ಬೆಂಗಳೂರು: ಮೈತ್ರಿ ಸರ್ಕಾರ ಶಾಸಕರು ರಾಜೀನಾಮೆ ನೀಡಿದ್ದು, ಅವರ ಮನವೊಲಿಕೆ ಮಾಡುವ ಕಾರ್ಯವನ್ನು ಮಾಡುತ್ತವೆ. ನಾವು ಎಲ್ಲಾ ತ್ಯಾಗಕ್ಕೂ ಸಿದ್ಧವಾಗಿರುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ನಿಯಮಗಳಿವೆ. ಅದರಂತೆ ಮುಂದಿನ ಕ್ರಿಯೆ ನಡೆಯುತ್ತದೆ. ಆದರೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಬಿಜೆಪಿಯವರು ಮೌನವಹಿಸಿದ್ದಾರೆ. ಆದರೆ ಅವರು ಎಷ್ಟು ಹಣವನ್ನು ಡೆವಲಪರ್ಸ್ ಹಾಗೂ ಗುತ್ತಿಗೆದಾರರಿಂದ ವಸೂಲಿ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಬಾಂಬ್ ಸಿಡಿಸಿದರು.
ರಾಜೀನಾಮೆ ನೀಡಿರುವ ಶಾಸಕರಲ್ಲಿ ಕೆಲ ಆತ್ಮೀಯರು ಇದ್ದಾರೆ. ಅವರೊಂದಿಗೆ ಮಾತನಾಡಿದ್ದೆನೆ. ಅವರು ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡಿದ್ದರೂ ಕೂಡ ನನ್ನ ಬಳಿ ಮಾತನಾಡಿದ್ದಾರೆ. ಎಷ್ಟೋ ಶಾಸಕರು ಹೋಗಿದ್ದಾರೆ ಬಂದಿದ್ದಾರೆ ಎಂದು ಶಾಸಕರ ಮನವೊಲಿಸುವ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ಹೋಗುವವರು ಹೋಗುತ್ತಾರೆ ಅವರ್ನು ಹಿಡಿದುಕೊಳ್ಳಲು ಆಗುವುದಿಲ್ಲ. ನನ್ನ ಬಂಡಾಯ ಶಮನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಕಾದು ನೋಡಿ ಎಂದರು.