Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಕೆಶಿ

Bengaluru City

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಕೆಶಿ

Public TV
Last updated: April 4, 2025 3:27 pm
Public TV
Share
7 Min Read
Siddaramaiah
SHARE

– ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದಂತೆ 5,300 ಕೋಟಿ ಅನುದಾನ ಬಿಡುಗಡೆಗೆ ಒತ್ತಾಯ

ನವದೆಹಲಿ: ಆಲಮಟ್ಟಿ ಅಣೆಕಟ್ಟು (Almatti Reservoir) ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ (Krishna River) ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಮುಖ್ಯಮಂತ್ರಿಗಳಾದ ಶ್ರೀ @siddaramaiah, ಕೇಂದ್ರ ಸಚಿವರಾದ @VSOMANNA_BJP, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರ ಜೊತೆಯಾಗಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ @CRPaatil ಅವರೊಂದಿಗೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ನಡೆಸಿದ ಸಭೆಯ ಪ್ರಮುಖಾಂಶಗಳು. pic.twitter.com/EwALtCIWbC

— DK Shivakumar (@DKShivakumar) April 4, 2025

ನವದೆಹಲಿಯ ಕರ್ನಾಟಕ ಭವನ-1 ʻಕಾವೇರಿʼಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಶುಕ್ರವಾರ ಮಾತನಾಡಿದರು. ಇದನ್ನೂ ಓದಿ: ʼರಾಜ್ಯʼದಲ್ಲೂ ಗೆದ್ದ ಮೋದಿ ಸರ್ಕಾರ – ವಕ್ಫ್ ಬಿಲ್ ಜಾರಿಗೆ ಇನ್ನೊಂದೇ ಹೆಜ್ಜೆ ಮಾತ್ರ ಬಾಕಿ

ಕೇಂದ್ರ ಜಲಶಕ್ತಿ ಸಚಿವರಾದ ಸಿ‌.ಆರ್ ಪಾಟೀಲ್ (CR Paatil) ಅವರನ್ನು ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜೊತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಆಗಿರೋದು ಇತಿಹಾಸದಲ್ಲಿ ಕೆಟ್ಟ ದಿನ- ಬೋಸರಾಜು

ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಸರ್ಕಾರ‌‌ ಕೆಲಸ ಮಾಡುತ್ತಿದೆ. ಕೇಂದ್ರದ ಕ್ಯಾಬಿನೆಟ್ ಮುಂದೆ ಈ ವಿಚಾರ ತೆಗೆದುಕೊಡು ಹೋಗಲಾಗಿದೆ ಎಂದು ಹೇಳಿದ್ದಾರೆ. ಮೇಕೆದಾಟು (Mekedatu Project) ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ‌ಕೋರ್ಟ್ ಕರ್ನಾಟಕದ‌ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ‌‌ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.

ಕಳಸಾ ಬಂಡೂರಿ ಕಾಮಗಾರಿಗೆ ಟೆಂಡರ್
ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಕಾವೇರಿ, ಕೃಷ್ಣಾ, ಗೋದಾವರಿ ನದಿ ಜೋಡಣೆ ಸಂಬಂಧ ನಮ್ಮ ರಾಜ್ಯದ ವಾದವನ್ನು ನಾನು ಹಾಗೂ ಮುಖ್ಯಮಂತ್ರಿಯವರು ಸಲ್ಲಿಸಿದ್ದೇವೆ. ಇದರ ಬಗ್ಗೆ ಧನಾತ್ಮಕವಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಭೇಟಿ ಫಲದಾಯಕವಾಗಿದೆ ಎನ್ನುವುದು ಸಂತಸದ ವಿಚಾರ. ಕೃಷ್ಣಾ ನ್ಯಾಯಾಧೀಕರಣ ವಿಚಾರ ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಇರುವ ಬಗ್ಗೆ ಕೇಳಿದಾಗ, ಶೆಡ್ಯೂಲ್ 524ಕ್ಕೆ ಸೇರಿದ ವಿಚಾರವಾದ ಕಾರಣ ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಆಂತರಿಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು.

