Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದ್ದೀರಾ, ನಿಮ್ಗೆ ಒಳ್ಳೆಯದಾಗಲ್ಲ: ಡಿಕೆಶಿ ಕಣ್ಣೀರು

Public TV
Last updated: January 11, 2022 10:35 am
Public TV
Share
3 Min Read
DKS 2 2
SHARE

ರಾಮನಗರ: ನಾನು ಯಾರಿಗಾದರೂ ಅನ್ಯಾಯ ಮಾಡಿದ್ದೀನಾ, ಲಂಚ ಪಡೆದಿದ್ದೀನಾ? ಆದರೂ ನನ್ನನ್ನು ಜೈಲಿಗೆ ಹಾಕಿದ್ರಿ. ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದ್ದೀರಾ. ನಿಮಗೆ ಒಳ್ಳೆಯದಾಗಲ್ಲ. ನಿಮಗೆ ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದಾರೆ.

DKS 1 1

ಎರಡನೇ ದಿನ ಪಾದಯಾತ್ರೆ ಮುಗಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆಯಿಂದ ನನ್ನ ನಡು ಬೆನ್ನು ಎಲ್ಲಾ ಮುರಿದು ಹಾಕಿದ್ದೀರಿ. ಈಗ ನಾನು ಡಾಕ್ಟರ್ ಕರೆದುಕೊಂಡು ರೆಡಿ ಮಾಡಿಸಿಕೊಳ್ಳಬೇಕು. ನನಗೆ ಇವತ್ತು ದುಃಖದ ದಿನ. ಬಿಜೆಪಿ ಸರ್ಕಾರದ ಮಂತ್ರಿಗಳು ನಿಚ ಕೆಲಸ ಮಾಡುತ್ತಿದ್ದಾರೆ ಎಂದು ಗೊತ್ತಿರಲಿಲ್ಲ. ನಿನ್ನೆ ದೊಡ್ಡ ಆಲಹಳ್ಳಿಯಲ್ಲಿ ನಮ್ಮ ಜನ ನನಗೆ ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಕನಕಪುರದಲ್ಲಿದ್ದ ಬಿಲ್ಡಿಂಗ್‍ನಲ್ಲಿ ಲೈಟ್ ಹಾಕಲು ಜನರಿಗೆ ಸರ್ಕಾರ ಅವಕಾಶ ನೀಡಲಿಲ್ಲ. ಇದು ಅಲ್ಲಿನ ಜನರಿಗೆ ಅವಮಾನವಾಗಿದೆ ಎಂದರು. ಇದನ್ನೂ ಓದಿ: ‌ಕಾಲಭೈರವನಿಗೆ ಪೊಲೀಸ್ ಸಮವಸ್ತ್ರ – ಫೋಟೋ ವೈರಲ್

ಬಿಜೆಪಿ ಕಾರ್ಯಕರ್ತರೊಬ್ಬರು ಸಂಜೆ ಬಂದು ಶಾಲು ಹೊದಿಸಿ ಅಣ್ಣ ನಮ್ಮ ನಾಯಕರು ನಿಮಗೆ ಅಂಟು ರೋಗ ತರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಮುನ್ನ ಆಸ್ಪತ್ರೆ ನೀಡುವಂತೆ ಯಡಿಯೂರಪ್ಪ ಅವರ ಬಳಿ ಕೇಳಿಕೊಂಡಿದ್ದೆ. ಆಗ ಸರಿ ಅಂತ ಹೇಳಿದ್ದರು. ಈ ವೇಳೆ ಬಸವರಾಜ ಬೊಮ್ಮಾಯಿ ಅವರು ಸಹ ಇದ್ದರು. ಆದರೆ ಲೈಟ್ ಹಾಕಲು ಅವಕಾಶ ಕೊಡದ ಬೊಮ್ಮಾಯಿಗೆ ಆಸ್ಪತ್ರೆ ನೀಡುವಷ್ಟು ಹೃದಯ ಶ್ರೀಮಂತಿಕೆ ಇಲ್ಲ. ಯಾವಾನೋ ಆಫೀಸರ್‍ನಾ ಕಳುಹಿಸಿ ಕೊರೊನಾ ಟೆಸ್ಟ್ ಮಾಡಿಸಬೇಕಂತೆ. ಅವನ್ಯಾವನೋ ಡಿಸಿಗೆ ಕೊರೊನಾ ಬಂದಿದೆಯಂತೆ. ಅದಕ್ಕೆ ಸರ್ ನಿಮಗೆ ಟೆಸ್ಟ್ ಮಾಡಬೇಕು ಅಂತ ಬಂದಿದ್ದರು. ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತೀದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ‌ಉತ್ತರ ಪ್ರದೇಶ, ಉತ್ತರಾಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ

