Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ

Public TV
Last updated: March 10, 2024 2:54 pm
Public TV
Share
3 Min Read
MANDYA DK SHIVAKUMAR
SHARE

– ಸಂಸದೆ ಸುಮಲತಾಗೆ ಟಾಂಗ್

ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಕ್ಷೇತ್ರಕ್ಕೆ ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ತಮ್ಮ ಅಭ್ಯರ್ಥಿಯನ್ನು ಪರಿಚಯಿಸಿದ್ದಾರೆ.

ಮಂಡ್ಯದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಆರಂಭದಲ್ಲೇ ಸ್ಟಾರ್ ಚಂದ್ರು ಅವರನ್ನು ಪರಿಚಯ ಮಾಡಿಕೊಟ್ಟರು. ಯಾರು ಅಂತಾ ನಿಮಗೆಲ್ಲ ಗೊತ್ತಲ್ವಾ?. ಸ್ಟಾರ್ ಚಂದ್ರು ಅವರು ಅಂತಾ ಪರಿಚಯಿಸಿದರು. ಈ ಮೂಲಕ ಸ್ಟಾರ್ ಚಂದ್ರು (Star Chandru) ಅವರನ್ನ ಮಂಡ್ಯದ ಗಂಡು ಎಂದು ಡಿಕೆಶಿ ಬಣ್ಣಿಸಿದರು. ಡಿಕೆಶಿ ಪರಿಚಯಿಸ್ತಿದ್ದಂತೆ ಸ್ಟಾರ್ ಚಂದ್ರು ಅವರು ಎದ್ದು ನಿಂತು ಕೈ ಮುಗಿದು ನಮಸ್ಕರಿಸಿದರು.

MANDYA DK SHIVAKUMAR 2

ತೆನೆ ಬಿಸಾಕಿ ಕಮಲ ತಬ್ಬಿದ ಕುಮಾರಣ್ಣ: ನಾನು, ಸಿದ್ದರಾಮಯ್ಯ ನಿಮ್ಮಿಂದ ಜೈಕಾರ, ಹೂ ಹಾರ ಹಾಕಿಸಿಕೊಳ್ಳಲು ಬಂದಿಲ್ಲ. 5 ಗ್ಯಾರಂಟಿ ಅನುಷ್ಠಾನಕ್ಕೆ ಕಾರಣಕರ್ತರಾದ ನಿಮಗೆ ಧನ್ಯವಾದ ಹೇಳಲು ಬಂದಿದ್ದೇವೆ. ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ ಅವಕಾಶ ಮಾತ್ರ ಕೊಡುತ್ತಾನೆ. ನೀವು ಕೊಟ್ಟ ಅವಕಾಶದಿಂದ ದೇಶಕ್ಕೆ ಮಾದರಿ ಆಡಳಿತ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದಿದ್ದೆ. 5 ಗ್ಯಾರಂಟಿ ನೋಡಿ ಅರಳಿದ ಕಮಲ ಮುದುಡಿತು. ಕುಮಾರಣ್ಣ ತೆನೆ ಬಿಸಾಕಿ ಕಮಲ ತಬ್ಬಿದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರತಾಪ್ ಸಿಂಹ 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸವಿದೆ: ಜಿಟಿಡಿ

BJP JDS CON

ಕೃಷ್ಣನ‌ ತಂತ್ರ ಇದ್ರೆ ಯಶಸ್ಸು: ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಗ್ಯಾರಂಟಿ ಯೋಜನೆಗಳು ಬಳಕೆ ಆಗುತ್ತಿವೆ. ಫ್ರೀಯಾಗಿ ಬಸ್‌ನಲ್ಲಿ ಓಡಾಡುತ್ತಿದ್ದೀರಾ?. ಇದೇ ವೇಳೆ 2000 ಸಾವಿರ ಬರ್ತಿದೆಯಾ ಎಂದು ಕೇಳಿದರು. ನಿಮ್ಮ‌ ಹೆಂಡತಿಯರಿಗೂ 2000 ಬರ್ತಿದೆ ಅಲ್ವಾ ಕೈ ಎತ್ತಿ ಎಂದು ಹಾಸ್ಯ ಚಟಾಕಿ ಹಾರಿಸಿದ ಡಿಕೆ, ಇಂತಹ ಕಾರ್ಯಕ್ರಮ ಮಾಡಿದ್ದು ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ. ಗ್ಯಾರಂಟಿ ಯೋಜನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆದದ್ದು ಕಾಂಗ್ರೆಸ್ ಸರ್ಕಾರ. ಧರ್ಮರಾಯ ಧರ್ಮತ್ವ, ಕರ್ಣನ ದಾನ, ಅರ್ಜುನ ಗುರಿ, ಕೃಷ್ಣನ‌ ತಂತ್ರ ಇದ್ರೆ ಯಶಸ್ಸು ಎಂದು ಹೇಳಿದರು.

ರೈತರೇ ಆತ್ಮಸಾಕ್ಷಿ ಮುಟ್ಟಿ ಹೇಳಿ: ಇವತ್ತಿಗೆ ಕೆಪಿಸಿಸಿ ಅಧ್ಯಕ್ಷನಾಗಿ 4 ವರ್ಷ ತುಂಬಿದೆ. ಖಾಲಿ ಇದ್ದ ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಹೇಳಿ. ಕೆರೆ ತುಂಬಿಸಲು, ನಾಲೆ ಅಭಿವೃದ್ಧಿಗೆ 2000 ಕೋಟಿ ಮಂಜೂರು. KRS ಪ್ರವಾಸಿ ಕೇಂದ್ರ ಮಾಡಲು ತೀರ್ಮಾನ. ರೈತರ ಬದುಕು, ನೀರಿಗಾಗಿ ಮೇಕೆದಾಟು ಯೋಜನೆ. ಮೇಕೆದಾಟು ಅನುಷ್ಠಾನ ಆದರೆ ಕಷ್ಟಕಾಲದಲ್ಲಿ ಸಹಕಾರಿ. ಬಿಜೆಪಿ, ಜೆಡಿಎಸ್‌ ಸರ್ಕಾರ ಇದ್ದಾಗ ಇದ್ಯಾವುದನ್ನು ಮಾಡಲಿಲ್ಲ. ರೈತರಿದ್ದೀರಾ ನಿಮ್ಮ ಬೆಳೆಗಳನ್ನು ಉಳಿಸಿದ್ದೇವೆ, ಆತ್ಮಸಾಕ್ಷಿ ಮುಟ್ಟಿ ಹೇಳಿ ಎಂದರು.

MANDYA DK SHIVAKUMAR 1

ಅಂಬರೀಶ್‌ ಹೆಸರಲ್ಲಿ ರಸ್ತೆ: ಇವತ್ತು ನಂಟಸ್ಥನ ಮಾಡಿಕೊಂಡು ಓಡಾಡುವ ಜೆಡಿಎಸ್‌-ಬಿಜೆಪಿ (JDS- BJP) ಏನು ಮಾಡಿದ್ದಾರೆ. ದೇವೇಗೌಡರು ಇವತ್ತು ಅಯ್ಯಯ್ಯೋ ಎಂದು ಕಣ್ಣೀರು ಹಾಕುತ್ತಿದ್ದಾರೆ. ನಿಮ್ಮ ಕಣ್ಣೀರು ನಿಮ್ಮ‌ ಮನೆಗೆ ಹೊರತು ರಾಜ್ಯಕ್ಕಲ್ಲ ದೇವೇಗೌಡರೇ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರನ್ನು ಉಳಿಸಲು ಗ್ಯಾರಂಟಿ ಯೋಜನೆ. ನಿಮ್ಮ‌ ಋಣ ತೀರಿಸಿದ ಸಮಾಧಾನ ನಮಗಿದೆ. ಅಂಬರೀಶ್ ನಮ್ಮ ಪಕ್ಷದಲ್ಲಿ ಮಂತ್ರಿಯಾಗಿದ್ದರು. ಅಂಬರೀಶ್ (Ambareesh) ಅವರ ಹೆಸರಲ್ಲಿ ರಸ್ತೆ ಮಾಡುತ್ತೇವೆ. ಪ್ರಾಣ ಬಿಡುವಾಗ ಕಾಂಗ್ರೆಸ್ಸಿಗರಾಗಿ ಬಿಟ್ರು. ಇದೆಲ್ಲಾ ನಿಮ್ಮ ತಲೇಲಿ ಇರಲಿ. ಅಂಬರೀಶ್ ಸ್ನೇಹಿತರನ್ನೇ ಅಭ್ಯರ್ಥಿ ಮಾಡಿದ್ದೇವೆ. ಸೂರ್ಯ ಚಂದ್ರರಷ್ಟೇ ಸ್ಟಾರ್ ಗೆಲುವು ಸತ್ಯ. ನಿಜತಾನೇ ಅಮ್ಮಾ, ಅಕ್ಕಾ ಎಂದು ಡಿಕೆಶಿ ಮತಯಾಚಿಸುವ ಮೂಲಕ ಸಂಸದೆ‌ ಸುಮಲತಾಗೆ ಡಿಸಿಎಂ‌ ಡಿಕೆಶಿ ಟಾಂಗ್ ಕೊಟ್ಟರು.

TAGGED:bjpcongressDK Shivakumarjdsmandyastar chandruSumalatha Ambareeshಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಮಂಡ್ಯಸುಮಲತಾ ಅಂಬರೀಶ್ಸ್ಟಾರ್‌ ಚಂದ್ರು
Share This Article
Facebook Whatsapp Whatsapp Telegram

Cinema Updates

shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
21 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
24 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
1 day ago

You Might Also Like

vinay kulkarni
Court

ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

Public TV
By Public TV
31 minutes ago
Virat Kohli 4
Bengaluru City

ಬೆಂಗ್ಳೂರು ಕಾಲ್ತುಳಿತ ಕೇಸ್‌ – ಕೊಹ್ಲಿ ವಿರುದ್ಧ ದೂರು ದಾಖಲು

Public TV
By Public TV
32 minutes ago
HIGHCOURT
Bengaluru City

ಬೆಂಗ್ಳೂರು ಕಾಲ್ತುಳಿತ ಪ್ರಕರಣ – ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

Public TV
By Public TV
41 minutes ago
D K Shivakumar
Bengaluru City

Chinnaswamy Stampede | ನಾನೇನ್ ಕ್ರೈಂ ಮಾಡಿದ್ದೀನಿ?: ಡಿ.ಕೆ ಶಿವಕುಮಾರ್‌

Public TV
By Public TV
3 hours ago
Govindaraj NikhilSosale
Bengaluru City

ನಿಖಿಲ್‌ ಸೋಸಲೆನಾ ಬಿಟ್ಬಿಡಿ – ಪೊಲೀಸ್ರಿಗೆ ಒತ್ತಡ ಹಾಕಿದ್ದಕ್ಕೆ ಗೋವಿಂದರಾಜ್‌ ತಲೆದಂಡ

Public TV
By Public TV
3 hours ago
chinnaswamy stadium
Bengaluru City

KSCA ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?