Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕರ್ತರ ಕಿತ್ತಾಟದ ನಡುವೆಯೂ ಕೋಲಾರ ನಾಯಕರ ಮುನಿಸಿಗೆ ತೇಪೆ ಹಚ್ಚಿ ಡಿಕೆಶಿ ಸಂಧಾನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾರ್ಯಕರ್ತರ ಕಿತ್ತಾಟದ ನಡುವೆಯೂ ಕೋಲಾರ ನಾಯಕರ ಮುನಿಸಿಗೆ ತೇಪೆ ಹಚ್ಚಿ ಡಿಕೆಶಿ ಸಂಧಾನ!

Chikkaballapur

ಕಾರ್ಯಕರ್ತರ ಕಿತ್ತಾಟದ ನಡುವೆಯೂ ಕೋಲಾರ ನಾಯಕರ ಮುನಿಸಿಗೆ ತೇಪೆ ಹಚ್ಚಿ ಡಿಕೆಶಿ ಸಂಧಾನ!

Public TV
Last updated: April 10, 2019 5:06 pm
Public TV
Share
3 Min Read
ckb dkshi sandana 2
SHARE

– ಕೋಲಾರ ಕಾಂಗ್ರೆಸ್ಸಿನಲ್ಲಿ ನಿಲ್ಲದ ಭಿನ್ನಮತ
– ಸಂಸದರ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು
– ಶಿಡ್ಲಘಟ್ಟ ಕಾಂಗ್ರೆಸ್ ಕಚೇರಿಯಲ್ಲಿ ಸಂಧಾನ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೋಲಾರ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ.

ಸಂಸದ ಕೆ.ಎಚ್ ಮುನಿಯಪ್ಪರ ಪಕ್ಷ ವಿರೋಧಿ ಚಟುವಟಿಕೆಗಳಿಂದ ಕೆಂಡಾಮಂಡಲರಾಗಿರುವ ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಮುಂದಾಗಿರೋದು ಮಗ್ಗಲು ಮುಳ್ಳಾಗಿದೆ. ವಿರೋಧ ಜಾಸ್ತಿಯಾಗುತ್ತಿರುವುದನ್ನು ಕಂಡ ಕೆ.ಎಚ್ ಮುನಿಯಪ್ಪ ಟ್ರಬಲ್ ಶೂಟರ್ ಡಿಕೆಶಿ ಮುಖಾಂತರ ತೇಪೆ ಹಾಕೋ ಕೆಲಸಕ್ಕೆ ಮುಂದಾಗಿ ಇಂದು ಸಂಧಾನ ಮಾಡಿದ್ದಾರೆ.

ckb dkshi sandana

ಕೋಲಾರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪ ವಿರುದ್ಧ ಮುನಿಸಿಕೊಂಡಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ವಿ. ಮುನಿಯಪ್ಪ ನಡುವಿನ ಮುನಿಸು ದೂರ ಮಾಡಲು ಇಂದು ಡಿಕೆ ಶಿವಕುಮಾರ್ ಮುಂದಾಗಿದ್ದರು. ಶಿಡ್ಲಘಟ್ಟ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುನಿಯಪ್ಪದ್ವಯರ ನಡುವೆ ಕಾರ್ಯಕರ್ತರ ಸಮ್ಮುಖದಲ್ಲೇ ಭಿನ್ನಮತ ಶಮನಕ್ಕೆ ಮುಂದಾಗಿದ್ರು. ಆದ್ರೆ ಆರಂಭದಲ್ಲೇ ಕೆ.ಎಚ್ ಮುನಿಯಪ್ಪ ವಿರುದ್ಧ ಧಿಕ್ಕಾರಗಳ ಘೋಷಣೆಗಳು ಮೊಳಗಿದವು.

ckb dkshi sandana 3

ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಮುನಿಯಪ್ಪರ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಬಾರಿ ಕೆ.ಎಚ್ ಮುನಿಯಪ್ಪರಿಗೆ ಬೆಂಬಲಿಸಬಾರದೆಂದು ಕಾರ್ಯಕರ್ತರು ಒತ್ತಾಯಿಸಿದಾಗ ಸಭೆಯಲ್ಲಿ ತಳ್ಳಾಟ ನೂಕಾಟ ನಡೆದು, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ ಹಾಗೂ ವಿ.ಮುನಿಯಪ್ಪರ ಸಮ್ಮುಖದಲ್ಲೇ ಕೈ ಕೈ ಮೀಲಾಯಿಸುವ ಹಂತಕ್ಕೆ ತಲುಪಿತು. ಈ ಮಧ್ಯೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವಂತಾಯಿತು.

