Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ

Latest

ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ

Public TV
Last updated: March 10, 2024 2:54 pm
Public TV
Share
3 Min Read
MANDYA DK SHIVAKUMAR
SHARE

– ಸಂಸದೆ ಸುಮಲತಾಗೆ ಟಾಂಗ್

ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಕ್ಷೇತ್ರಕ್ಕೆ ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ತಮ್ಮ ಅಭ್ಯರ್ಥಿಯನ್ನು ಪರಿಚಯಿಸಿದ್ದಾರೆ.

ಮಂಡ್ಯದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಭಾಷಣದ ಆರಂಭದಲ್ಲೇ ಸ್ಟಾರ್ ಚಂದ್ರು ಅವರನ್ನು ಪರಿಚಯ ಮಾಡಿಕೊಟ್ಟರು. ಯಾರು ಅಂತಾ ನಿಮಗೆಲ್ಲ ಗೊತ್ತಲ್ವಾ?. ಸ್ಟಾರ್ ಚಂದ್ರು ಅವರು ಅಂತಾ ಪರಿಚಯಿಸಿದರು. ಈ ಮೂಲಕ ಸ್ಟಾರ್ ಚಂದ್ರು (Star Chandru) ಅವರನ್ನ ಮಂಡ್ಯದ ಗಂಡು ಎಂದು ಡಿಕೆಶಿ ಬಣ್ಣಿಸಿದರು. ಡಿಕೆಶಿ ಪರಿಚಯಿಸ್ತಿದ್ದಂತೆ ಸ್ಟಾರ್ ಚಂದ್ರು ಅವರು ಎದ್ದು ನಿಂತು ಕೈ ಮುಗಿದು ನಮಸ್ಕರಿಸಿದರು.

MANDYA DK SHIVAKUMAR 2

ತೆನೆ ಬಿಸಾಕಿ ಕಮಲ ತಬ್ಬಿದ ಕುಮಾರಣ್ಣ: ನಾನು, ಸಿದ್ದರಾಮಯ್ಯ ನಿಮ್ಮಿಂದ ಜೈಕಾರ, ಹೂ ಹಾರ ಹಾಕಿಸಿಕೊಳ್ಳಲು ಬಂದಿಲ್ಲ. 5 ಗ್ಯಾರಂಟಿ ಅನುಷ್ಠಾನಕ್ಕೆ ಕಾರಣಕರ್ತರಾದ ನಿಮಗೆ ಧನ್ಯವಾದ ಹೇಳಲು ಬಂದಿದ್ದೇವೆ. ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡಲ್ಲ ಅವಕಾಶ ಮಾತ್ರ ಕೊಡುತ್ತಾನೆ. ನೀವು ಕೊಟ್ಟ ಅವಕಾಶದಿಂದ ದೇಶಕ್ಕೆ ಮಾದರಿ ಆಡಳಿತ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದಿದ್ದೆ. 5 ಗ್ಯಾರಂಟಿ ನೋಡಿ ಅರಳಿದ ಕಮಲ ಮುದುಡಿತು. ಕುಮಾರಣ್ಣ ತೆನೆ ಬಿಸಾಕಿ ಕಮಲ ತಬ್ಬಿದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರತಾಪ್ ಸಿಂಹ 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ, ಟಿಕೆಟ್ ಸಿಗುವ ವಿಶ್ವಾಸವಿದೆ: ಜಿಟಿಡಿ

BJP JDS CON

ಕೃಷ್ಣನ‌ ತಂತ್ರ ಇದ್ರೆ ಯಶಸ್ಸು: ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಗ್ಯಾರಂಟಿ ಯೋಜನೆಗಳು ಬಳಕೆ ಆಗುತ್ತಿವೆ. ಫ್ರೀಯಾಗಿ ಬಸ್‌ನಲ್ಲಿ ಓಡಾಡುತ್ತಿದ್ದೀರಾ?. ಇದೇ ವೇಳೆ 2000 ಸಾವಿರ ಬರ್ತಿದೆಯಾ ಎಂದು ಕೇಳಿದರು. ನಿಮ್ಮ‌ ಹೆಂಡತಿಯರಿಗೂ 2000 ಬರ್ತಿದೆ ಅಲ್ವಾ ಕೈ ಎತ್ತಿ ಎಂದು ಹಾಸ್ಯ ಚಟಾಕಿ ಹಾರಿಸಿದ ಡಿಕೆ, ಇಂತಹ ಕಾರ್ಯಕ್ರಮ ಮಾಡಿದ್ದು ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ. ಗ್ಯಾರಂಟಿ ಯೋಜನೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆದದ್ದು ಕಾಂಗ್ರೆಸ್ ಸರ್ಕಾರ. ಧರ್ಮರಾಯ ಧರ್ಮತ್ವ, ಕರ್ಣನ ದಾನ, ಅರ್ಜುನ ಗುರಿ, ಕೃಷ್ಣನ‌ ತಂತ್ರ ಇದ್ರೆ ಯಶಸ್ಸು ಎಂದು ಹೇಳಿದರು.