ಕಾಲುವೆ ನೀರು ಬಿಡುವಂತೆ ಕೋರ್ಟ್ ಆದೇಶದ ಬಗ್ಗೆ ಕೇಳಿದಾಗ, ಕಾಲುವೆಗಳಿಗೆ ಕೃಷ್ಣ ನದಿ ನೀರನ್ನು ಏಕಾಏಕಿ ಬಿಡಲು ಆಗುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಾಲಯ ಕೂಡ ಆದೇಶ ನೀಡಲು ಬರುವುದಿಲ್ಲ. ಏಕ ಸದಸ್ಯ ಪೀಠ ನೀರು ಬಿಡುವಂತೆ ಹೇಳಿತ್ತು. ದ್ವಿಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿದೆ. ಕಾಲುವೆಗಳಿಗೆ ನೀರು ಬಿಡುವ ಬಗ್ಗೆ ನಾನೇ ತಾಂತ್ರಿಕ ವರದಿ ತರಿಸಿ ಕೊಳ್ಳುವವನಿದ್ದೆ. ಯಾದಗಿರಿ ಸೇರಿದಂತೆ ಆ ಭಾಗದ ಶಾಸಕರು ರೈತರ 2ನೇ ಬೆಳೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಈ ಮಧ್ಯೆ ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.

ರೈತರ ಪಾಲಿನ ನೀರು ಬಿಡುತ್ತೇವೆ
ಕಾಲುವೆಗೆ ನೀರುಬಿಟ್ಟ ಸಮಯದಲ್ಲಿ ಮಧ್ಯದಲ್ಲಿಯೇ ಪಂಪ್ ಗಳನ್ನು ಬಿಟ್ಟು ನೀರು ಎತ್ತಲಾಗುತ್ತದೆ. ಇದಕ್ಕೆಲ್ಲಾ ಅವಕಾಶ ನೀಡಬಾರದು ಎಂದು ಹೇಳಲಾಗಿದೆ. ರೈತರ ಪಾಲಿನ ನೀರು ನಾವು ನೀಡುತ್ತೇವೆ. ಆದರೆ ಕಾಲುವೆಯ ಕೊನೇ ಭಾಗಕ್ಕೆ ನೀರು ತಲುಪಬೇಕಲ್ಲವೇ? ಇದು ಆಗದೇ ಮಧ್ಯದಲ್ಲಿಯೇ ನೀರು ಎಳೆಯಲಾಗುತ್ತಿದೆ. ಹಾಗಾಗಿ ಕಾಲುವೆಯಿಂದ ನೀರು ಎತ್ತುವುದನ್ನು ತಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿದ್ಯುತ್ ಸಂಪರ್ಕಗಳನ್ನು ತಪ್ಪಿಸಿ ಹಗಲು ಹಾಗೂ ರಾತ್ರಿ ವೇಳೆ ನೀರನ್ನು ರಕ್ಷಣೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ರೈತರು 2ನೇ ಬೆಳೆ ಹಾಕಿಕೊಂಡಿದ್ದಾರೆ. ಆದರೆ ಕುಡಿಯುವ ನೀರು ನಮ್ಮ ಮೊದಲ ಆದ್ಯತೆ ಎಂದು ಹೇಳಿದರು.

ನಿರುದ್ಯೋಗಿಗಳಿಗೆ ಪರಿಷತ್ ಸ್ಥಾನ ಕೊಟ್ಟಂತೆ ಆಗಬಾರದು
ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ ಬಗ್ಗೆ ಮುಖ್ಯಮಂತ್ರಿಗಳು ನಾನು ಹೈಕಮಾಂಡ್ ಬಳಿ ಮಾತನಾಡಿದ್ದೇವೆ‌. ಹೈಕಮಾಂಡ್ ಇಬ್ಬರನ್ನು ಸಂಪರ್ಕಿಸುತ್ತದೆ ಎಂದು ಮಾಹಿತಿ ನೀಡಿದರು.

ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಬಗ್ಗೆ ಪ್ರತಿ ಬಾರಿ ದೆಹಲಿಗೆ ಬಂದಾಗಲೂ ಚರ್ಚೆ ಮಾಡುವ ಬಗ್ಗೆ ಕೇಳಿದಾಗ, ಇದು ಮೋದಿ ಅವರ ನಾಯಕತ್ವದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರ‌. ನಿರ್ಮಲಾ ಸೀತಾರಾಮನ್ ಅವರು ಭದ್ರಾ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ನಾವು ಗುತ್ತಿಗೆದಾರರಿಗೆ ಹಣ ನೀಡಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ಮೇಕೆದಾಟು ಬಗ್ಗೆ ಕೆಲಸಗಳೇ ನಡೆಯುತ್ತಿಲ್ಲ ಎಂದು ಕೇಳಿದಾಗ, ಈಗಾಗಲೇ ರಾಜ್ಯದಲ್ಲಿ ಕಚೇರಿಯನ್ನೂ ತೆರೆಯಲಾಗಿದೆ. ಸ್ಥಳ ಗುರುತಿಸುವಿಕೆ ಸೇರಿದಂತೆ ಅನೇಕ ಕೆಲಸಗಳು ನಡೆಯುತ್ತಿದೆ. ದೆಹಲಿಯಲ್ಲೂ ಈ ಬಗ್ಗೆ ಕೆಲಸ ಪ್ರಾರಂಭ ಮಾಡಲಾಗುವುದು ಎಂದರು‌. ಇದನ್ನೂ ಓದಿ: ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!

