ವಿಜಯನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಚಿವ ಆನಂದ್ ಸಿಂಗ್ ಭೇಟಿ ವಿಚಾರದಲ್ಲಿ ಯಾವುದೇ ತಪ್ಪು ಹುಡುಕುವ ಅಗತ್ಯವಿಲ್ಲ ಎಂದು ಕರ್ನಾಟಕ ಸಾರಿಗೆ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.
- Advertisement 2
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಸಚಿವ ಆನಂದ್ ಸಿಂಗ್ ಭೇಟಿ ವಿಚಾರದಲ್ಲಿ ಯಾವುದೇ ತಪ್ಪು ಹುಡುಕುವ ಅಗತ್ಯವಿಲ್ಲ. ಇದೊಂದು ಸೌಹಾರ್ದಯುತ ಭೇಟಿಯಾಗಿದೆ ಅಂತ ನನ್ನ ಭಾವನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಆನಂದ್ ಸಿಂಗ್ ಪ್ರಮುಖರಾಗಿದ್ದು, ಅವರಿಂದಲೇ ನಾವೆಲ್ಲ ಮಂತ್ರಿಯಾಗಿರುವುದು ಎಂದರು.ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹತ್ತಿಸಿದ FIR ಏನಾಯ್ತು: ಸಿಎಂ, ತೇಜಸ್ವಿ ಸೂರ್ಯಗೆ ರಮ್ಯಾ ಪ್ರಶ್ನೆ
- Advertisement 3
- Advertisement 4
ಆನಂದ್ ಸಿಂಗ್ ಕಾಂಗ್ರೆಸ್ ಬಿಟ್ಟು ಬಂದವರು ಮತ್ತೆ ಯಾಕೆ ಕಾಂಗ್ರೆಸ್ಗೆ ಹೋಗುತ್ತಾರೆ. ಆನಂದ್ ಸಿಂಗ್ ನಾವು ಜಂಟಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುತ್ತೇವೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಅತಿಹೆಚ್ಚು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.