ಡಿಕೆಶಿ ಟಾಂಗ್ ನೀಡಿದ ಬೆನ್ನಲ್ಲೇ ಎಚ್ಚೆತ್ತ ಕೆಪಿಸಿಸಿ

Public TV
1 Min Read
DK SHIVAKUMAR

ಬೆಂಗಳೂರು: ಡಿಕೆ ಶಿವಕುಮಾರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ಕರೆದಿದ್ದಾರೆ.

ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರು ಈ ಹಿಂದೆಯೂ ನನ್ನ ಬೆಂಬಲಕ್ಕೆ ಬಂದಿರಲಿಲ್ಲ. ನನ್ನ ಮೇಲೆ ಐಟಿ ರೇಡ್ ಆದಾಗ ನಮ್ಮ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದು ಹೇಳಿ ರಾಜ್ಯ ನಾಯಕರಿಗೆ ಟಾಂಗ್ ನೀಡಿದ್ದರು.

ಡಿಕೆ ಶಿವಕುಮಾರ್ ಅವರಿಂದ ಈ ಹೇಳಿಕೆ ಪ್ರಕಟವಾದ ಕೂಡಲೇ ಕೆಪಿಸಿಸಿ ಇಂದು ಸಂಜೆ 4:30ಕ್ಕೆ ಸುದ್ದಿಗೋಷ್ಠಿ ಆಹ್ವಾನಿಸಿದ್ದು ಡಿಕೆಶಿ ಪರವಾಗಿ ಮಾತನಾಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 1:10ಕ್ಕೆ ಸಿದ್ದರಾಮಯ್ಯ ಟ್ವೀಟ್ ಮಾಡಿ ಕೇಂದ್ರ ಸರ್ಕಾರ ಸಿಬಿಐ, ಇಡಿ ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕೇ ಹೊರತು ಹೀಗೆ ಅಧಿಕಾರ ದುರ್ಬಳಕೆ ಮೂಲಕ ಅಲ್ಲ ಎಂದು ಟೀಕಿಸಿದ್ದಾರೆ. ಆದರೆ ಟ್ವೀಟ್ ನಲ್ಲಿ ಎಲ್ಲಿಯೂ ಡಿಕೆ ಶಿವಕುಮಾರ್ ಹೆಸರನ್ನು ಪ್ರಸ್ತಾಪ ಮಾಡಿಲ್ಲ.

ನಿನ್ನೆ ರಾತ್ರಿ ಡಿಕೆಶಿ ನಿವಾಸಕ್ಕೆ ಜೆಡಿಎಸ್ ಮಾಜಿ ಸಂಸದ ಶಿವರಾಮೇಗೌಡ ಆಗಮಿಸಿದ್ದರು. ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ನಾರಾಯಣ ಗೌಡ ಭೇಟಿ ನೀಡಿ ಮಾತನಾಡಿದ್ದರು. ಆದರೆ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಪ್ರಮುಖ ನಾಯಕರು ಡಿಕೆ ಶಿವಕುಮಾರ್ ನಿವಾಸಕ್ಕೆ ಬಂದಿರಲಿಲ್ಲ.

Share This Article
Leave a Comment

Leave a Reply

Your email address will not be published. Required fields are marked *