ದೀಪಾವಳಿ ಹಬ್ಬದ ಆಚರಣೆ ಹಾಗೂ ಅದರ ಮಹತ್ವ ಏನು?

Public TV
3 Min Read
Deepavali special 6

ತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಈ ಹಬ್ಬ ಕಾರ್ತಿಕ ಮಾಸದಲ್ಲಿ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಕೆಲವರು ಮನೆಗೆ ಹೊಸ ವಸ್ತುಗಳನ್ನು ತರುತ್ತಾರೆ.

Deepavali special 5

ದೀಪಾವಳಿ ಹಬ್ಬದ ಮಹತ್ವ:
ದೀಪಾವಳಿ ‘ದೀಪಾ’ ಎಂದರೆ ಮಣ್ಣಿನ ದೀಪ ಹಾಗೂ ‘ವಲಿ’ ಎಂದು ಯಾವುದಾದರು ವಸ್ತು ಸರಣಿಯಾಗಿಯಿಡುವುದು. ದೀಪಾವಳಿಯ ಅಮವಾಸ್ಯೆಯನ್ನು ದೀವಾಳಿ ಅಮಾವಾಸ್ಯೆಯೆಂದು ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆ ದಿನ ಕತ್ತಲೆಯಿಂದ ಕೂಡಿರುತ್ತದೆ. ದೀಪಾವಳಿ ಹಬ್ಬವನ್ನು ಹಿಂದೂಗಳ ಹಬ್ಬ ಮಾತ್ರ ಆಗಿರದೇ ಈ ಹಬ್ಬವನ್ನು ಜೈನ್, ಸಿಖ್‍ಗಳು ಹಾಗೂ ಬೌದ್ಧರು ಕೂಡ ಈ ಹಬ್ಬವನ್ನು ಆಚರಿಸುತ್ತಾರೆ.

Deepavali special 4

ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ ಹಾಗೂ ಅವರದ್ದೆ ಆದ ಕೆಲವು ಸಂಪ್ರದಾಯಗಳು ಇರುತ್ತದೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ತಮ್ಮ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಪ್ರಕಾರ ದೀಪಾವಳಿ ಹಬ್ಬ ರಾಮಾಯಣದ ಕಥೆಗೆ ಹೊಂದಿಕೊಂಡಿದೆ.

ರಾವಣನನ್ನು ಸಂಹಾರ ಮಾಡಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನ. ಅಲ್ಲದೇ ರಾಮ ಪಟ್ಟಾಭಿಷೇಕಗೊಂಡ ದಿನ. ಹಾಗಾಗಿ ಜನರು ಆ ದಿನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು. ಅಲ್ಲದೇ ಪಾಂಡವರು ಕೂಡ ಅದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ ದಿನ ಎನ್ನುವ ಕಥೆಯು ಇದೆ.

Deepavali special 3

ದೀಪಾವಳಿಯ ಐದು ಹಬ್ಬಗಳು ಹಾಗೂ ಅದರ ಮಹತ್ವಗಳು;

1. ದನ್ತೇರಸ್: ದನ್ತೇರಸ್ ಹಬ್ಬವನ್ನು ನವೆಂಬರ್ 5ರಂದು ಆಚರಿಸುತ್ತಾರೆ. ಈ ದಿನ ಜನರು ತಮ್ಮ ಮನೆಗೆ ಅಡುಗೆ ಪಾತ್ರೆಗಳು, ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ಖರೀದಿಸಲು ಹೋಗುತ್ತಾರೆ. ಅಲ್ಲದೇ ತಮ್ಮ ಮನೆ ಹಾಗೂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಣ್ಣಿನ ದೀಪವನ್ನು ಹಚ್ಚಿ ಅಲಂಕರಿಸುತ್ತಾರೆ.

