Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

Public TV
Last updated: July 9, 2025 4:55 pm
Public TV
Share
3 Min Read
D K Shivakumar
SHARE

ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಅವರು ಹೆಚ್.ಡಿ.ಕುಮಾರಸ್ವಾಮಿಯನ್ನು (H D Kumaraswamy) ಛೇಡಿಸಿದ್ದಾರೆ.

ದೆಹಲಿಯ (Delhi) ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ (Nithin Gadkari) ಅವರನ್ನು ಹೆಚ್‌ಡಿಕೆ ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನು ನಾನು ಸ್ವೀಕಾರ ಮಾಡುತ್ತೇನೆ. ಕ್ರೆಡಿಟ್ ಯಾರು ಬೇಕಾದರೂ ಪಡೆದುಕೊಳ್ಳಲಿ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್‌ಗೆ ಹಾಜರಾಗಿ ವಿದೇಶಕ್ಕೆ ಹಾರಲಿರುವ ದರ್ಶನ್

ಸಂಪುಟ ಬದಲಾವಣೆಗಾಗಿ ಸಿಎಂ ದೆಹಲಿ ಭೇಟಿ ನೀಡಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ಧಿ ವಿಚಾರಗಳನ್ನು ಚರ್ಚೆ ನಡೆಸಲು, ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂಬ ಪ್ರಶ್ನೆಗೆ ಅವರು, ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: 10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.

ಬೀದರ್‌ನ ಸಣ್ಣ ನೀರಾವರಿ ಇಲಾಖೆಯ ಎಫ್‌ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ ಎಂದಿದ್ದಾರೆ. ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತಡೆದಿರುವ ಬಗ್ಗೆ ಕೇಳಿದಾಗ, ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಉತ್ತರಿಸಿದ ಅವರು, ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್‌ಗೆ ಪ್ರಾಮುಖ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ. ಕನ್ನಡ ಪರೀಕ್ಷೆ ಅಂಕಗಳನ್ನು 125ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ, ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು ಎಂದಿದ್ದಾರೆ. ಇದನ್ನೂ ಓದಿ: ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

ಟನಲ್ ರಸ್ತೆ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಎರಡು-ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್‌ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲ ಎಂದು ಹೇಳಿದ್ದಾರೆ.

ಸುರ್ಜೇವಾಲ ಅವರ ಕರ್ನಾಟಕ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ ಎಂದು ವಿವರಿಸಿದ್ದಾರೆ.

TAGGED:congressdelhiDK Shivakumarh d kumaraswamypoliticsಡಿ.ಕೆ.ಶಿವಕುಮಾರ್ದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Actress Amala
ನಾಗಚೈತನ್ಯ ಕುರಿತು ಮಲತಾಯಿ ನಟಿ ಅಮಲಾ ಮಾತು
Cinema Latest South cinema Top Stories
balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories

You Might Also Like

Chitradurga court acquits Shivamurthy Murugha Sharana and two others accused under POCSO Act
Chitradurga

ಪೋಕ್ಸೋ ಮೊದಲ ಕೇಸಲ್ಲಿ ಮುರುಘಾ ಶ್ರೀ ಖುಲಾಸೆ – ಕೋರ್ಟ್‌ ಆದೇಶದಲ್ಲಿ ಏನಿದೆ?

Public TV
By Public TV
27 minutes ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
57 minutes ago
DK Shivakumar 7
Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
By Public TV
59 minutes ago
Nirmalanandanatha Swamiji
Districts

ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಶಂಖನಾದ

Public TV
By Public TV
1 hour ago
Shalini Rajneesh 1
Bengaluru City

ಹೂವುಗಳ ಮಾರಾಟದಂತೆ ಔಷಧೀಯ ಗಿಡಮೂಲಿಕೆಗಳಿಗೂ ಹರಾಜು ಅವಶ್ಯಕ – ಡಾ.ಶಾಲಿನಿ ರಜನೀಶ್

Public TV
By Public TV
1 hour ago
modi stadium ahmedabad
Latest

ಅಹಮದಾಬಾದ್‌ನಲ್ಲಿ 2030ರ ಕಾಮನ್‌ವೆಲ್ತ್‌ ಗೇಮ್ಸ್‌ – ಈಗ ಅಧಿಕೃತ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?