Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ತಪ್ಪು ಮಾಡಿದ್ದರೆ ನೇಣು ಹಾಕಲಿ – ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾನು ತಪ್ಪು ಮಾಡಿದ್ದರೆ ನೇಣು ಹಾಕಲಿ – ಶಿವಕುಮಾರ್

Karnataka

ನಾನು ತಪ್ಪು ಮಾಡಿದ್ದರೆ ನೇಣು ಹಾಕಲಿ – ಶಿವಕುಮಾರ್

Public TV
Last updated: November 7, 2019 5:12 pm
Public TV
Share
3 Min Read
mys dk shivakumar
SHARE

– ಮೈಸೂರು ಅಳಿಯ ಎಂಬುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ
– ಜೈಲಿನಲ್ಲಿ ಒಂದು ದಿನವೂ ಆತ್ಮಸ್ಥೈರ್ಯ ಕಳೆದುಕೊಳ್ಳಲಿಲ್ಲ

ಮೈಸೂರು: ನಾನು ತಪ್ಪು ಮಾಡಿದ್ದರೆ ನೇಣು ಹಾಕಲಿ. ಬೆಳಕು ಇರುವವರೆಗೆ ಮಾತ್ರ ನೆರಳು ನಮ್ಮ ಜೊತೆ ಇರುತ್ತದೆ, ಕತ್ತಲೆಯಾದ ಮೇಲೆ ನೆರಳೂ ನಮ್ಮ ಜೊತೆ ಇರುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದ್ದಾರೆ.

ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಸೂರ್ಯ ಮೇಲಿರುವವನು ಕೆಳಗಿಳಿಯಲೇ ಬೇಕು. ಹಗಲು-ರಾತ್ರಿ ಸಹಜ. ಕಾಲ ಉರುಳುತ್ತದೆ ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಟಾಂಗ್ ನೀಡಿದರು.

DK Shivakumar

ಚಾಮುಂಡಿ ತಾಯಿ ದುಃಖ ದೂರ ಮಾಡುವವಳು. ನಾನು ಮೈಸೂರಿನ ಅಳಿಯ, ಮೈಸೂರಿನ ಮೇಲೆ ಎಲ್ಲ ಥರದ ಹಕ್ಕು ನನಗಿದೆ. ಕೌಟುಂಬಿಕವಾಗಿ, ರಾಜಕೀಯವಾಗಿಯೂ ನನಗೆ ಹಕ್ಕಿದೆ. ಆದರೆ ಬಹಳಷ್ಟು ಕಾರ್ಯಕ್ರಮಗಳಿಗೆ ನಾನು ಬಂದಿಲ್ಲ. ನೀವು ಕರೆದರೆ ಮಾತ್ರ ಬರುತ್ತೇನೆ. ನಾನು ಮೈಸೂರಿನ ಅಳಿಯ ಎಂಬುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನಿಂದ ನನಗೆ ಹೆಣ್ಣು ಕೊಟ್ಟ ಕುಟುಂಬಕ್ಕೂ ಕಿರುಕುಳ ಉಂಟಾಯಿತು ಎಂದು ಗುಡುಗಿದರು.

ಬೇರು ಮರೆತರೆ ಹಣ್ಣು ಇಲ್ಲ ಎಂಬುದನ್ನು ನಂಬಿದ್ದೇನೆ. ಪಕ್ಷದ ಮುಖಂಡರಿಗಿಂತ ಕಾರ್ಯಕರ್ತರು ಮುಖ್ಯ. ಪಕ್ಷ, ಜಾತಿ, ಧರ್ಮ ಮರೆತು ನನ್ನ ಪರವಾಗಿ ಹೋರಾಟ ಮಾಡಿದ್ದೀರಿ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಎಲ್ಲ ಪಕ್ಷದವರು ಪ್ರಾರ್ಥನೆ ಮಾಡಿದರು. ಈ ಪ್ರಾರ್ಥನೆ ಫಲವಾಗಿ 50 ದಿನದಲ್ಲಿ ನಾನು ಜೈಲಿನಿಂದ ಮರಳಿ ಬಂದೆ. ನಿಮ್ಮ ಪ್ರೀತಿ ಮುಂದೆ ನನ್ನ ಆಸ್ತಿ ಗೌಣ. ನೀವು ತೋರಿಸಿದ ಪ್ರೀತಿಯಿಂದ ನನ್ನ ಸಾಲದ ಅಭಿಮಾನ ನನ್ನ ಪಾಲಿಗೆ ಹೆಚ್ಚಾಗಿದೆ ಎಂದು ಹೇಳಿ ಭಾವುಕರಾದರು.

mys dk shivakumar

ಎಸ್.ಎಂ.ಕೃಷ್ಣ ಸರ್ಕಾರದ ಅವಧಿಯಲ್ಲಿ ಮೈಸೂರು ಕಾರ್ಯಕರ್ತರಿಗೆ 3 ಸಾವಿರ ಸೈಟ್ ಕೊಡಲು ಮುಂದಾಗಿದ್ದೆ. ಆಗ ಸಚಿವರಾಗಿದ್ದ ನನ್ನ ಸ್ನೇಹಿತ ವಿಶ್ವನಾಥ್ ನಾನೇನೋ ಅಪರಾಧ ಮಾಡುತ್ತಿದ್ದೇನೆ ಎಂದು ಅದನ್ನು ತಡೆದರು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ರಾಜಕೀಯ ಮುಗಿಯಿತು, ಜೀವನ ಪೂರ್ತಿ ಹೊರಗಡೆ ಬರುವುದಿಲ್ಲ. 7 ವರ್ಷ ಜೈಲು ಎಂದು ಎಲ್ಲರೂ ಅಂದು ಕೊಂಡಿದ್ದರು. ಮಾಧ್ಯಮಗಳೂ ಅದೇ ರೀತಿ ತೋರಿಸಿದವು. ಸಮಯ ಮತ್ತು ಕಾನೂನು ಎರಡು ಉತ್ತರ ಕೊಡುತ್ತವೆ. ಹಗಲು-ರಾತ್ರಿ ಸಹಜ, ನೆರಳು ನಾವು ಬೆಳಕಲ್ಲಿ ಇದ್ದಾಗ ಮಾತ್ರ ಇರುತ್ತದೆ. ನಾವು ಕತ್ತಲಲ್ಲಿ ಇದ್ದಾಗ ಅದೂ ಸಹ ಇರುವುದಿಲ್ಲ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಳ್ಳಲಿ. ಅಧಿಕಾರಿಗಳು ಅರ್ಥ ಮಾಡಿಕೊಳ್ಳಲಿ ಎಂದು ಹರಿಹಾಯ್ದರು.

ಜೈಲಲ್ಲಿ ಚಿದಂಬರಂ ಅವರನ್ನು ಹೇಗೆ ನೋಡಿಕೊಳ್ಳುತ್ತಿದ್ದರು. ನನ್ನನ್ನು ಹೇಗೆ ನೋಡಿ ಕೊಳ್ಳುತ್ತಿದ್ದರು ಎನ್ನುವುದನ್ನು ಮುಂದೆ ಹೇಳುತ್ತೇನೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದಿನವೂ ನನ್ನ ತಮ್ಮನಿಗೆ ಫೋನ್ ಮಾಡುತ್ತಿದ್ದರು ಎಂದು ಇದೇ ವೇಳೆ ಸೋನಿಯಾ ಹಾಗೂ ರಾಹುಲ್ ಪರ ಬ್ಯಾಟ್ ಮಾಡಿದರು.

dk shiva

ಜೈಲಿನಲ್ಲಿ ನಾನು ಒಂದು ದಿನವೂ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಲಿಲ್ಲ. ಆದರೆ, ನನ್ನ ಮಕ್ಕಳು ಅವರ ಸ್ಕೂಲಲ್ಲಿ ನಿಮ್ಮಪ್ಪ ಜೈಲಿಗೆ ಹೋದವನು ಎಂದು ಕೇಳಿದರೆ ಏನು ಹೇಳುತ್ತಾರೆ ಎಂದು ನೆನೆದು ನೊಂದು ಕುಳಿತಿದ್ದೆ. ನಾನು ತಪ್ಪು ಮಾಡಿದ್ದರೆ ನೇಣು ಹಾಕಲಿ, ನಾನು ಪ್ರಮಾಣಿಕವಾಗಿ ವ್ಯವಹಾರ ಮಾಡಿದ್ದೇನೆ ಒತ್ತಿ ಹೇಳಿದರು.