ಬಿಜೆಪಿಗಿಂತ ಕಡಿಮೆ ಬೆಲೆ ಏರಿಕೆ ಮಾಡಿದ್ದೇವೆ
ಬೆಲೆಏರಿಕೆ ವಿರುದ್ಧ ಬಿಜೆಪಿಯವರಿಂದ ಸಿಎಂ ಮನೆ ಮುತ್ತಿಗೆ ಬಗ್ಗೆ ಕೇಳಿದಾಗ, ಬಿಜೆಪಿಯವರ ಕಾಲದಲ್ಲಿ ಪೆಟ್ರೋಲ್‌, ಡೀಸೆಲ್, ಅಡುಗೆ ಎಣ್ಣೆಯ ಬೆಲೆ ಏರಿಕೆಯಾದಾಗ ಏಕೆ ಮನೆ ಮುತ್ತಿಗೆ ಮಾಡಿಕೊಳ್ಳಲಿಲ್ಲ? ನಾವು 100 ನಾಟ್ ಔಟ್ ಎನ್ನುವ ಹೋರಾಟ ಮಾಡಿದ್ದೆವು. ಕಬ್ಬಿಣ, ಉಕ್ಕು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಎಲ್ಲವೂ ಹೆಚ್ಚಾಯಿತು. ಕಸದ ಸಂಗ್ರಹ ಶುಲ್ಕಕ್ಕೆ ಆದೇಶ ನೀಡಿದವರೇ ಬಿಜೆಪಿಯವರು. ನಾನು ಅವರು ಮಾಡಿದ ಬೆಲೆಗಿಂತ ಕಡಿಮೆ ಮಾಡಿದ್ದೇನೆ. ದೊಡ್ಡದಾಗಿ ಹಾಕಬೇಕಾಗಿತ್ತು. ಹಳೆಯದನ್ನು ಬಿಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹಾಗೂ ನೀವು ವರಿಷ್ಠರನ್ನು ಭೇಟಿಯಾಗುತ್ತಾ ಇದ್ದೀರಿ. ಸಚಿವರ ದಂಡು ಸಹ ದೆಹಲಿಯಲ್ಲಿದೆ. ಸರ್ಕಾರದಲ್ಲಿ ಬದಲಾವಣೆಯಾಗಲಿದೆಯೇ ಎಂದು ಕೇಳಿದಾಗ, ಪಕ್ಷದ ನಾಯಕರನ್ನು ನಾವು ಭೇಟಿಯಾಗುವುದು ಸಾಮಾನ್ಯ. ನಾನು ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ಭವನದಲ್ಲಿಯೇ ಭೇಟಿ ಮಾಡಲಾಯಿತು ಎಂದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದಾಗ, ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.

ಕಳೆದ ಹಲವಾರು ದಿನಗಳಿಂದ ಸೋನಿಯಾ ಗಾಂಧಿ ಅವರನ್ನು ಶಿವಕುಮಾರ್ ಅವರು ಭೇಟಿಯಾಗಿಲ್ಲ. ಭೇಟಿಯಾದರೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ನಿಶ್ಚಿತ ಎನ್ನುವ ಮಾತುಗಳ ಬಗ್ಗೆ ಕೇಳಿದಾಗ, ಭೇಟಿಯಾಗಿಲ್ಲ ಎಂದು ಹೇಳಿದವರು ಯಾರು? ಸಾಕ್ಷಿಗೆ ಫೋಟೊಗಳನ್ನು ತೋರಿಸಲೇ ಎಂದಾಗ ಅಧಿಕೃತವಾಗಿ ಫೋಟೊಗಳು ದೊರೆತಿಲ್ಲ ಎಂದು ಮರುಪ್ರಶ್ನಿಸಿದಾಗ, ನಿಮಗೆ ಏಕೆ ತೋರಿಸಬೇಕು? ನನಗೆ ಬೇಕಾಗಿದ್ದು ಬಿಡುಗಡೆ ಮಾಡಲಾಗುವುದು, ಬೇಡದ್ದು ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಈಗ ಬೇಕಿದೆ ಹನುಮನ ಶ್ರೀರಕ್ಷೆ – ನಿತ್ಯ ಹನುಮಾನ್ ಚಾಲಿಸ ಪಠಿಸುತ್ತಿರೋ ಪ್ರಜ್ವಲ್ ರೇವಣ್ಣ

ಡಿಎಂಕೆ ಜೊತೆ ರಾಜಕೀಯ ಉದ್ದೇಶದ ಮೈತ್ರಿ
ನೀವು ಡಿಎಂಕೆ ಜೊತೆ ಉತ್ತಮ ಸಖ್ಯ ಹೊಂದಿದ್ದೀರಿ ಎನ್ನುವ ಬಗ್ಗೆ ಕೇಳಿದಾಗ, ಇದು ಕೇವಲ ರಾಜಕೀಯ ಉದ್ದೇಶದ ಮೈತ್ರಿ. ಒಟ್ಟಿಗೆ ಕೆಲಸ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು. ಬಳಿಕ ತಮಿಳುನಾಡಿಗೆ ಶಿವಕುಮಾರ್ ಅವರು ಹೆಚ್ಚು ಭೇಟಿ ನೀಡುತ್ತಿದ್ದಾರೆ. ಇದರಿಂದ ನೀರಿನ ಸಮಸ್ಯೆ ಬಗೆಹರಿಯಲಿದೆಯೇ? ಎಂಬ ಬಿಜೆಪಿಯವರ ಹೇಳಿಕೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರ ರಾಜಕಾರಣ ಅವರು ಮಾಡುತ್ತಾರೆ. ನಮ್ಮ ರಾಜಕಾರಣ ನಾವು ಮಾಡುತ್ತೇವೆ. ಅವರ ರಕ್ಷಣೆ ಅವರು ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಹಿತವನ್ನು ನಾವು ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ನಿಯೋಗಕ್ಕೆ ಸಂಸದ ತುಕಾರಾಂ ನೇಮಕ
ಸಂಸತ್ ಕ್ಷೇತ್ರಗಳ ಮರುವಿಂಗಡಣೆ ವಿರುದ್ಧದ ಹೋರಾಟದ ಬೆಳವಣಿಗೆಯ ಬಗ್ಗೆ ಕೇಳಿದಾಗ, ಕ್ಷೇತ್ರ ಮರುವಿಂಗಡಣೆ ಹೋರಾಟದ ನಿಯೋಗಕ್ಕೆ ಹೈಕಮಾಂಡ್ ಸೂಚನೆಯಂತೆ ನಮ್ಮ ಕರ್ನಾಟಕದಿಂದ ಸಂಸದರಾದ ತುಕಾರಾಂ ಅವರನ್ನು ನೇಮಿಸಲಾಗಿದೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಜುಲೈಯೊಳಗೆ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತ

ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಎಸ್, ಟಿಡಿಪಿ, ಚಂದ್ರಬಾಬು ನಾಯ್ಡು, ದೇವೇಗೌಡರು ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, ಎನ್‌ಡಿಎ ಮೈತ್ರಿಯಲ್ಲಿ ಇರುವ ಕಾರಣ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಸಂಪುಟ ಪುನಾರಚನೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಮುಖ್ಯಮಂತ್ರಿಯವರನ್ನು ಕೇಳಬೇಕು ಎಂದರು. ಇನ್ನೂ ಬಿಜೆಪಿ ಕಾರ್ಯಕರ್ತ ಪೊನ್ನಣ್ಣ ಅವರ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದಾಗ, ಇದರ ಬಗ್ಗೆ ಮಾಹಿತಿಯಿಲ್ಲ, ತಿಳಿದುಕೊಂಡು ಹೇಳುತ್ತೇನೆ ಎಂದರು.

TAGGED:Almatti ReservoirbjpcongressDK Shivakumarmekedatu projectಆಲಮಟ್ಟಿ ಜಲಾಶಯಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಮೇಕೆದಾಟು ಯೋಜನೆ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
4 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
5 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
5 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
5 hours ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?