ಧ್ರುವನಾರಾಯಣ್ ಕಾರ್ಯಾಧ್ಯಕ್ಷ ಅಲ್ಲ, ನನ್ನ ಕುಟುಂಬವಾಗಿದ್ದರು: ಕಣ್ಣೀರು ಹಾಕಿದ ಡಿಕೆಶಿ

Public TV
2 Min Read
dhruva narayan dk shivakumar

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (Dhruva Narayan) ನನ್ನ ಕಾರ್ಯಾಧ್ಯಕ್ಷ ಅಲ್ಲ. ನನ್ನ ಕುಟುಂಬವಾಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕಂಬನಿ ಮಿಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ನಮ್ಮ ಡಾಕ್ಟರ್ ಮಾಹಿತಿ ನೀಡಿದರು. ಧ್ರುವನಾರಾಯಣ್ ಅವರಿಗೆ ರಕ್ತದ ವಾಂತಿ ಆಗಿದೆ. ಆಮೇಲೆ ಉಸಿರಾಟ ಸಮಸ್ಯೆ ಆಗಿದೆ ಎಂದ ಅವರು, ಧ್ರುವ ನಾರಾಯಣ್ ನಿಧನದಿಂದಾಗಿ ಇಡೀ ಕಾಂಗ್ರೆಸ್ ಕುಟುಂಬಕ್ಕೆ ನಷ್ಟ ಆಗಿದೆ. ಸಂಭಾವಿ ರಾಜಕಾರಣಿ, ಮಾನವೀಯ, ಸ್ನೇಹ, ಪ್ರೀತಿ ಯಾರನ್ನು ನೋವಿಸಬಾರದು ಅಂತ ಗುಣ ಇತ್ತು. ಎಲ್ಲಾ ಸಮಾಜ, ವರ್ಗದವರು ಪ್ರೀತಿಯಿಂದ ನೋಡುತ್ತಿದ್ದರು. ಅನೇಕ ಬಾರಿ ನನಗೆ ಸಮಾಧಾನ ಮಾಡಿದ್ದರು. ನಮಗೆ ದೊಡ್ಡ ಶಕ್ತಿ ಆಗಿದ್ದರು. ಅವರು ನನ್ನ ಕಾರ್ಯಾಧ್ಯಕ್ಷ ಅಲ್ಲ. ನನ್ನ ಕುಟುಂಬವಾಗಿದ್ದರು. ನಮ್ಮ ಪಕ್ಷ ಕಾರ್ಯಕರ್ತರಿಗೆ ದೊಡ್ಡ ಆಸ್ತಿ ಆಗಿದ್ದರು. ಅವರ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು ಎಂದು ತಿಳಿಸಿದರು.

DHRUVA NARAYAN 1

ಸೋನಿಯಾ, ರಾಹುಲ್ ಗಾಂಧಿ (Rahul Gandhi), ಖರ್ಗೆ ಫೋನ್ ಮಾಡಿದ್ದರು. ಅವರಿಗೂ ನಂಬೋದಕ್ಕೆ ಆಗ್ತಿಲ್ಲ. ನಮ್ಮ ಹೃದಯ ಗೆದ್ದವರು. ನನ್ನ ಸ್ನೇಹಿತ, ಸಹೋದರರಾಗಿದ್ದರು. ಕಾಂಗ್ರೆಸ್ ಕಚೇರಿಯಲ್ಲಿ 11 ಗಂಟೆಗೆ ಶ್ರದ್ಧಾಂಜಲಿ ಸಭೆ ಇದೆ. ರಾಮನಗರ ಪ್ರಜಾಧ್ವನಿ ಕ್ಯಾನ್ಸಲ್ ಮಾಡಿದ್ದೇವೆ. ಸಂಜೆ ಒಳಗೆ ಅಂತ್ಯಸಂಸ್ಕಾರ ಮಾಡಿ ಅಂತ ನನ್ನ ಅಭಿಪ್ರಾಯ ಹೇಳಿದ್ದೇವೆ. ಇದರ ಬಗ್ಗೆ ಅ ಕುಟುಂಬದವರು ಮುಂದಿನ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಧ್ರುವನಾರಾಯಣ್‌ ನಿಧನ – ಪ್ರಜಾಧ್ವನಿ ಯಾತ್ರೆ ರದ್ದು

ಕೋವಿಡ್ ಸಮಯದಲ್ಲಿ ರಾಜ್ಯ ಸುತ್ತಿ ಕೆಲಸ ಮಾಡಿದ್ದರು. ಆಕ್ಸಿಜನ್ ದುರಂತದಲ್ಲಿ ತೆಗೆದುಕೊಂಡ ಶ್ರಮ ಬದ್ಧತೆ ಅದನ್ನ ಮರೆಯಲು ಸಾಧ್ಯವಿಲ್ಲ. ದೇವರು ಇಂತಹ ಕ್ರೂರಿ ಆಗಿದ್ದಾನೆ. ದೇವರು ಇದ್ದಾನೋ ಇಲ್ಲವೋ ಅಂತ ಅನ್ನಿಸುತ್ತಿದೆ. ಭಗವಂತ ಅವರ ಕುಟುಂಬಕ್ಕೆ ಅವರ ಅಗಲಿಕೆ ಭರಿಸೋ ಶಕ್ತಿ ಕೊಡಲಿ. ಬಂಧನ, ಸ್ನೇಹ ಶಾಶ್ವತವಾಗಿ ಉಳಿಯುತ್ತದೆ. ಅವರ ಕುಟುಂಬದರು ಅಂತ್ಯ ಸಂಸ್ಕಾರದ ಬಗ್ಗೆ ಮಾಹಿತಿ ಕೊಡ್ತಾರೆ. ಶ್ರದ್ಧಾಂಜಲಿ ಸಭೆ ಮುಗಿಸಿ ಮೈಸೂರಿಗೆ ನಾನು ಹೋಗುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

Share This Article
Leave a Comment

Leave a Reply

Your email address will not be published. Required fields are marked *