ರೈತರೇ ಆತ್ಮಸಾಕ್ಷಿ ಮುಟ್ಟಿ ಹೇಳಿ: ಇವತ್ತಿಗೆ ಕೆಪಿಸಿಸಿ ಅಧ್ಯಕ್ಷನಾಗಿ 4 ವರ್ಷ ತುಂಬಿದೆ. ಖಾಲಿ ಇದ್ದ ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಹೇಳಿ. ಕೆರೆ ತುಂಬಿಸಲು, ನಾಲೆ ಅಭಿವೃದ್ಧಿಗೆ 2000 ಕೋಟಿ ಮಂಜೂರು. KRS ಪ್ರವಾಸಿ ಕೇಂದ್ರ ಮಾಡಲು ತೀರ್ಮಾನ. ರೈತರ ಬದುಕು, ನೀರಿಗಾಗಿ ಮೇಕೆದಾಟು ಯೋಜನೆ. ಮೇಕೆದಾಟು ಅನುಷ್ಠಾನ ಆದರೆ ಕಷ್ಟಕಾಲದಲ್ಲಿ ಸಹಕಾರಿ. ಬಿಜೆಪಿ, ಜೆಡಿಎಸ್‌ ಸರ್ಕಾರ ಇದ್ದಾಗ ಇದ್ಯಾವುದನ್ನು ಮಾಡಲಿಲ್ಲ. ರೈತರಿದ್ದೀರಾ ನಿಮ್ಮ ಬೆಳೆಗಳನ್ನು ಉಳಿಸಿದ್ದೇವೆ, ಆತ್ಮಸಾಕ್ಷಿ ಮುಟ್ಟಿ ಹೇಳಿ ಎಂದರು.

MANDYA DK SHIVAKUMAR 1

ಅಂಬರೀಶ್‌ ಹೆಸರಲ್ಲಿ ರಸ್ತೆ: ಇವತ್ತು ನಂಟಸ್ಥನ ಮಾಡಿಕೊಂಡು ಓಡಾಡುವ ಜೆಡಿಎಸ್‌-ಬಿಜೆಪಿ (JDS- BJP) ಏನು ಮಾಡಿದ್ದಾರೆ. ದೇವೇಗೌಡರು ಇವತ್ತು ಅಯ್ಯಯ್ಯೋ ಎಂದು ಕಣ್ಣೀರು ಹಾಕುತ್ತಿದ್ದಾರೆ. ನಿಮ್ಮ ಕಣ್ಣೀರು ನಿಮ್ಮ‌ ಮನೆಗೆ ಹೊರತು ರಾಜ್ಯಕ್ಕಲ್ಲ ದೇವೇಗೌಡರೇ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರನ್ನು ಉಳಿಸಲು ಗ್ಯಾರಂಟಿ ಯೋಜನೆ. ನಿಮ್ಮ‌ ಋಣ ತೀರಿಸಿದ ಸಮಾಧಾನ ನಮಗಿದೆ. ಅಂಬರೀಶ್ ನಮ್ಮ ಪಕ್ಷದಲ್ಲಿ ಮಂತ್ರಿಯಾಗಿದ್ದರು. ಅಂಬರೀಶ್ (Ambareesh) ಅವರ ಹೆಸರಲ್ಲಿ ರಸ್ತೆ ಮಾಡುತ್ತೇವೆ. ಪ್ರಾಣ ಬಿಡುವಾಗ ಕಾಂಗ್ರೆಸ್ಸಿಗರಾಗಿ ಬಿಟ್ರು. ಇದೆಲ್ಲಾ ನಿಮ್ಮ ತಲೇಲಿ ಇರಲಿ. ಅಂಬರೀಶ್ ಸ್ನೇಹಿತರನ್ನೇ ಅಭ್ಯರ್ಥಿ ಮಾಡಿದ್ದೇವೆ. ಸೂರ್ಯ ಚಂದ್ರರಷ್ಟೇ ಸ್ಟಾರ್ ಗೆಲುವು ಸತ್ಯ. ನಿಜತಾನೇ ಅಮ್ಮಾ, ಅಕ್ಕಾ ಎಂದು ಡಿಕೆಶಿ ಮತಯಾಚಿಸುವ ಮೂಲಕ ಸಂಸದೆ‌ ಸುಮಲತಾಗೆ ಡಿಸಿಎಂ‌ ಡಿಕೆಶಿ ಟಾಂಗ್ ಕೊಟ್ಟರು.

TAGGED:bjpcongressDK Shivakumarjdsmandyastar chandruSumalatha Ambareeshಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿಮಂಡ್ಯಸುಮಲತಾ ಅಂಬರೀಶ್ಸ್ಟಾರ್‌ ಚಂದ್ರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
13 minutes ago
Groom dies in an accident while going for a pre wedding shoot sakleshpur hassan
Hassan

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
13 minutes ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
58 minutes ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
2 hours ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
2 hours ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?