕು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೆ. ನಾನು ಪರಿಷತ್ ಚುನಾವಣೆಗೆ ಆಕಾಂಕ್ಷಿ ಆಗಿದ್ದು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. ಜೊತೆಗೆ ಮಂಡ್ಯ ಲೋಕಸಭಾ ಮೈತ್ರಿ ವಿಚಾರದ ಬಗ್ಗೆ ಮಂಡ್ಯ ಲೋಕಸಭಾ ಸ್ಪರ್ಧೆ ಬಗ್ಗೆ ಇನ್ನು ಚರ್ಚೆ ಆಗಿದ್ದು, ಅಂತಿಮ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವ ನೃತ್ಯದಲ್ಲಿ ಕಮಲದ ಹೂವನ್ನು ಎದ್ದು ಕಾಣುವಂತೆ ತೋರಿಸಿದ್ದರು – ಶಿವಲಿಂಗೇಗೌಡ