Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಯಮ ಉಲ್ಲಂಘಿಸಿದ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಬೇಕು, ಇಲ್ಲದಿದ್ದರೆ ಹೋರಾಟ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಯಮ ಉಲ್ಲಂಘಿಸಿದ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಬೇಕು, ಇಲ್ಲದಿದ್ದರೆ ಹೋರಾಟ: ಡಿಕೆಶಿ

Bengaluru City

ನಿಯಮ ಉಲ್ಲಂಘಿಸಿದ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಬೇಕು, ಇಲ್ಲದಿದ್ದರೆ ಹೋರಾಟ: ಡಿಕೆಶಿ

Public TV
Last updated: January 20, 2022 8:14 pm
Public TV
Share
3 Min Read
DK SHIVAKUMAR 2
SHARE

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಸ್ಪಂದಿಸಿದ್ದು, ಈಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಜರುಗಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

bjp meeting2

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದ ಅವರು, ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ನಾನು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನಮ್ಮ ಪಕ್ಷದ ನಿಯೋಗ ಅವರನ್ನು ಭೇಟಿ ಮಾಡಿತ್ತು. ಈ ವಿಚಾರವಾಗಿ ಇಂದು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳು ಕ್ರಮ ಕ್ರಮೈಗೊಳ್ಳದಿದ್ದರೆ, ಅವರ ವಿರುದ್ಧ ಹೋರಾಟ ಮಾಡಲು ಕಾರ್ಯತಂತ್ರ ರೂಪಿಸುತ್ತೇವೆ. ಕೇವಲ ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಆಡಳಿತ ಪಕ್ಷದವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ, ನಾವು ಸುಮ್ಮನೆ ಕೂರುವುದಿಲ್ಲ. ನಾವು ಏನು ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ.  ಇದನ್ನೂ ಓದಿ: ಜನರಿಗೆ ಸಹಾಯವಾಗುವ ನಿರ್ಧಾರ ನಾಳೆ ಪ್ರಕಟ : ಅಶೋಕ್

ಈ ವಿಚಾರವಾಗಿ ಸಿದ್ದರಾಮಯ್ಯ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಮೈಸೂರಿನಲ್ಲಿ ಇದ್ದರು. ನಾನು ಕೂಡ ಊರಲ್ಲಿ ಇರಲಿಲ್ಲ. ಮುಖ್ಯಮಂತ್ರಿಗಳು ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇವೆ. ಮುಖ್ಯ ಕಾರ್ಯದರ್ಶಿಗಳು ಕೂಡ ಕೋವಿಡ್ ನಿಯಮ ವಿರುದ್ಧವಾಗಿ ನಡೆದುಕೊಂಡ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಈ ಇಬ್ಬರೂ ಕ್ರಮಕ್ಕೆ ಆದೇಶಿಸಿದ್ದು, ಈಗ ಪ್ರಕರಣ ದಾಖಲಿಸುವುದು ಉಪ ಆಯುಕ್ತರುಗಳಿಗೆ ಬಿಟ್ಟ ವಿಚಾರ. ಅವರ ನಡೆ ನೋಡಿ, ಅವರ ವಿರುದ್ಧ ಹೇಗೆ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ.  ಇದನ್ನೂ ಓದಿ: ರೇಣುಕಾಚಾರ್ಯ, ಯತ್ನಾಳ್ ಭೇಟಿ – ಸಚಿವ ಸ್ಥಾನದ ಬಗ್ಗೆ ಚರ್ಚೆ

ಕೇವಲ ಒಬ್ಬರ ಮೇಲೆ ಪ್ರಕರಣ ದಾಖಲಿಸುವುದಲ್ಲ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ, ನಿಯಮ ಉಲ್ಲಂಘಿಸಿರುವವರ ಪಟ್ಟಿ ತರಿಸಿಕೊಂಡು, ಆಯಾ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ. ಬಿಜೆಪಿಯಲ್ಲೇ ಕೋವಿಡ್ ನಿರ್ಬಂಧದ ಬಗ್ಗೆ ಗೊಂದಲ ಸೃಷ್ಟಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ. ಬದುಕಿರುವವರನ್ನು ಸಾಯಿಸುತ್ತಿದ್ದಾರೆ. ವ್ಯಾಪಾರ, ವಹಿವಾಟು ಏನಾಗಬೇಕು? ವಿದೇಶಗಳಲ್ಲಿ ಯಾವುದೇ ನಿರ್ಬಂಧ ಬೇಡ ಎಂದು ತೀರ್ಮಾನಿಸಿದ್ದಾರೆ. ನಾನು ಹೈದರಾಬಾದ್ ಗೆ ಹೋಗಿದ್ದೆ, ಅಲ್ಲಿ ಯಾವುದೇ ನಿರ್ಬಂಧವಿಲ್ಲ. ಸರ್ಕಾರ ಇಲ್ಲಿ ಯಾಕೆ ಜನಸಾಮಾನ್ಯರಿಗೆ ಈ ರೀತಿ ಸುಮ್ಮನೆ ತೊಂದರೆ ನೀಡುತ್ತಿದೆ? ಆರೋಗ್ಯದ ವಿಚಾರದಲ್ಲಿ ಅಗತ್ಯವಾದ ಕ್ರಮ ಕೈಗೊಳ್ಳಲಿ, ಆದರೆ ಅವರ ದಿನನಿತ್ಯದ ಬದುಕಿನ ಸಂಪಾದನೆ ಹಾಳು ಮಾಡುವುದೇಕೆ? ಬ್ಯಾಂಕ್ ನವರು ಅವರಿಗೆ ನೀಡಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತಾರಾ? ಅಥವಾ ಸರ್ಕಾರದವರು ಅವರ ಬಾಡಿಗೆಯನ್ನಾದರೂ ಮನ್ನಾ ಮಾಡುತ್ತಾರಾ? ವ್ಯಾಪಾರಸ್ಥರು, ಹೊಟೇಲ್ ಉದ್ಯಮದವರು ಏನಾಗಬೇಕು? ಹೊಟೇಲ್ ಕ್ಷೇತ್ರದವರು ಕೇಳುತ್ತಿರುವುದರಲ್ಲಿ ಅರ್ಥವಿದೆ ಎಂದರು.

ಯೂತ್ ಕಾಂಗ್ರೆಸ್ ನಲ್ಲಿ ಗಲಾಟೆ ನಡೆದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಗಲಾಟೆಗಳು ಆಗಿಲ್ಲ. ನಾನು ಆ ಹುಡುಗನ ಬಳಿ ಮಾತನಾಡಿ ಪರಿಶೀಲನೆ ನಡೆಸಿದ್ದು, ಯಾವುದೇ ಗಲಾಟೆ ನಡೆದಿಲ್ಲ. ಯಾರಾದರೂ ಕೆಲಸ ಮಾಡುತ್ತಿದ್ದಾರೆ ಎಂದರೆ ಅಂತಹವರ ವಿರುದ್ಧ ಈ ರೀತಿ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಈ ಘಟನೆ ಹಿಂದೆ ನಲಪಾಡ್ ಇಲ್ಲ, ಬೇರೆ ಯಾರೂ ಇಲ್ಲ. ರಾಜಕೀಯವಾಗಿ ಯಾರಾದರೂ ಶಿಸ್ತು ಉಲ್ಲಂಘಿಸಿದರೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಅವರ ವೈಯಕ್ತಿಕ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಟೆಸ್ಟ್‌ಗೆ ಕಳುಹಿಸಿ 22 ದಿನದ ನಂತರ ಬಂತು ಒಮಿಕ್ರಾನ್ ವರದಿ – ಅಷ್ಟರಲ್ಲಿ ಗುಣಮುಖಳಾಗಿ ಡಿಸ್ಚಾರ್ಜ್‌ ಆಗಿದ್ಲು ಯುವತಿ!

ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಡಿಕೆಶಿ ಮನವಿ
ಮಾಜಿ ಎಂಎಲ್‍ಸಿ ಬೆಮೆಲ್ ಕಾಂತರಾಜು ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಕೊರೊನಾ ನಿಯಮಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರು ಯಾರೂ ಬರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಜವಾಬ್ದಾರಿಯುತ ಪಕ್ಷದ ಪ್ರತಿನಿಧಿಗಳಾಗಿ ಕೊರೊನಾ ನಿಯಮಗಳ ಪಾಲನೆ ನಮ್ಮೆಲ್ಲರ ಕರ್ತವ್ಯ. ಕಾರ್ಯಕರ್ತರು ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನನ್ನ ಮನವಿಗೆ ಸ್ಪಂದಿಸಬೇಕು. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರಾರೂ ಬರಕೂಡದು ಎಂದು ಮಾಧ್ಯಮ ಹೇಳಿಕೆ ಮೂಲಕ ಅವರು ತಿಳಿಸಿದ್ದಾರೆ.

TAGGED:bjpcongressCoronaDK Shivakumarಕಾಂಗ್ರೆಸ್ಕೊರೊನಾಡಿಕೆ ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
2 hours ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
2 hours ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
2 hours ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
2 hours ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
3 hours ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?