Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

Bengaluru City

ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

Public TV
Last updated: November 19, 2021 11:58 am
Public TV
Share
3 Min Read
DK Shivakumar 2
SHARE

-ದೇಶದ ಅನ್ನದಾತ, ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ

ನವದೆಹಲಿ: ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ನ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನವಾದ ಶುಕ್ರವಾರ ದೆಹಲಿಯಲ್ಲಿರುವ ಅವರ ಸ್ಮಾರಕ ಶಕ್ತಿ ಸ್ಥಳ ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೆರಳಿ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಕೃಷಿ ಸೇರಿದಂತೆ ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು ಎಂದಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಮಾಜಿ ಪ್ರಧಾನಿ, ಶ್ರೀಮತಿ ಇಂದಿರಾಗಾಂಧಿ ಅವರ ಜನ್ಮದಿನದಂದು ದಿಲ್ಲಿಯಲ್ಲಿರುವ ಅವರ ಸ್ಮಾರಕ, ಶಕ್ತಿ ಸ್ಥಳಕ್ಕೆ @IYC ಅಧ್ಯಕ್ಷರಾದ ಶ್ರೀ @SrinivasIYC ಅವರೊಂದಿಗೆ ಭೇಟಿ ನೀಡಿ ಗೌರವ ಸಮರ್ಪಿಸಿದೆ. pic.twitter.com/ycbnYeX7Zv

— DK Shivakumar (@DKShivakumar) November 19, 2021

ಈ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು. #FarmLaws

1/2

— DK Shivakumar (@DKShivakumar) November 19, 2021

ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ದುಷ್ಟ ಮನಸ್ಥಿತಿ ವಿರುದ್ಧ ಸಿಕ್ಕ ಗೆಲುವು. ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು. ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದ್ದೆವು. ಕೇಂದ್ರ ಸರ್ಕಾರ ಇನ್ನುಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಈ ಸಮಯದಲ್ಲಿ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು.#FarmLaws

2/2

— DK Shivakumar (@DKShivakumar) November 19, 2021

ಕಾಂಗ್ರೆಸ್ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜೊತೆಗೆ ಇರಲಿದೆ. ಅವರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟ ಮಾಡಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.

TAGGED:Central GovernmentDK Shivakumarfarm lawsಕಾಂಗ್ರೆಸ್ಕೃಷಿ ಕಾಯ್ದೆಡಿಕೆ ಶಿವಕುಮಾರ್ಸರ್ಕಾರ
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 05-02-2026

Public TV
By Public TV
3 minutes ago
h.d.kumaraswamy nirmala sitharaman
Latest

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Public TV
By Public TV
8 hours ago
kolar free helmet
Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
By Public TV
8 hours ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
9 hours ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
9 hours ago
Namma Metro Greenline
Bengaluru City

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?