ಬೆಂಗಳೂರು: ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು (Siddaramaiah) ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ.
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ… pic.twitter.com/DLEGN94UWt
— DK Shivakumar (@DKShivakumar) May 29, 2026
ಸಿಎಂ ಹುದ್ದೆಗೆ ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೆ ಎಕ್ಸ್ ಪೋಸ್ಟ್ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Exclusive | ಸಿದ್ದು ಸಂಪುಟದ 17-20 ಸಚಿವರಿಗೆ ಕೊಕ್? ಯಾರಿಗೆ ಸಿಗಲಿದೆ ಹೈಕಮಾಂಡ್ ‘ಸೇಫ್’ ಕಾರ್ಡ್?
ಡಿಕೆಶಿ ಎಕ್ಸ್ ಸಂದೇಶದಲ್ಲಿ ಏನಿದೆ?
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.

ಮೈಸೂರು (Mysuru) ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ. ಇದನ್ನೂ ಓದಿ: ಸಿದ್ದರಾಮಯ್ಯ, ಖರ್ಗೆ ಅಂಥವರ ಆಶೀರ್ವಾದ ಇಲ್ಲದೇ ಕಾಂಗ್ರೆಸ್ ಪಕ್ಷ ಬೆಳೆಯೋಕೆ ಸಾಧ್ಯನೇ ಇಲ್ಲ: ಬಾಲಕೃಷ್ಣ
ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ.
ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
