ಯುವ ಡಿವೋರ್ಸ್‌ ಕೇಸ್‌ – ಆ.23ಕ್ಕೆ ಮುಂದೂಡಿಕೆ- ಕೋರ್ಟ್‌ನಲ್ಲಿ ಇಂದೇನಾಯ್ತು?

Public TV
1 Min Read
Yuva 1

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ (Sandalwood Actor) ಯುವ ರಾಜ್‌ಕುಮಾರ್‌ (Yuva Rajkumar) ಸಲ್ಲಿಸಿದ್ದ ವಿಚ್ಚೇದನ (Divorce) ಅರ್ಜಿ ವಿಚಾರಣೆ ಆಗಸ್ಟ್‌ 23ಕ್ಕೆ ಮುಂದೂಡಿಕೆಯಾಗಿದೆ.

ಇಂದು 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

Sridevi Byrappa Yuva Rajkumar

ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್‌ ಮುಕ್ತಾಯವಾಗಬೇಕು.ಕೌನ್ಸಿಲಿಂಗ್‌ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ನ್ಯಾಯಾಧೀಶರು ಹೇಳಿದರು. ಇದನ್ನೂ ಓದಿ: ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

ಅಂತಿಮವಾಗಿ ಕೋರ್ಟ್‌ ಆಗಸ್ಟ್ 23ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿತು.

 

Share This Article