Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್

Bengaluru City

ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್

Public TV
Last updated: August 26, 2021 5:42 pm
Public TV
Share
4 Min Read
DKSHI 1 1
SHARE

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದು ಯಾರೇ ಆಗಿರಲಿ ಅವರ ಮೇಲೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಿ ಎಂದು ಛೇಡಿಸಿದ್ದಾರೆ.

araga jnanendr

ಇಡೀ ವಿಶ್ವವೇ ನಮ್ಮನ್ನು ಗೌರವದಿಂದ ನೋಡುತ್ತಿದೆ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಇಲಾಖೆಯ ಮರ್ಯಾದೆ ಹಾಳು ಮಾಡಬಾರದು ಎಂದು ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದೆ. ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ. ಆರೋಪಿಗಳ ರಕ್ಷಣೆಗೆ ನಿಲ್ಲಬೇಡಿ ಎಂದು ನಾನು ವಿಧಾನಸಭೆ ಅಧಿವೇಶನದಲ್ಲೂ ಆಗ್ರಹಿಸಿದ್ದೆ. ಮಾಧ್ಯಮಗಳ ಮುಂದೆಯೂ ಹೇಳಿದ್ದೆ. ಆದರೆ ಈ ಸರ್ಕಾರ ಬೇಜವಾಬ್ದಾರಿ ಮೆರೆಯುತ್ತಿದೆ ಎಂದು ಟೀಕಿಸಿದರು.

ಈಗಿರುವ ಗೃಹ ಸಚಿವರ ಕ್ಷೇತ್ರದಲ್ಲಿ, ಬೆಂಗಳೂರಿನಲ್ಲಿ, ಮೈಸೂರಿನಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಈ ಹಿಂದೆ ಮಂತ್ರಿಯಾಗಿದ್ದವರ ಮೇಲೂ ಅತ್ಯಾಚಾರ ಆರೋಪ ಕೇಳಿಬಂದಿವೆ. ಮೈಸೂರಿನಲ್ಲಿ ಘಟನೆ ನಡೆದು 48 ಗಂಟೆಗಳಾಗಿವೆ. ಆದರೂ ಇದುವರೆಗೂ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವೂ ಆಗಿಲ್ಲ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಮತ್ತೊಂದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

DK SHIVAKUMAR

ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ ಎಂದು ನೂತನ ಗೃಹ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅವರನ್ನು ಯಾವ ಕಾಂಗ್ರೆಸಿಗರು ರೇಪ್ ಮಾಡಿದ್ದಾರೆ..?! ಗೃಹ ಸಚಿವರ ಮೇಲೆ ಯಾರು ರೇಪ್ ಮಾಡಿದ್ದಾರೋ, ಅದು ಯಾವುದೇ ನಾಯಕರಾಗಿರಲಿ, ಅವರ ಮೇಲೆ ಪೊಲೀಸರು 376 ಕಾಯ್ದೆ ಅನ್ವಯ ದೂರು ದಾಖಲಿಸಿ, ಬಂಧಿಸಲಿ ಎಂದು ನಾನು ಪೊಲೀಸ್ ಮಹಾ ನಿರ್ದೇಶಕರನ್ನು (ಡಿಜಿಪಿ) ಆಗ್ರಹಿಸುತ್ತಿದ್ದೇನೆ. ಅವರ ಬಾಯಲ್ಲಿ ರೇಪ್ ಎಂಬ ಪದ ಇಷ್ಟು ಸಲೀಸಾಗಿ ಬರುತ್ತಿರುವುದನ್ನು ನೋಡಿದರೆ ಅವರಿಗೆ ರೇಪ್ ಎಂಬ ಪದದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದು ಗೊತ್ತಾಗುತ್ತದೆ. ಈ ವಿಚಾರವಾಗಿ ನಾನು ಗೃಹ ಸಚಿವರಿಂದ ಯಾವುದೇ ಉತ್ತರ ನಿರೀಕ್ಷಿಸುವುದಿಲ್ಲ. ಅವರ ಪಕ್ಷದ ಎಲ್ಲ ನಾಯಕರೂ ಅವರ ಹೇಳಿಕೆಗೆ ಉತ್ತರಿಸಬೇಕು. ಕಾಂಗ್ರೆಸ್ ಗೃಹ ಸಚಿವರನ್ನೇ ರೇಪ್ ಮಾಡುತ್ತಿದೆ ಎನ್ನುವುದಾದರೇ ಇವರ ಆಡಳಿತ ಯಾವ ಹಂತಕ್ಕೆ ಬಂದು ನಿಂತಿದೆ ಎಂದು ಕುಟುಕಿದರು. ಇದನ್ನೂ ಓದಿ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