bommai bengaluru

ಈಗ ಕೊರೊನಾ ಟೆಸ್ಟ್ ಮಾಡಲು ಬಂದ ಅಧಿಕಾರಿಗೆ ಕೊರೊನಾ ಬಂದಿದೆ. ಎಂಥಾ ರೋಗವನ್ನು ನನಗೆ ಅಂಟಿಸಲು ಕಳುಹಿಸಿದ್ದೀರಿ. ನನ್ನ ಆರೋಗ್ಯದ ಬಗ್ಗೆ ಕಾಳಜಿ ಇರುವವರು. ಇಡಿ ಅರೆಸ್ಟ್ ಮಾಡಿದಾಗ, ನನಗೆ ಎದೆ ನೋವಾಗಿತ್ತು. ಇಸಿಜಿ ಮಾಡಲು ಕರೆದುಕೊಂಡು ಹೋದಾಗ ಐದು ನಿಮಿಷದಲ್ಲಿ ನನ್ನ ಪ್ರಾಣ ಹೋಗುವ ಹಾಗೆ ಆಗಿತ್ತು. ಆದರೆ ನೀವು ಐದೇ ನಿಮಿಷಕ್ಕೆ ಟೆಸ್ಟ್ ಮಾಡಿ ತಿಹಾರ್ ಜೈಲಿಗೆ ಕಳುಹಿಸಿದ್ರಿ. ನಾನು ಯಾರಿಗಾದರೂ ಅನ್ಯಾಯ ಮಾಡಿದ್ದೀನಾ, ಲಂಚ ಪಡೆದಿದ್ದೀನಾ? ಆದರೂ ನನ್ನನ್ನು ಜೈಲಿಗೆ ಹಾಕಿದ್ರಿ. ಆದರೆ ನನ್ನ ಜನ ಹರಕೆ ಹೊತ್ತು ನನ್ನ ಜೈಲಿನಿಂದ ಹೊರಗೆ ಕರೆದುಕೊಂಡು ಬಂದರು. ನಮ್ಮ ಜನ ಮಹಾರಾಜರಿಗೂ ಕೊಡದ ಪ್ರೀತಿಯನ್ನು ನನಗೆ ಕೊಟ್ಟಿದ್ದಾರೆ. ಅಲ್ಲದೇ ಅವನ್ಯಾವನೋ ಸುರೇಶನ ಗಂಡಸ್ತನವನ್ನು ಕೇಳುತ್ತಾನೆ. ಗಂಡಸ್ತನ ಕೇಳಲು ಅಲ್ಲಿಯವರೆಗೆ ಹೋಗಬೇಕಾ. ನನ್ನ ಜನ ಗೆಲ್ಲಿಸಿ ಎಂಪಿ ಮಾಡಿದ್ದಾರೆ ಎಂದು ಮಾತನಾಡುತ್ತಾ ಭಾವುಕರಾಗಿ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕಿದ್ದಾರೆ.

ಡಿಸಿ ಇಲ್ಲಿ ಲೈಟ್ ಹಾಕುವುದನ್ನು ತಡೆದಿದ್ದಾನೆ. ಅವನಿಗೆ ಈಗ ಅಲ್ಲ ಮುಂದೆ ಇದೆ ಎಂದು ವಾರ್ನ್ ಮಾಡಿದರು. ಬಳಿಕ ನಾಳೆ ರಾತ್ರಿ ಅಷ್ಟೋತ್ತಿಗೆ ಮತ್ತೊಂದು ನಾಟಕ ಶುರುಮಾಡುತ್ತಾರೆ. ಸಂಗಮದಿಂದ ಇಲ್ಲಿಯವರೆಗೆ ಎಲ್ಲರಿಗೂ ಪಾಸಿಟಿವ್ ಬಂದಿದೆ ಅಂತ ಹೇಳುತ್ತಾರೆ. ಇದನ್ನೂ ಓದಿ: Mekedatu Padyatra: ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್‌ ವಿರುದ್ಧ ಕೇಸ್‌

