Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
Last updated: December 25, 2025 6:51 pm
Public TV
Share
3 Min Read
DK Shivakumar 9
SHARE

ಬೆಂಗಳೂರು: ನಾನು ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ ಎಂದರು. ಮುಖ್ಯಮಂತ್ರಿಯವರನ್ನು ಸಭೆಗೆ ಆಹ್ವಾನಿಸಲಾಗಿದೆಯಲ್ಲ ಎಂದು ಹೇಳಿದಾಗ, ಇರಬಹುದು, ಮೂವರು ಸಿಎಂಗೆ ಆಹ್ವಾನ ನೀಡಿದ್ದಾರೆ ಎಂದು ನನಗೂ ಗೊತ್ತಿದೆ. ಆದರೆ ಡೆಪ್ಯುಟಿ ಸಿಎಂಗೆ ಕರೆದಿಲ್ಲ. ಪಿಸಿಸಿ ಅಧ್ಯಕ್ಷರಿಗೆ ಆಹ್ವಾನವಿಲ್ಲವೇ ಎಂದು ಕೇಳಿದಾಗ, ಸಮಿತಿಯ ವಿಸ್ತರಿತ ಸಭೆಗೆ ಕರೆಯುತ್ತಾರೆ. ಒಂದೊಮ್ಮೆ ಸಭೆಗೆ ಕರೆದರೆ ಹೋಗುವಿರಾ ಎಂದು ಕೇಳಿದಾಗ, ಕರೆದರೆ ಹೋಗಬೇಕಾಗುತ್ತದೆ. ಕರೆದಾಗ ಹೋಗದೇ ಇರಲು ಆಗುತ್ತದೆಯೇ ಎಂದು ಹೇಳಿದರು.

ಖರ್ಗೆ ಅವರ ಜೊತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.

Met AICC President Shri Mallikarjun Kharge avaru at his residence in Bengaluru today and exchanged warm greetings. pic.twitter.com/S8iGaeCokX

— DK Shivakumar (@DKShivakumar) December 25, 2025

ಸ್ಥಳೀಯ ಮಟ್ಟದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದಾಗ, ಹಿರಿಯರು ಮಾರ್ಗದರ್ಶನ ನೀಡುತ್ತಾರೆ. ಶುಕ್ರವಾರದಂದು (ಡಿ.26) ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಿದೆ. ಈ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಬದಲಾವಣೆ, ಅನುದಾನದಲ್ಲಿ ರಾಜ್ಯದ ಪಾಲನ್ನು ಶೇ.40ಕ್ಕೆ ಹೆಚ್ಚಿಸಿರುವುದು ಸೇರಿದಂತೆ ರೈತರಿಗೆ ಮಾರಕವಾದಂತಹ ಬದಲಾವಣೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ವಿಚಾರವಾಗಿ ಒಂದು ರಾಜ್ಯದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯಗಳನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದೇನೆ. ಅವರ ಜೊತೆ ಯಾವ ರಾಜಕೀಯ ಮಾತುಕತೆಯೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗುತ್ತಿತ್ತು. ಪ್ರತಿಯೊಬ್ಬರು ಚರ್ಚೆ ನಡೆಸಿ ತಮ್ಮ ಊರಿಗೆ ಯಾವ ಕೆಲಸಗಳನ್ನು ತೆಗೆದುಕೊಳ್ಳಬೇಕು ಎನ್ನುವ ಅವಕಾಶವಿತ್ತು. ಆದರೆ ಈಗ ಕೇಂದ್ರ ಸರ್ಕಾರವೇ ಯಾವ ಜಿಲ್ಲೆಯಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತದಂತೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು, ಇಂಗುಗುಂಡಿ ತೋಡಿಕೊಳ್ಳಲು, ಕೊಟ್ಟಿಗೆ ಕಟ್ಟಿಕೊಳ್ಳಲು – ಹೀಗೆ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು. ಇಂತಹ ಅದ್ಭುತವಾದ ಕಾರ್ಯಕ್ರಮವನ್ನು ಸೋನಿಯಾಗಾಂಧಿ ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ನೀಡಿದ್ದರು. ಮುಂದಿನ 2026ರ ಫೆಬ್ರವರಿ ವೇಳೆಗೆ ಈ ಯೋಜನೆಗೆ 20 ವರ್ಷ ತುಂಬಲಿದೆ. ಆದ ಕಾರಣ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲು ಆಲೋಚಿಸಲಾಗಿದೆ ಎಂದು ಹೇಳಿದರು.

ಚಿತ್ರದುರ್ಗದ ಹಿರಿಯೂರಿನ ಬಳಿ ರಸ್ತೆ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾದ ಬಗ್ಗೆ ಕೇಳಿದಾಗ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನನಗೆ ತುಂಬಾ ದುಃಖವಾಗಿದ್ದು, ಏನು ಹೇಳಬೇಕು ಎಂದು ತೋಚದಂತಾಗಿದ್ದೇನೆ. ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಘಟನೆಗೆ ಕಾರಣ ಏನು ಎಂದು ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.ಇದನ್ನೂ ಓದಿ:ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

TAGGED:bengalurucongressDK ShivakumarKPCCಕಾಂಗ್ರೆಸ್ಕೇಂದ್ರ ಸರ್ಕಾರಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
2 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
3 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
3 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
3 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
3 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?