ಶಿವಮೊಗ್ಗ ರಾಜಕೀಯಕ್ಕೆ ಕನಕಪುರ ಬಂಡೆ ಎಂಟ್ರಿ!

Public TV
1 Min Read
DK SHIVAKUMAR BSY

ಬೆಂಗಳೂರು: ಲೋಕಸಭಾ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಪಕ್ಷವನ್ನು ಗೆದ್ದ ಮಾಡಲು ಯಶಸ್ವಿಯಾಗಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರನ್ನೇ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಆಗುವಂತೆ ಮಾಡಲು ಒತ್ತಡ ಕೇಳಿ ಬಂದಿದ್ದು, ಇದಕ್ಕೆ ಸಿಎಂ ಕುಮಾರಸ್ವಾಮಿ ಅವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ದೋಸ್ತಿ ಪಕ್ಷಗಳ ಅಭ್ಯರ್ಥಿ ಆಗಿರುವ ಮಧು ಬಂಗಾರಪ್ಪ ಅವರೇ ಸ್ವತಃ ಕ್ಷೇತ್ರದ ಜವಾಬ್ದಾರಿಯನ್ನು ಡಿಕೆಶಿ ಅವರಿಗೆ ನೀಡಿದರೆ ಪಕ್ಷದ ಗೆಲುವು ಸುಲಭ ಸಾಧ್ಯ ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ನೀಡಲು ಮನವಿ ಮಾಡಿದ್ದಾರೆ ಎನ್ನಲಾಗಿದೆ.

vlcsnap 2018 10 21 09h31m49s254

ಡಿಕೆಶಿ ಅವರನ್ನೇ ಉಸ್ತುವಾರಿಯನ್ನಾಗಿ ಮಾಡಲು ಜಾತಿ ಸಮೀಕರಣವೂ ಕಾರಣವಿದ್ದು, ಒಕ್ಕಲಿಗ ಸಮುದಾಯದ ಹೆಚ್ಚು ಮಂದಿ ಮತದಾರರು ಇರುವ ಭದ್ರಾವತಿ, ತೀರ್ಥಹಳ್ಳಿ, ಸಾಗರದ ಕೆಲವು ಭಾಗ ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ಡಿಕೆಶಿ ಉಸ್ತುವಾರಿ ಸಹಾಯವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಬೆಳವಣಿಗೆ ನಡೆದಿದೆ.

ಈ ಕುರಿತಂತೆ ಸಿಎಂ ಕುಮಾರಸ್ವಾಮಿ ಅವರೇ ಜೆಡಿಎಸ್ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಕ್ಷೇತ್ರಕ್ಕೆ ಉಸ್ತುವಾರಿಯಾಗಿಸಲು ಸಿಎಂ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಅವರಂತಹ ಪ್ರಬಲ ನಾಯಕರನ್ನು ಎದುರಿಸಬೇಕಾದರೆ ಡಿಕೆ ಶಿವಕುಮಾರ್ ಅವರೇ ಸರಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸದ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿ ಡಿಕೆಶಿ ಅವರನ್ನ ಶಿವಮೊಗ್ಗ ಉಸ್ತುವಾರಿಯಾಗಿ ಮಾಡಿಕೊಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *