Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿವಂಗತ ಮಂಜುನಾಥನ ಗೆಳೆಯರು ಮೋಸ ಮಾಡೋದಿಲ್ಲ!

Public TV
Last updated: August 20, 2018 6:19 pm
Public TV
Share
2 Min Read
DIVANGATA MANJUNATHANA GELEYARU 2
SHARE

ಬೆಂಗಳೂರು: ದಿವಂಗತ ಮಂಜುನಾಥನ ಗೆಳೆಯರ ದರ್ಶನವಾಗಿದೆ. ಒಂದು ಯೂಥ್ ಫುಲ್ ಕಥೆಯನ್ನು ಲವಲವಿಕೆಯಿಂದಲೇ ಹೇಳುತ್ತಾ ಕಡೆಗೆ ಯುವ ಸಮುದಾಯಕ್ಕೊಂದು ಎಚ್ಚರಿಕೆಯ ಸಂದೇಶವನ್ನೂ ರವಾನಿಸುವ ಈ ಚಿತ್ರ ಪ್ರೇಕ್ಷಕರಿಗೆಲ್ಲ ಹೊಸಾ ಅನುಭವ ತುಂಬುವಲ್ಲಿ ಸಫಲವಾಗಿದೆ.

ಎಸ್.ಡಿ ಅರುಣ್ ನಿರ್ದೇಶನದ ಈ ಚಿತ್ರ ಪೋಸ್ಟರುಗಳಲ್ಲಿನ ಫ್ರೆಶ್ ಅನುಭೂತಿಯನ್ನು ಹಾಗೆಯೇ ಕಾಪಿಟ್ಟುಕೊಂಡು ಪ್ರೇಕ್ಷಕರನ್ನು ತಲುಪಿಕೊಂಡಿದೆ. ಸಂಭಾಷಣೆಯಿಂದ ಹಿಡಿದು ಪ್ರತಿಯೊಂದರಲ್ಲಿಯೂ ಸಹಜತೆಗೆ ಹೆಚ್ಚು ಒತ್ತು ಕೊಟ್ಟಿದ್ದರಿಂದ ತಮ್ಮನ ನಡುವಿನ ಪಾತ್ರಗಳೇ ಎಂಬಂಥಾ ಫೀಲು ಹುಟ್ಟಿಸುವಂತೆ ಈ ಚಿತ್ರದ ಪ್ರತೀ ಪಾತ್ರಗಳನ್ನೂ ನಿರ್ದೇಶಕರು ಕಟ್ಟಿ ಕೊಟ್ಟಿದ್ದಾರೆ. ಯಾವ ಭಾವಗಳೂ ಭಾರ ಅನ್ನಿಸದಂತೆ, ಯಾವ ದೃಶ್ಯಗಳೂ ಬೋರು ಹೊಡೆಸದಂತೆ ಅತ್ಯಂತ ಎಚ್ಚರಿಕೆಯಿಂದ ತಿದ್ದಿ ತೀಡಿದ ಕಲಾಕೃತಿಯಂತೆ ಈ ಚಿತ್ರ ಮೂಡಿ ಬಂದಿದೆ.

DIVANGATA MANJUNATHANA GELEYARU 4

ಸಂಜಯ್, ನವೀನ್, ರಾಜ್ ಕಿರಣ್ ಮತ್ತು ಶ್ರೀನಿವಾಸುಲು ಒಟ್ಟಿಗೇ ಓದಿದ್ದ ಗೆಳೆಯರು. ಅವರೆಲ್ಲರೂ ಇಂಜಿನಿಯರಿಂಗ್ ಓದಿ ಕೆಲಸ ಕಾರ್ಯ ಅಂತ ಒಬ್ಬೊಬ್ಬರೂ ಒಂದೊಂದು ದಿಕ್ಕುಗಳಾಗಿರುವಾಗಲೇ ಅವರ ಮತ್ತೋರ್ವ ಗೆಳೆಯ ದಿವಂಗತನಾದ ದುರ್ವಾರ್ತೆ ಬಂದೆರಗುತ್ತೆ. ಹೇಗೋ ಆ ಸಾವಿನ ನೆಪದಲ್ಲಿ ಮತ್ತೆ ಈ ನಾಲ್ವರು ಒಂದೆಡೆ ಸೇರಿತ್ತಾರೆ. ಆದರೆ ಮಂಜುನಾಥ ದಿವಂಗತನಾಗಿದ್ದು ಆತ್ಮಹತ್ಯೆಯಿಂದಲ್ಲ, ಬದಲಾಗಿ ಇದು ಕೊಲೆ ಅಂತ ಪೊಲೀಸ್ ಅಧಿಕಾರಿ ಕೆಂಪಯ್ಯ ಅದಾಗಲೇ ಫೀಲ್ಡಿಗಿಳಿದಿರುತ್ತಾನೆ. ಅದು ನಿಜಕ್ಕೂ ಕೊಲೆಯಾ? ಅದರಲ್ಲಿ ಈ ಗೆಳೆಯರು ತಗುಲಿಕೊಳ್ತಾರಾ ಅಂತೆಲ್ಲ ಪ್ರಶ್ನೆಗಳಿಗೆ ಥೇಟರಿನಲ್ಲಿ ಉತ್ತರ ಹುಡುಕಿದರೆ ಮಜವಾದೊಂದು ಅನುಭವವಾಗೋದು ಖಾತರಿ!

