Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

Districts

ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

Public TV
Last updated: October 11, 2025 8:43 am
Public TV
Share
3 Min Read
DK Shivakumar 1
SHARE

– ನ್ಯಾಯಾಲಯದ ತೀರ್ಪಿನ ನಂತರ ಕಸ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳ ಪ್ರಕ್ರಿಯೆ ಆರಂಭ
– ಪಾಲಿಕೆಗಳ ವತಿಯಿಂದಲೇ ಜಿಬಿಎಯು ಕಸ ವಿಲೇವಾರಿ, ಮೇಲ್ವಿಚಾರಣೆ

ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಶನಿವಾರ ಗುಡ್‌ನ್ಯೂಸ್‌ ಕೊಡ್ತಾರಾ ಡಿಕೆಶಿ – ಎ-ಖಾತಾ ವಿತರಣೆ ಬಗ್ಗೆ ಸುಳಿವು ಕೊಟ್ಟ ಡಿಸಿಎಂ

ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ, ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ ಎಂದು ತಿಳಿಸಿದರು. ಇದನ್ನೂ ಓದಿ: ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ.ಶ್ರೀನಿವಾಸ್ ಅವರು ಕೇಳಿದಾಗ, ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಈ ವಿಚಾರ ನ್ಯಾಯಾಲಯದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದ್ದು, ನಂತರ ಈ ಕಾರ್ಯ ಮಾಡಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ ಎಂದು ಹೇಳಿದರು.

ಸಂಪೂರ್ಣ ಆನೇಕಲ್ ಜಿಬಿಎ ವ್ಯಾಪ್ತಿಗೆ ಸೇರಿಸುವುದು ಕಷ್ಟ
ಆನೇಕಲ್ ಶಾಸಕರು ತಮ್ಮ ಪ್ರದೇಶವನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈಗ ಘೋಷಣೆ ಆಗಿರುವ ಜಿಬಿಎ ವ್ಯಾಪ್ತಿಯಲ್ಲಿ ಮೊದಲು ಚುನಾವಣೆ ಆಗಲಿದೆ. ನಂತರ ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈ ಹಾಕಲಾಗುವುದು. ಈಗ ಜಿಬಿಎ ವ್ಯಾಪ್ತಿಗೆ ಸೇರಿಸಿದರೆ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು ಪಾಲಿಕೆ ಸದಸ್ಯರಾಗುತ್ತಾರೆ. ಇನ್ನು ಅಲ್ಲಿನ ಜನರು ಕೂಡ ಬೆಂಗಳೂರಿನವರಂತೆ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಇಡೀ ಆನೇಕಲ್ ತಾಲೂಕನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿದರೆ 110 ಹಳ್ಳಿಗಳಿಗೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಯಾವ ಪ್ರದೇಶ ನಗರದಂತೆ ಅಭಿವೃದ್ಧಿಯಾಗಿದೆಯೋ ಆ ಪ್ರದೇಶಗಳನ್ನು ಮಾತ್ರ ಜಿಬಿಎ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳಿಗೆ ಶೀಘ್ರವೇ ವಾಹನ ವ್ಯವಸ್ಥೆ
ಪರಿಷತ್ ಸದಸ್ಯ ಗೋವಿಂದರಾಜು ಅವರು ಬೀದಿ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಸುದೀರ್ಘ ಚರ್ಚೆ ಮಾಡಿದ್ದು, ಬೀದಿ ವ್ಯಾಪಾರಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದೇವೆ. 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿಯಾಗಿದ್ದು, ಅವರಿಗೆ ನಾಲ್ಕು ರೀತಿಯ ವಾಹನ ನೀಡಲು ಸಿದ್ಧತೆ ಮಾಡುತ್ತಿದ್ದೇವೆ. ಈ ವಾಹನಗಳಲ್ಲಿ ಅವರು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಅನಾಥ ವಾಹನಗಳನ್ನು ನಗರದ ಹೊರಗೆ ಸ್ಥಳಾಂತರಿಸಬೇಕು
ಶಾಸಕ ರಿಜ್ವಾನ್ ಅರ್ಷದ್ ಅವರು ಬೆಂಗಳೂರಿನಲ್ಲಿ ಅನಾಥ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ನಗರದ ಹೊರಗೆ 10 ಎಕ್ರೆ ಪ್ರದೇಶ ಗುರುತಿಸಿ, ಅಲ್ಲಿ ಈ ವಾಹನಗಳನ್ನು ಸ್ಥಳಾಂತರ ಮಾಡಬೇಕು ಎಂದು ವಿಚಾರ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಜಾಗಗಳನ್ನು ಗುರುತಿಸಿ ಅಲ್ಲಿ ಕಾಂಪೌಂಡ್ ಹಾಕಿ ವಾಹನಗಳನ್ನು ಸ್ಥಳಾಂತರಿಸಲಾಗುವುದು. ಆಗ ಆ ವಾಹನಗಳನ್ನು ಬೇರೆಯವರು ಕದಿಯಲು ಆಗುವುದಿಲ್ಲ ಎಂದರು.

TAGGED:bengaluruDK ShivakumarGBAGBA Meetingಜಿಬಿಎಜಿಬಿಎ ಮೀಟಿಂಗ್‌ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
2 hours ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
2 hours ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
2 hours ago
bolero accident chitradurga
Chitradurga

ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
3 hours ago
kea
Bengaluru City

ಎಲ್ಲ 24 ಪಶು ವೈದ್ಯಕೀಯ ಸೀಟೂ ಹಂಚಿಕೆ: ಕೆಇಎ

Public TV
By Public TV
3 hours ago
modi prithviraj chavan
Latest

ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?