ಬೆಳಗಾವಿ: ಯಾರೋ ತಲೆಕೆಟ್ಟವರು ಮಾತನಾಡಿದ್ದಕ್ಕೆ ನಾನು ಉತ್ತರ ಕೊಡೋಕೆ ಹೋಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರೋಕ್ಷವಾಗಿ ಪಕ್ಷೇತರ ಎಂಎಲ್ ಸಿ ಲಖನ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.
ಗೋವಾದ ಪಣಜಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೆಬ್ರವರಿ 14 ರಂದು ಗೋವಾ ಚುನಾವಣೆ ಇದೆ. ಈ ನಿಟ್ಟಿನಲ್ಲಿ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸೇರಿ ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸಂಪುಟ ವಿಸ್ತರಣೆ ಅವರ ಸರ್ಕಾರಕ್ಕೆ ಬಿಟ್ಟಿದ್ದು, ಮತ್ತು ಅವರ ಪಕ್ಷಕ್ಕೆ ಬಿಟ್ಟಿದ್ದಾಗಿದೆ. ಯಾರನ್ನ ಬೇಕಾದರೂ ತಗೊಳ್ಳಲಿ, ಬಿಡಲಿ ಆದರೆ ದಿನಕ್ಕೊಬ್ಬರು ಒಂದೊಂದು ಹೇಳಿಕೆ ಕೊಡುತ್ತಿದ್ದಾರೆ. ಸಿಎಂಗೆ ಆಗಲಿ ಅವರ ಪಕ್ಷದ ಅಧ್ಯಕ್ಷರಿಗಾಗಲಿ ಕಂಟ್ರೋಲ್ ಮಾಡಲಾಗುತ್ತಿಲ್ಲ. ರಾಜ್ಯ ನಾಯಕರು ಬಿಡಿ ಬಿಜೆಪಿಯ ಕೇಂದ್ರದ ನಾಯಕರಿಂದಲ್ಲೆ ಕಂಟ್ರೋಲ್ ಮಾಡಲಾಗುತ್ತಿಲ್ಲ ಎಂದು ಆಢಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್