Deepavali special 2

2. ನರಕ ಚತುರ್ದಶಿ: ನರಕ ಚತುರ್ದಶಿಯನ್ನು ಚೋಟಾ ದೀಪಾವಳಿ ಎಂದು ಕರೆಯುತ್ತಾರೆ. ನವೆಂಬರ್ 6 ರಂದು ಈ ಹಬ್ಬವನ್ನು ಆಚರಿಸುತ್ತಾರೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ನರಕಾಸುರನನ್ನು ಆಶ್ವಯುಜ ಕೃಷ್ಣ ಚತುರ್ದಶಿಯ ಕತ್ತಲೆಯಲ್ಲಿ ಕೃಷ್ಣ ಸಂಹಾರ ಮಾಡುತ್ತಾನೆ. ಈ ಹಬ್ಬದಂದು ಸಿಹಿ ತಿನುಸುಗಳನ್ನು ಖರೀದಿಸಿ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಹಂಚುತ್ತಾರೆ. ಸಿಹಿ ತಯಾರಿಸುವವರು ನರಕ ಚತುರ್ದಶಿದಂದು ಹೆಚ್ಚು ಸಮಯ ಕೆಲಸ ಮಾಡುತ್ತಾರೆ.

Deepavali special 7

3. ದೀಪಾವಳಿ: ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುತ್ತಾರೆ. ಲಕ್ಷ್ಮೀ ಎಂದರೆ ಕೇವಲ ಧನಾಧಿದೇವತೆ ಎಂಬ ಪ್ರತೀತಿಯಿದೆ. ಲಕ್ಷ್ಮೀ ಕೇವಲ ಧನಲಕ್ಷ್ಮೀ ಮಾತ್ರವಲ್ಲ. ಸಕಲ ಶ್ರೇಯಸ್ಸುಗಳಿಗೆ ಲಕ್ಷ್ಮೀ ಕಾರಣ ಎಂದು ಹೇಳುತ್ತಾರೆ. ಈ ಹಬ್ಬದಂದು ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಸೇರಿ ಒಬ್ಬರಿಗೊಬ್ಬರು ಸಿಹಿ ಹಂಚಿ ಉಡುಗೊರೆ ನೀಡುತ್ತಾರೆ.

Deepavali special 8

4. ಗೋಪೂಜೆ: ದೀಪಾವಳಿಯ ನಾಲ್ಕನೇ ದಿನ ಗೋ ಪೂಜೆ ಮಾಡುತ್ತಾರೆ. ಈ ದಿನದಂದು ಗೋವುಗಳನ್ನು ಅಲಂಕರಿಸಿ, ಹಾಲು ಹಿಡಿಯುವ ಪಾತ್ರೆ, ಕುಡಗೋಲುಗಳನ್ನು ಪೂಜಿಸಿ, ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ತಿಂಡಿ ತಿನಿಸುಗಳನ್ನು ನೀಡುತ್ತಾರೆ. ಉತ್ತರ ಭಾರತದಲ್ಲಿ ಅಥವಾ ಕೆಲವರ ಸಂಪ್ರದಾಯದಲ್ಲಿ ಈ ದಿನದಂದು ಪತಿ ತಮ್ಮ ಪತ್ನಿಯರಿಗೆ ಉಡುಗೊರೆ ನೀಡುತ್ತಾರೆ. ಅಲ್ಲದೇ ಹೊಸದಾಗಿ ಮದುವೆಯಾದ ಜೋಡಿಯನ್ನು ಮನೆಗೆ ಔತಣಕ್ಕೆ ಕರೆದು ಉಡುಗೊರೆ ನೀಡಲಾಗುತ್ತದೆ.

diwalifireworkslead

5. ಬಾಯ್ ದೂಜ್: ಬಾಯ್ ದೂಜ್ ಅನ್ನು ಬಯ್ಯಾ ದೂಜ್ ಎಂದು ಕರೆಯುತ್ತಾರೆ. ದೀಪಾವಳಿಯ ಐದನೇ ದಿನದಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ಅಣ್ಣ-ತಂಗಿಯರ ಹಬ್ಬವಾಗಿದ್ದು, ಅಣ್ಣಂದಿರು ತಮ್ಮ ತಂಗಿಯ ಮನೆಗೆ ಊಟಕ್ಕೆ ಹೋಗುತ್ತಾರೆ. ಅಲ್ಲದೇ ತಿಲಕ ಶಾಸ್ತ್ರ ಮಾಡುತ್ತಾರೆ. ಸಹೋದರಿಯರು ತಮ್ಮ ಸಹೋದರನಿಗೆ ತಿಲಕ ಶಾಸ್ತ್ರ ಮಾಡುತ್ತಾರೆ. ಇದನ್ನು ಮತ್ತೊಂದು ರಕ್ಷಾ ಬಂಧನ ಎಂದೂ ಕರೆಯಲಾಗುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *