Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಿಯಮ ಉಲ್ಲಂಘಿಸಿದ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಬೇಕು, ಇಲ್ಲದಿದ್ದರೆ ಹೋರಾಟ: ಡಿಕೆಶಿ

Public TV
Last updated: January 20, 2022 8:14 pm
Public TV
Share
3 Min Read
DK SHIVAKUMAR 2
SHARE

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಸ್ಪಂದಿಸಿದ್ದು, ಈಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಜರುಗಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

bjp meeting2

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದ ಅವರು, ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರವಾಗಿ ನಾನು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನಮ್ಮ ಪಕ್ಷದ ನಿಯೋಗ ಅವರನ್ನು ಭೇಟಿ ಮಾಡಿತ್ತು. ಈ ವಿಚಾರವಾಗಿ ಇಂದು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳು ಕ್ರಮ ಕ್ರಮೈಗೊಳ್ಳದಿದ್ದರೆ, ಅವರ ವಿರುದ್ಧ ಹೋರಾಟ ಮಾಡಲು ಕಾರ್ಯತಂತ್ರ ರೂಪಿಸುತ್ತೇವೆ. ಕೇವಲ ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಆಡಳಿತ ಪಕ್ಷದವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ, ನಾವು ಸುಮ್ಮನೆ ಕೂರುವುದಿಲ್ಲ. ನಾವು ಏನು ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ.  ಇದನ್ನೂ ಓದಿ: ಜನರಿಗೆ ಸಹಾಯವಾಗುವ ನಿರ್ಧಾರ ನಾಳೆ ಪ್ರಕಟ : ಅಶೋಕ್

ಈ ವಿಚಾರವಾಗಿ ಸಿದ್ದರಾಮಯ್ಯ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಮೈಸೂರಿನಲ್ಲಿ ಇದ್ದರು. ನಾನು ಕೂಡ ಊರಲ್ಲಿ ಇರಲಿಲ್ಲ. ಮುಖ್ಯಮಂತ್ರಿಗಳು ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇವೆ. ಮುಖ್ಯ ಕಾರ್ಯದರ್ಶಿಗಳು ಕೂಡ ಕೋವಿಡ್ ನಿಯಮ ವಿರುದ್ಧವಾಗಿ ನಡೆದುಕೊಂಡ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಈ ಇಬ್ಬರೂ ಕ್ರಮಕ್ಕೆ ಆದೇಶಿಸಿದ್ದು, ಈಗ ಪ್ರಕರಣ ದಾಖಲಿಸುವುದು ಉಪ ಆಯುಕ್ತರುಗಳಿಗೆ ಬಿಟ್ಟ ವಿಚಾರ. ಅವರ ನಡೆ ನೋಡಿ, ಅವರ ವಿರುದ್ಧ ಹೇಗೆ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ.  ಇದನ್ನೂ ಓದಿ: ರೇಣುಕಾಚಾರ್ಯ, ಯತ್ನಾಳ್ ಭೇಟಿ – ಸಚಿವ ಸ್ಥಾನದ ಬಗ್ಗೆ ಚರ್ಚೆ

ಕೇವಲ ಒಬ್ಬರ ಮೇಲೆ ಪ್ರಕರಣ ದಾಖಲಿಸುವುದಲ್ಲ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ, ನಿಯಮ ಉಲ್ಲಂಘಿಸಿರುವವರ ಪಟ್ಟಿ ತರಿಸಿಕೊಂಡು, ಆಯಾ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ. ಬಿಜೆಪಿಯಲ್ಲೇ ಕೋವಿಡ್ ನಿರ್ಬಂಧದ ಬಗ್ಗೆ ಗೊಂದಲ ಸೃಷ್ಟಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ. ಬದುಕಿರುವವರನ್ನು ಸಾಯಿಸುತ್ತಿದ್ದಾರೆ. ವ್ಯಾಪಾರ, ವಹಿವಾಟು ಏನಾಗಬೇಕು? ವಿದೇಶಗಳಲ್ಲಿ ಯಾವುದೇ ನಿರ್ಬಂಧ ಬೇಡ ಎಂದು ತೀರ್ಮಾನಿಸಿದ್ದಾರೆ. ನಾನು ಹೈದರಾಬಾದ್ ಗೆ ಹೋಗಿದ್ದೆ, ಅಲ್ಲಿ ಯಾವುದೇ ನಿರ್ಬಂಧವಿಲ್ಲ. ಸರ್ಕಾರ ಇಲ್ಲಿ ಯಾಕೆ ಜನಸಾಮಾನ್ಯರಿಗೆ ಈ ರೀತಿ ಸುಮ್ಮನೆ ತೊಂದರೆ ನೀಡುತ್ತಿದೆ? ಆರೋಗ್ಯದ ವಿಚಾರದಲ್ಲಿ ಅಗತ್ಯವಾದ ಕ್ರಮ ಕೈಗೊಳ್ಳಲಿ, ಆದರೆ ಅವರ ದಿನನಿತ್ಯದ ಬದುಕಿನ ಸಂಪಾದನೆ ಹಾಳು ಮಾಡುವುದೇಕೆ? ಬ್ಯಾಂಕ್ ನವರು ಅವರಿಗೆ ನೀಡಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತಾರಾ? ಅಥವಾ ಸರ್ಕಾರದವರು ಅವರ ಬಾಡಿಗೆಯನ್ನಾದರೂ ಮನ್ನಾ ಮಾಡುತ್ತಾರಾ? ವ್ಯಾಪಾರಸ್ಥರು, ಹೊಟೇಲ್ ಉದ್ಯಮದವರು ಏನಾಗಬೇಕು? ಹೊಟೇಲ್ ಕ್ಷೇತ್ರದವರು ಕೇಳುತ್ತಿರುವುದರಲ್ಲಿ ಅರ್ಥವಿದೆ ಎಂದರು.

ಯೂತ್ ಕಾಂಗ್ರೆಸ್ ನಲ್ಲಿ ಗಲಾಟೆ ನಡೆದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಗಲಾಟೆಗಳು ಆಗಿಲ್ಲ. ನಾನು ಆ ಹುಡುಗನ ಬಳಿ ಮಾತನಾಡಿ ಪರಿಶೀಲನೆ ನಡೆಸಿದ್ದು, ಯಾವುದೇ ಗಲಾಟೆ ನಡೆದಿಲ್ಲ. ಯಾರಾದರೂ ಕೆಲಸ ಮಾಡುತ್ತಿದ್ದಾರೆ ಎಂದರೆ ಅಂತಹವರ ವಿರುದ್ಧ ಈ ರೀತಿ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಈ ಘಟನೆ ಹಿಂದೆ ನಲಪಾಡ್ ಇಲ್ಲ, ಬೇರೆ ಯಾರೂ ಇಲ್ಲ. ರಾಜಕೀಯವಾಗಿ ಯಾರಾದರೂ ಶಿಸ್ತು ಉಲ್ಲಂಘಿಸಿದರೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಅವರ ವೈಯಕ್ತಿಕ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಟೆಸ್ಟ್‌ಗೆ ಕಳುಹಿಸಿ 22 ದಿನದ ನಂತರ ಬಂತು ಒಮಿಕ್ರಾನ್ ವರದಿ – ಅಷ್ಟರಲ್ಲಿ ಗುಣಮುಖಳಾಗಿ ಡಿಸ್ಚಾರ್ಜ್‌ ಆಗಿದ್ಲು ಯುವತಿ!

ಕೆಪಿಸಿಸಿ ಕಚೇರಿಗೆ ಬಾರದಂತೆ ಕಾರ್ಯಕರ್ತರಿಗೆ ಡಿಕೆಶಿ ಮನವಿ
ಮಾಜಿ ಎಂಎಲ್‍ಸಿ ಬೆಮೆಲ್ ಕಾಂತರಾಜು ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಕೊರೊನಾ ನಿಯಮಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರು ಯಾರೂ ಬರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಜವಾಬ್ದಾರಿಯುತ ಪಕ್ಷದ ಪ್ರತಿನಿಧಿಗಳಾಗಿ ಕೊರೊನಾ ನಿಯಮಗಳ ಪಾಲನೆ ನಮ್ಮೆಲ್ಲರ ಕರ್ತವ್ಯ. ಕಾರ್ಯಕರ್ತರು ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನನ್ನ ಮನವಿಗೆ ಸ್ಪಂದಿಸಬೇಕು. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರಾರೂ ಬರಕೂಡದು ಎಂದು ಮಾಧ್ಯಮ ಹೇಳಿಕೆ ಮೂಲಕ ಅವರು ತಿಳಿಸಿದ್ದಾರೆ.

TAGGED:bjpcongressCoronaDK Shivakumarಕಾಂಗ್ರೆಸ್ಕೊರೊನಾಡಿಕೆ ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
4 hours ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
4 hours ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
5 hours ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
5 hours ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
5 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?