ckb dkshi sandana 4

ಸಂಸದರ ವಿರುದ್ಧ ಕಿಡಿ:
ಸಭೆಯಲ್ಲಿ ಮಾತನಾಡಿದ ಶಾಸಕ ವಿ. ಮುನಿಯಪ್ಪ ಕೆ.ಎಚ್ ಮುನಿಯಪ್ಪನವರಿಗೆ 7 ಚುನಾವಣೆಗಳಲ್ಲೂ ನಾವು ದುಡಿದು ರಾಜಕೀಯ ಸ್ಥಾನ ಮಾನ ನೀಡಿದರೆ ನಮಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರು. ಕೆ.ಎಚ್ ಮುನಿಯಪ್ಪನವರೇ ನಿಮ್ಮಿಂದ ನಮಗೇನು ಆಗಬೇಕಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೆರವಾದರು. ಅನುಕೂಲ ಪಡೆದ ಪುಣ್ಯಾತ್ಮ ಕೆ.ಎಚ್ ಮುನಿಯಪ್ಪ ನಮ್ಮ ವಿರೋಧಿಗಳ ಜೊತೆ ಸೇರಿ ಸಂಭ್ರಮಿಸಿದರೆಂದು ಕೆಂಡಾಮಂಡಲರಾದರು. ಕೆ.ಎಚ್ ಮುನಿಯಪ್ಪ ಕುತಂತ್ರ ರಾಜಕಾರಣಿ ಎಂದು ಹಿರಿಯರು ಹೇಳಿದ್ದರು ಆದರೂ ನಾನು ನಂಬಲಿಲ್ಲ. ಮಗುವಿಗೆ ತಾಯಿ ಜನ್ಮ ನೀಡಬೇಕಾದರೆ ಎಷ್ಟು ನೋವು ತಿಂತಾರೋ ಅಷ್ಟೇ ನೋವನ್ನು ನಾನು ಈ ಪುಣ್ಯಾತ್ಮನಿಂದ ತಿಂದಿದ್ದೇನೆ ಎಂದು ನೊಂದು ತಮ್ಮ ಆಕ್ರೋಶವನ್ನು ಹಂಚಿಕೊಂಡರು. ಈ ವೇಳೆ ಕಾರ್ಯಕರ್ತರು ಕೂಡ ವಿ.ಮುನಿಯಪ್ಪರ ಮಾತಿಗೆ ಧ್ವನಿಯಾದರು.

ckb dkshi sandana 5

ರಾಜಕೀಯ ನಿವೃತ್ತಿ ಸವಾಲ್
ಕೋಲಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪ ಮಾತನಾಡಿ ವಿ. ಮುನಿಯಪ್ಪ ಶಾಸಕರಾಗೋ ಮೊದಲೇ ನಾನು ತಾಲೂಕು ಪಂಚಾಯತಿ ಸದಸ್ಯನಾಗಿದ್ದೆ. ಅವರ ಗೆಲುವಿಗೆ ನಾನು ಶ್ರಮಿಸಿದ್ದೇನೆ. ನಾನು ಮುನಿಯಪ್ಪರ ವಿರುದ್ಧ ಕೆಲಸ ಮಾಡಿಲ್ಲ. ಅವರಿಗೆ ಮತ ಹಾಕಬೇಡಿ ಅಂತ ನಾನೇಳಿರೋದು ಸಾಬೀತಾದರೆ ರಾಜಕೀಯ ನಿವೃತ್ತಿಯಾಗೋದಾಗಿ ಸವಾಲ್ ಹಾಕಿದರು. ಒಕ್ಕಲಿಗ ನಾಯಕರಲ್ಲಿ ವಿ.ಮುನಿಯಪ್ಪ ಕೂಡ ಹಿರಿಯರು ಅವರಿಗೆ ಸಚಿವ ಸ್ಥಾನ ನೀಡುವಂತೆ ನಾನು ಒತ್ತಾಯಿಸಿದ್ದೆ. ನಾನು ಅವರ ಋಣದಲ್ಲಿ ಇದ್ದೇನೆ. ಅವರಿಗೆ ದ್ರೋಹ ಮಾಡೋ ವ್ಯಕ್ತಿ ನಾನಲ್ಲ. ಸುಬ್ರಮಣಿ ಅಂತ ನಾಲ್ಕು ಜನ ಬೆಂಕಿ ಹಾಕೋವರಿಂದ ನಮ್ಮಿಬ್ಬರ ಮಧ್ಯೆ ವೈಮನಸ್ಸು ಮೂಡುವಂತಾಗಿದೆ ಎಂದಾಗ ವೇದಿಕೆಯಲ್ಲಿದ್ದ ಸುಬ್ರಮಣಿ ಕೆ.ಎಚ್ ಮುನಿಯಪ್ಪ ವಿರುದ್ಧ ಎದ್ದು ನಿಂತು ಕೆಂಡಾಮಂಡಲರಾದರು. ಆದರೂ ಕೆ.ಎಚ್ ಮುನಿಯಪ್ಪ ಎಲ್ಲರನ್ನೂ ಸಮಾಧಾನ ಪಡಿಸಿ ಓಲೈಕೆ ಮಾಡಿದ್ದು ವಿಶೇಷವಾಗಿತ್ತು.

ckb dkshi sandana 6

ಡಿಕೆಶಿ ಸಂಧಾನ ಸಫಲ:
ಸಂಧಾನಕ್ಕೆ ಬಂದಿದ್ದ ಸಚಿವ ಡಿ.ಕೆ.ಶಿವಕುಮಾರ್ ನಾನು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವನು. ವರಿಷ್ಠರ ನಿರ್ಧಾರದಿಂದ ಹೊಂದಾಣಿಕೆ ಮಾಡಿಕೊಂಡು ಹೋಗ್ತಿದ್ದೇನೆ. ಇಂತಹದರಲ್ಲಿ ಮುನಿಯಪ್ಪಧ್ವಯರ ಮಧ್ಯೆ ಇರೋ ಮುನಿಸು ಮರೆತು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು. ಅಲ್ಲದೇ ಚುನಾವಣೆ ಮುಗಿದ ಬಳಿಕ ನಾನು ಕೆ.ಎಚ್ ಮುನಿಯಪ್ಪ ಸೇರಿ ವಿ. ಮುನಿಯಪ್ಪರಿಗೆ ಮಂತ್ರಿ ಮಾಡೋ ಭರವಸೆ ನೀಡೋ ಮೂಲಕ ತೇಪೆ ಹಾಕುವ ಕೆಲಸ ಮಾಡಿದರು.

TAGGED:ChikkaballapuraCompromised k shivakumarK H muniyappaPublic TVV. Muniyappaಕೆ.ಎಚ್.ಮುನಿಯಪ್ಪಚಿಕ್ಕಬಳ್ಳಾಪುರಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿವಿ.ಮುನಿಯಪ್ಪಸಂಧಾನ
Share This Article
Facebook Whatsapp Whatsapp Telegram

Cinema news

Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows

You Might Also Like

Ajit Doval
Latest

ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗೋದು ಖಚಿತ – ಪಿಎಂ ಮೋದಿ ನಾಯಕತ್ವದ ಬಗ್ಗೆ ಅಜಿತ್ ದೋವಲ್ ಮಾತು

Public TV
By Public TV
44 seconds ago
Mandya Fire Accident 2
Districts

ಕೆ.ಆರ್‌ ಪೇಟೆ | ಬೆಂಕಿಯ ಕಿನ್ನಾಲೆಗೆ ಹುಲ್ಲಿನ ಮೆದೆ ಭಸ್ಮ

Public TV
By Public TV
4 minutes ago
HDK SIDDU
Bengaluru City

ನರೇಗಾ ವಿಚಾರದಲ್ಲಿ ಚರ್ಚೆಗೆ ನಾವು ಸಿದ್ಧ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ಮರು ಸವಾಲ್

Public TV
By Public TV
30 minutes ago
On Camera Drunk Driver Jumps Divider Crashes Car Into Bengaluru Restaurant
Bengaluru City

ಬೆಂಗಳೂರು | ಕುಡಿದು ಸಿನಿಮಾ ಸ್ಟೈಲ್‌ಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ – 8 ಮಂದಿ ಜಸ್ಟ್ ಮಿಸ್!

Public TV
By Public TV
34 minutes ago
G Parameshwar
Bengaluru City

ಬೆಂಗಳೂರಲ್ಲಿ ಬಾಡಿಗೆ ಕೊಡುವವರ ಮೇಲೆ ಹದ್ದಿನ ಕಣ್ಣು: ಪರಮೇಶ್ವರ್

Public TV
By Public TV
45 minutes ago
DK Suresh
Bengaluru City

ಯಾರು ಡ್ಯಾಡಿ? Daddy Is Home ಅಂದ್ರೆ ಏನು? – ಮೊದಲು ರಾಜೀನಾಮೆ ಕೊಡಲಿ: ಹೆಚ್‌ಡಿಕೆ ವಿರುದ್ಧ ಡಿಕೆಸು ಟಾಂಗ್

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?