ಸಹಜ ಸಂಭಾಷಣೆಯಲ್ಲಿಯೇ ಲವಲವಿಕೆ, ಹಾಸ್ಯವನ್ನೂ ಬೆರೆಸಿರುವ ನಿರ್ದೇಶಕರು ಪರಿಣಾಮಕಾರಿಯಾಗಿಯೇ ದೃಶ್ಯ ಕಟ್ಟಿದ್ದಾರೆ. ತನ್ನ ಮಗನಿಗೆ ಏನೂ ಕಡಿಮೆಯಾಗದಂತೆ ಪೊರೆದ ತಂದೆ ರಿಟೈರ್ಡು ಸ್ಟೇಜಿಗೆ ಬಂದರೂ ಅಪ್ಪನನ್ನು ನೋಡಿಕೊಳ್ಳಲಾರದ ಮಗ. ಆ ವಯಸ್ಸಲ್ಲಿಯೂ ಮಗನ ನೆರವಿಗಾಗಿ ಸೆಕ್ಯೂರಿಟಿ ಕೆಲಸಕ್ಕೆ ಹೊರಡೋ ಅಪ್ಪನನ್ನು ನೋಡಿ ಮಾನಸಿಕ ವೇದನೆಗೆ ಬೀಳೋ ಪುತ್ರ… ಒಟ್ಟಾರೆಯಾಗಿ ಇಲ್ಲಿ ಸಾವೊಂದರ ಸುತ್ತ ಬದುಕಿನ ಸೂಕ್ಷ್ಮಗಳನ್ನು ಅರಳಿಸುವ ಕುಸುರಿಯಂಥಾದ್ದನ್ನು ನಿರ್ದೇಶಕರು ಮಾಡಿದ್ದಾರೆ.

ಆರಂಭದಿಂದ ಅಂತ್ಯದವರೆಗೂ ಕುತೂಹಲ ಕಾಯ್ದಿಟ್ಟುಕೊಂಡೇ ಈ ಚಿತ್ರ ಯುವ ಸಮೂಹಕ್ಕೆ, ಅದರಲ್ಲಿಯೂ ವಿಶೇಷವಾಗಿ ಗಂಡು ಮಕ್ಕಳಿಗೊಂದು ಸ್ಪಷ್ಟವಾದ, ಪರಿಣಾಮಕಾರಿಯಾದ ಎಚ್ಚರಿಕೆಯ ಸಂದೇಶ ರವಾನಿಸುತ್ತದೆ. ಅದರ ಜೊತೆ ಜೊತೆಗೇ ಒಂದೊಳ್ಳೆ ಚಿತ್ರ ನೋಡಿದ ತೃಪ್ತ ಬಾವವೂ ಪ್ರೇಕ್ಷಕರನ್ನು ತುಂಬಿಕೊಳ್ಳುತ್ತದೆ. ಯುವ ಸಮುದಾಯ, ಪೋಷಕರು ಸೇರಿದಂತೆ ಎಲ್ಲರೂ ನೋಡಬಹುದಾದ ಚಿತ್ರ ದಿವಂಗತ ಮಂಜುನಾಥನ ಗೆಳೆಯರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

eleyara balaga

TAGGED:cinema reviewsDivangata Manjunathana Geleyarufilm reviewsKannada moviesಕನ್ನಡ ಸಿನೆಮಾಚಿತ್ರ ವಿಮರ್ಶೆದಿವಂಗತ ಮಂಜುನಾಥನ ಗೆಳೆಯರುಸಿನಿಮಾ ವಿಮರ್ಶೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
6 minutes ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
16 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
1 hour ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
2 hours ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?