ರಾಮನಗರ: 8 ರಿಂದ 10 ಮಂದಿ ಬಿಜೆಪಿ ಸಂಸದರು ಮುಂದಿನ ಬಾರಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಬಿಜೆಪಿಯಲ್ಲಿ ವಾಯ್ಸ್ ಇಲ್ಲ, ಅವಮಾನ ಆಗಿದೆ ಎನ್ನುತ್ತಿದ್ದಾರೆ ಎಂದು ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೊಸ ಬಾಂಬ್ ಸಿಡಿಸಿದರು.
ಮೇಕೆದಾಟು ಬಗ್ಗೆ ಬಿಜೆಪಿ (BJP) ಸಂಸದರು ಧ್ವನಿ ಎತ್ತುತ್ತಿಲ್ಲ ಎಂಬ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿ ಸಂಸದರೇ ಚುನಾವಣೆಗೆ ನಿಲ್ಲಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಅವಮಾನ ಆಗಿದೆ, ಹಾಗಾಗಿ ಚುನಾವಣೆಗೆ (Election) ನಿಲ್ಲಲ್ಲ ಅಂತಿದ್ದಾರೆ. ಅವರು ಯಾರು ಎಂಬುದನ್ನು ಮುಂದೆ ಹೇಳುತ್ತೇನೆ. ಪಟ್ಟಿಯನ್ನೇ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.
ನಾನು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ. ಇವತ್ತು ಬೆಳಗ್ಗೆಯೂ ಸಹ ಮೀಟಿಂಗ್ ಮಾಡಿದ್ದೇನೆ. ಕಾವೇರಿ ಹೆಚ್ಚುವರಿ ನೀರನ್ನು ನಾವು ಪಡೆದುಕೊಳ್ಳಬೇಕು. ಇದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ರೈತರ ನೀರಿನ ಬವಣೆ ತೀರಲಿದೆ. ಸುಮಾರು 400 ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಈಗಾಗಲೇ ತಮಿಳುನಾಡಿನವರು ನಮ್ಮ ಅನುಮತಿಯಿಲ್ಲದೇ ಕೆಲ ಪ್ರಾಜೆಕ್ಟ್ಸ್ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಈಗ ಜಾಗರೂಕರಾಗಬೇಕು. ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಬೇಕು. ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ನಮ್ಮ ಕಾಂಗ್ರೆಸ್ (Congress) ಪಕ್ಷ ಕೂಡ ಗಮನಹರಿಸಲಿದೆ. ಕೇಂದ್ರ ಸರ್ಕಾರ ಯೋಜನೆಯನ್ನು ಕ್ಲಿಯರ್ ಮಾಡಬಹುದಿತ್ತು. ಆದರೆ ಇದರ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ. ಆದರೆ ನಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಸಹ ಇರಲಿದೆ ಎಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ
2023ಕ್ಕೆ ಬಿಜೆಪಿ ಸರ್ಕಾರ ಬಂದ್ರೆ ಬ್ರಾಹ್ಮಣರು ಸಿಎಂ ಆಗ್ತಾರೆ ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಭವಿಷ್ಯ ಗೊತ್ತಿಲ್ಲ, ಅವರ ಆಡಳಿತ ಭವಿಷ್ಯವೂ ಗೊತ್ತಿಲ್ಲ, ನನಗೆ ನಮ್ಮ ಕಾಂಗ್ರೆಸ್ ಪಕ್ಷದ ಭವಿಷ್ಯ ಮಾತ್ರ ಗೊತ್ತು. ಸಾಮೂಹಿಕ ನಾಯಕತ್ವದಲ್ಲಿ ನಾವು ಚುನಾವಣೆ ನಡೆಸುತ್ತೇವೆ. ನಮ್ಮ ಕಾಲ ಮೇಲೆ ಸರ್ಕಾರ ರಚನೆ ಮಾಡಿ ಒಳ್ಳೆ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k