ಇವರಿಗೆ ನಾವು ಸಹಕಾರ ನೀಡಬೇಕಂತೆ. ಯಾವ ಸಹಕಾರ ನೀಡಬೇಕು? ಸರ್ಕಾರ ಎಸ್‍ಐಟಿ ತನಿಖಾ ತಂಡ ರಚಿಸಿದೆ. ಅತ್ಯಾಚಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರೋ ಪೊಲೀಸರು ಮರ್ಯಾದೆ ಕಳೆದುಕೊಂಡಿದ್ದಾರೆ. ಪೊಲೀಸರಿಗೆ ಇಂಥ ದುಸ್ಥಿತಿ ಬರಬಾರದಿತ್ತು. ಇದರಿಂದ ರಾಜ್ಯದ ಘನತೆಗೆ ಧಕ್ಕೆಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ನೋವು ವ್ಯಕ್ತಪಡಿಸಿದರು.

CongressFlags1

ಮೈಸೂರು ದುರ್ಘಟನೆಗೆ ಸಂಬಂಧಿಸಿದಂತೆ ಉಗ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ತನಿಖಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯಲ್ಲಿ ಎಚ್.ಎಂ ರೇವಣ್ಣ, ಶಾಸಕ ತನ್ವಿರ್ ಸೇಠ್, ರೂಪಾ ಶಶಿಧರ್, ಮಲ್ಲಜಮ್ಮ, ಮಾನಸ ಮಂಜುಳಾ, ಮಂಜುಳಾ ನಾಯ್ಡು ಅವರು ಇದ್ದಾರೆ. ಈ ಸಮಿತಿ ಕೂಡಲೇ ಮೈಸೂರಿಗೆ ಹೋಗಿ, ಪ್ರಕರಣದ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಇನ್ನು ಗೃಹ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಸಂತ್ರಸ್ಥೆಯ ಗುರುತನ್ನು ಬಹಿರಂಗಪಡಿಸಿದ್ದು, ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ದಾಖಲೆ ಸರಿಪಡಿಸಬೇಕು ಎಂದು ಶಿವಕುಮಾರ್ ಆಗ್ರಹಿಸಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