ನನಗೆ ಪಾಸಿಟಿವ್ ಬಂದಿದ್ಯಾ? ನನಗೆ ಕಾಯಿಲೆ ಇದ್ಯಾ ನೀವೇ ಹೇಳಿ. ಕಾಯಿಲೆ ಬಂದು ಗಡ, ಗಡ ಎಂದು ನಡುಗುತ್ತಿದ್ದೀನಾ. ಇವತ್ತು 30 ಜನರ ಮೇಲೆ ಎಫ್‍ಐಆರ್ ಮಾಡಿದ್ದಾರೆ. ಬೊಮ್ಮಾಯಿ ಅವರೇ ಇಡೀ ಕನಕಪುರದ ಜನ ಬಂದು ಕೋರ್ಟ್ ಕಟಕಟಗೆ ಬಂದು ನಿಂತರೆ ಹೇಗಿರುತ್ತದೆ. ನಂಗೆ ಜೈಲು ಪಾಲು ಎಲ್ಲಾ ಅಭ್ಯಾಸ ಇದೆ ಎಂದು ತಿರುಗೇಟು ನೀಡಿದರು.

TAGGED:Corona Virus. mekedatu padayatraDK Shivakumarramanagaraಕೊರೊನಾ ವೈರಸ್. ಮೇಕೆದಾಟುಡಿ.ಕೆ.ಶಿವಕುಮಾರ್ರಾಮನಗರ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
7 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
10 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
14 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

siddaramaiah rcb
Bengaluru City

ಐಪಿಎಲ್‌ ಟ್ರೋಫಿಗಾಗಿ ಆರ್‌ಸಿಬಿ vs ಪಂಜಾಬ್‌ ಫೈಟ್‌ – ಟ್ಯಾಬ್‌ನಲ್ಲೇ ಪಂದ್ಯ ವೀಕ್ಷಿಸಿದ ಸಿಎಂ

Public TV
By Public TV
41 minutes ago
Land Belonging To PoK Based Terrorist Attached In Jammu and Kashmirs Ramban
Crime

ಕಾಶ್ಮೀರದಲ್ಲಿ ಪಿಒಕೆ ಮೂಲದ ಉಗ್ರನ ಭೂಮಿ ವಶ

Public TV
By Public TV
51 minutes ago
RCB first Batting
Cricket

ಕೊನೆಯಲ್ಲಿ ಜಿತೇಶ್‌ ಶರ್ಮಾ ಬೆಂಕಿ ಬ್ಯಾಟಿಂಗ್‌ – ಪಂಜಾಬ್‌ಗೆ 191 ರನ್‌ಗಳ ಗುರಿ ನೀಡಿದ ಆರ್‌ಸಿಬಿ

Public TV
By Public TV
1 hour ago
18 Years 2 Virgins Durex Indias Viral IPL 2025 Final Post
Cricket

18ರ ಇಬ್ಬರು ವರ್ಜಿನ್ಸ್ – ಈ ರಾತ್ರಿ ಯಾರಿಗೆ ಅದೃಷ್ಟ? – IPL ಫೈನಲ್‌ ಪಂದ್ಯಕ್ಕೆ ಡ್ಯುರೆಕ್ಸ್ ಫನ್ನಿ ಪೋಸ್ಟ್‌!

Public TV
By Public TV
2 hours ago
Chris Gayle
Cricket

ಆರ್‌ಸಿಬಿ ಜೆರ್ಸಿ, ಪಂಜಾಬ್‌ ಪೇಟಾ ಧರಿಸಿದ ಕ್ರಿಸ್‌ ಗೇಲ್‌ – ವೈರಲ್‌ ಆಯ್ತು ಸ್ಪೆಷಲ್‌ ಲುಕ್‌

Public TV
By Public TV
2 hours ago
Virat Kohli And Shreyas Iyer
Cricket

ಪಂದ್ಯ ಆರಂಭಕ್ಕೂ ಮುನ್ನ ಶ್ರೇಯಸ್‌ಗೆ All The Best ಹೇಳಿ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?