ರಸ್ತೆಯಲ್ಲಿ ಮೈಸೂರಿಗೆ ಬಂದಿದ್ದರೆ ಇಷ್ಟೊತ್ತಿಗೆ ತಲುಪಲು ಆಗುತ್ತಿರಲಿಲ್ಲ. ಹೀಗಾಗಿ ರೈಲಿನಲ್ಲಿ ಬಂದೆ. ಮಂಡ್ಯ, ಮೈಸೂರಿನ ಹಲವು ನಾಯಕರು ಕರೆ ಮಾಡಿದ್ದರು. ಅಲ್ಲದೆ ಸುತ್ತೂರು ಶ್ರೀಗಳು ಇಂದು ಫೋನ್ ಮಾಡಿ ಮಠದಲ್ಲಿ ಇರುವುದಿಲ್ಲ ಎಂದು ಹೇಳಿದ್ದರು. ಜೆಡಿಎಸ್ಸಿನ ಆರು ಶಾಸಕರು ಬಂದು ಭೇಟಿ ಮಾಡಬೇಕೆಂದು ಕಾಯುತ್ತಿದ್ದರು. ಇದೆಲ್ಲ ನನ್ನ ಪುಣ್ಯ ಎಂದು ಭಾವುಕರಾದರು.

ಬಿಎಸ್‍ವೈ ನನ್ನನ್ನೇ ಬಿಡಲಿಲ್ಲ, ನನ್ನ ಕ್ಷೇತ್ರಕ್ಕೆ ಇದ್ದ ವೈದ್ಯಕೀಯ ಕಾಲೇಜನ್ನು ಕಿತ್ತುಕೊಂಡರು. ಇನ್ನೂ ಬೇರೆ ಶಾಸಕರದ್ದು ಬಿಡುತ್ತಾರಾ, ನನಗೆ ಚಕ್ರ ತಿರುಗಿಸುವುದು ಗೊತ್ತಿದೆ. ಎಲ್ಲಾ ಸರಿ ಹೋಗುತ್ತದೆ. ಅಧಿಕಾರ ಶಾಶ್ವತ ಅಲ್ಲ. ನಮ್ಮ ಮನೆಯದೂ ಸ್ವಲ್ಪ ಸರಿ ಪಡಿಸಿಕೊಳ್ಳೋಣ. ನಂತರ ಚಕ್ರ ತಿರುಗಿಸುವುದು ನನಗೆ ಗೊತ್ತಿದೆ.

tanveer saith

ಡಿಕೆಶಿ ಸಿಎಂ ಆಗಬೇಕು
ಇದೇ ವೇಳೆ ಮಾಜಿ ಸಚಿವ ತನ್ವೀರ್ ಸೇಠ್ ಮಾತನಾಡಿ, ಡಿಕೆಶಿ ರಾಜ್ಯದ ಮುಖ್ಯಮಂತ್ರಿಯಾಗಬೇಕು. ಸಾಕಷ್ಟು ತಪ್ಪುಗಳಾಗಿರುವುದು ಸಹಜ, ಆದರೆ ಅವರೊಂದಿಗೆ ನಾವು ಇರುತ್ತೇವೆ. ನಮ್ಮ ಪಕ್ಷ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದೆ. ಡಿಕೆಶಿ ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದಾರೆ. ಆದರೆ ಅವರಿಗೇ ಹೆಚ್ಚು ಕಷ್ಟಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿಯಾಗಬೇಕು ಇದಕ್ಕೆ ನನ್ನ ಬೆಂಬಲವಿದೆ ಎಂದರು.

TAGGED:conventionDK ShivakumarmysuruPublic TVspeechಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಭಾಷಣಮೈಸೂರುಸಮಾವೇಶ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
2 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
2 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
2 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
3 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
3 hours ago
kolar heavy vehicles
Kolar

ಕೋಲಾರ ನಗರಕ್ಕೆ ಭಾರಿ ವಾಹನಗಳಿಗೆ ನಿರ್ಬಂಧ ವಿಧಿಸಿ ಆದೇಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?