ಈ ಸರ್ಕಾರ ನಮ್ಮ ರಾಜ್ಯವನ್ನು ನೀಚ ಸಂಸ್ಕೃತಿಗೆ ತೆಗೆದುಕೊಂಡು ಹೋಗುತ್ತಿದ್ದು, ಇದನ್ನು ನಾವು ಖಂಡಿಸುತ್ತೇವೆ. ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಲು ಪೊಲೀಸರು ಕೆಲಸ ಮಾಡಬೇಕು. ಈ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ನಮ್ಮಲ್ಲಿ ಚಾಣಾಕ್ಷ ಪೊಲೀಸರಿದ್ದಾರೆ. ಅನೇಕ ಕ್ಲಿಷ್ಟ ಪ್ರಕರಣಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ್ದಾರೆ. ನನಗಿರುವ ಅಲ್ಪ ಪ್ರಮಾಣದ ಮಾಹಿತಿಯಲ್ಲಿ ರೇಪ್ ಆದ ಸಮಯದಲ್ಲಿ ಆ ಪ್ರದೇಶದ ಸುತ್ತಮುತ್ತಲಿನಲ್ಲಿರುವ ಮೊಬೈಲ್ ಟವರ್ ಮೂಲಕ ಯಾರ್ಯಾರು ಆ ಪ್ರದೇಶದಲ್ಲಿ ಇದ್ದರು ಎಂಬ ಜಾಡು ಹಿಡಿದರೆ ಈ ದುಷ್ಕೃತ್ಯ ಮಾಡಿದವರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಬಹುದು. ಆದರೆ 48 ಗಂಟೆಗಳಾದರೂ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಮಾಧ್ಯಮಗಳಲ್ಲಿ ಈ ವಿಚಾರ ಪ್ರಸ್ತಾಪವಾದ ನಂತರ ಸರ್ಕಾರ ಈ ವಿಚಾರವಾಗಿ ಕಣ್ಣು ಬಿಡಲಾರಂಭಿಸಿದೆ. ಇದು ಸರಕಾರದ ಅಸಡ್ಡೆಗೆ ಸಾಕ್ಷಿ ಎಂದು ಆರೋಪಿಸಿದರು.

DKSHI

ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮಾಜಿ ಸಚಿವರಾದ ಎಚ್.ಎಂ ರೇವಣ್ಣ, ಮೋಟಮ್ಮ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಹಿಳಾ ಹೋರಾಟಗಾರ್ತಿ ಮಂಜುಳಾ ನಾಯ್ಡು, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಸಂಚಾಲಕರಾದ ರಾಮಚಂದ್ರಪ್ಪ, ಸಲೀಂ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

TAGGED:Araga Jnanendrabengalurud k shivakumarKPCCPublic TVrapeಅರಗ ಜ್ಞಾನೇಂದ್ರಕೆಪಿಸಿಸಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರೇಪ್
Share This Article
Facebook Whatsapp Whatsapp Telegram

Cinema news

bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
yash 4
ರಾಕಿಂಗ್‌ ಸ್ಟಾರ್‌ ಯಶ್ ಈಗ ಶೋಧಿತ ವ್ಯಕ್ತಿ – ದಾಖಲೆಗಳು ವಶಕ್ಕೆ
Cinema Latest Main Post Sandalwood
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories

You Might Also Like

Ram Mohan Naidu IndiGo
Latest

ಕಠಿಣ ಕ್ರಮ ಕೈಗೊಳ್ಳುತ್ತೇವೆ: ಇಂಡಿಗೋ ಬಿಕ್ಕಟ್ಟಿನ ಬಗ್ಗೆ ನಾಗರಿಕ ವಿಮಾನಯಾನ ಸಚಿವ ರಿಯಾಕ್ಷನ್‌

Public TV
By Public TV
2 hours ago
01 3
Big Bulletin

ಬಿಗ್‌ ಬುಲೆಟಿನ್‌ 05 December 2025 ಭಾಗ-1

Public TV
By Public TV
2 hours ago
02 3
Big Bulletin

ಬಿಗ್‌ ಬುಲೆಟಿನ್‌ 05 December 2025 ಭಾಗ-2

Public TV
By Public TV
2 hours ago
03 3
Big Bulletin

ಬಿಗ್‌ ಬುಲೆಟಿನ್‌ 05 December 2025 ಭಾಗ-3

Public TV
By Public TV
2 hours ago
lokayukta inspector panchakshari salimath
Dharwad

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಧಗಧಗ; ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಸಜೀವ ದಹನ

Public TV
By Public TV
2 hours ago
IndiGo CEO Pieter Elbers
Latest

ಡಿ.15 ರೊಳಗೆ ಇಂಡಿಗೋ ವಿಮಾನಗಳ ಸಂಚಾರ ಸಹಜ ಸ್ಥಿತಿಗೆ: ಸಿಇಒ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?