ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ – ಸತೀಶ್ ಜಾರಕಿಹೋಳಿ

Public TV
1 Min Read
Satish Jarkiholi

ಬೆಂಗಳೂರು: ರಮೇಶ್ ಜಾರಕಿಹೋಳಿ (Ramesh Jarkiholi) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರು ಯಾವುದೇ ವಿಚಾರದಲ್ಲಿ ಲಿಮಿಟ್ ಮೀರಿ ಹೋಗಬಾರದು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ (Satish Jarkiholi) ಸಲಹೆ ನೀಡಿದ್ದಾರೆ.

`ವಿಷಕನ್ಯೆ'ಯಿಂದ ಕಾಂಗ್ರೆಸ್ ಹಾಳಾಗ್ತಿದೆ, ಡಿಕೆಶಿ ಗರ್ಲ್‌ಫ್ರೆಂಡ್‌ ಜೊತೆ ಮಾತನಾಡಿದ ಆಡಿಯೋ ಇದೆ: ಜಾರಕಿಹೊಳಿ

ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ ನಡುವಿನ ಸಿಡಿ ಕದನ (CD Case) ವಿಚಾರವಾಗಿ ಮಾತನಾಡಿದ ಅವರು, ಯಾರೂ ಕೂಡ ವೈಯಕ್ತಿಕ ಟೀಕೆ ಮಾಡಬಾರದು. ರಮೇಶ್ ಇರಬಹುದು, ಡಿಕೆಶಿ ಇರಬಹುದು ಯಾರೇ ಆಗಲಿ. ಒಂದು ಲಿಮಿಟ್ ನಲ್ಲಿ ಹೇಳಿಕೆ ನೀಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ – ಈಶ್ವರಪ್ಪ

Ramesh Jarkiholi amit shah

ಹೇಳಿಕೆ ನೀಡುವುದು ಆರೋಪ ಮಾಡುವುದು ದೊಡ್ಡದಲ್ಲ. ಆದರೆ ಅದರಿಂದ ವೈಯಕ್ತಿಕವಾಗಿ ಪಕ್ಷಕ್ಕೂ ಡ್ಯಾಮೇಜ್ ಆಗುತ್ತದೆ. ವೈಯಕ್ತಿಕವಾಗಿಯೂ ನಷ್ಟವಾಗುತ್ತದೆ. ರಮೇಶ್ ದೆಹಲಿ ಭೇಟಿ ಬಗ್ಗೆ ಪತ್ರಿಕೆಯಲ್ಲಿ ನೋಡಿದೆ. ನಾನೂ ಮಾಧ್ಯಮಗಳ ಮೂಲಕ ರಮೇಶ್‌ಗೆ ಕಿವಿಮಾತು ಹೇಳ್ತೇನೆ. ಯಾವುದೂ ಲಿಮಿಟ್ ಮೀರಿ ಹೋಗುವುದು ಬೇಡ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿಯೇ ಇರಬೇಕು. ಕಾನೂನು ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಅವಕಾಶ ಇದೆ ಅಂತಾ ತಿಳಿಸಿದರು. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *