ಸ್ವಾವಲಂಬಿ ಜೀವನ ನಡೆಸಲು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

Public TV
1 Min Read
madikeri HANDICAP 1

ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದೆ.

ಮಡಿಕೇರಿಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ 2020-21ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಅವರ ಸಮ್ಮುಖದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಇದನ್ನೂ ಓದಿ:  ಜ್ಯೋತಿರಾದಿತ್ಯ ಸಿಂಧಿಯಾರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

madikeri HANDICAP 2

ಜಿಲ್ಲೆಯಲ್ಲಿ ಇರುವ ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಬೇರೆಯವರಿಗೂ ತೊಂದರೆ ಕೊಡದೆ, ಬದುಕು ನಡೆಸಲು ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗೆ ಅರ್ಜಿ ಹಾಕಿದ್ದರು. ಈ ಹಿನ್ನೆಲೆ ಇಲಾಖೆಯ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ವಿಶೇಷ ಚೇತನರ ಸರ್ವೆ ಕಾರ್ಯ ಮಾಡಲಾಗಿದ್ದು, ಆಯ್ಕೆಯಾದ ವಿಕಲಚೇತನ ಫಲಾನುಭವಿಗಳಿಗೆ ಇಂದು ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ನಿರೂಪಣಾಧಿಕಾರಿ ಪೂಣಚ್ಚ, ಜಿಲ್ಲಾ ದಿವ್ಯಾಂಗ ಒಕ್ಕೂಟ ಅಧ್ಯಕ್ಷರಾದ ಮಹೇಶ್ವರ್, ಉಪಾಧ್ಯಕ್ಷೆ ಆಯಿಷಾ, ಕಾರ್ಯದರ್ಶಿ ಲೋಹಿತ್ ಮತ್ತು ವಿಕಲಚೇತನ ಇಲಾಖೆಯ ಸಿಬ್ಬಂದಿ ಹಾಜರಿದ್ದರು. ಇದನ್ನೂ ಓದಿ:  ಡ್ರೋನ್ ದಾಳಿ- 10 ಜನರಿಗೆ ತೀವ್ರ ಗಾಯ

Share This Article
Leave a Comment

Leave a Reply

Your email address will not be published. Required fields are marked *