Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿ‌ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋನಿಯಾ ಗಾಂಧಿ‌ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

Bengaluru City

ಸೋನಿಯಾ ಗಾಂಧಿ‌ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

Public TV
Last updated: November 1, 2025 12:52 am
Public TV
Share
5 Min Read
DK Shivakumar 5
SHARE

– ಇಂದಿರಾಗಾಂಧಿ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು
– ಬ್ಯಾಂಕ್ ಗಳ ರಾಷ್ಟ್ರೀಕರಣ, ಉಳುವವನೆ ಭೂಮಿಯ ಒಡೆಯ, ಇಂದಿರಾಗಾಂಧಿ ಅವ್ರ ಕೊಡುಗೆ
– ಟ್ರಂಪ್ ಅವರು ಹೇಳಿದ್ದೇ ಒಂದು ಮೋದಿ ಹೇಳಿದ್ದೇ ಇನ್ನೊಂದು

ಬೆಂಗಳೂರು: ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು. ಇಂದಿರಾಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರು ಪ್ರಧಾನಿಗಳಾಗಿದ್ದಾಗ ಈ ದೇಶಕ್ಕೆ ನೀಡಿದ ಕಾರ್ಯಕ್ರಮಗಳು ಇಂದಿಗೂ ಜೀವಂತವಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಜೆಪಿ ನಗರದ ಸಾರಕ್ಕಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ಇದೇ ವೇಳೆ ಸೋನಿಯಾ ಗಾಂಧಿ ಅವರ ತ್ಯಾಗವನ್ನ ನೆನೆದರು.

ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು!

ಇಂದಿರಾಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು. ಇಂದಿರಾಗಾಂಧಿ ಅವರು ಈ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು. ಅವರು ಪ್ರಧಾನಿಗಳಾಗಿದ್ದಾಗ ಈ ದೇಶಕ್ಕೆ ನೀಡಿದ ಕಾರ್ಯಕ್ರಮಗಳು ಇಂದಿಗೂ ಜೀವಂತವಾಗಿವೆ.… pic.twitter.com/G2XSBHqPvj

— DK Shivakumar (@DKShivakumar) October 31, 2025

ದೇಶಕ್ಕೆ ಗಾಂಧಿ ಕುಟುಂಬದ ದೊಡ್ಡ ಕೊಡುಗೆ ಇದೆ. ಸೋನಿಯಾಗಾಂಧಿ ಅವರಿಗೆ ಪ್ರಧಾನಿ ಆಗುವ ಅವಕಾಶವಿತ್ತು. ದೇಶದಲ್ಲಿ ಅನೇಕರು ಟೀಕೆ ಮಾಡಿದ್ರು. ಮಧ್ಯಪ್ರದೇಶದ ಮಾಜಿ ಸಿಎಂ ತಲೆಬೊಳಿಸಿಕೊಳ್ತಿನಿ ಅಂದ್ರು. ಯುಪಿಎ ಒಕ್ಕೂಟ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಸ್ಥಾನ ಕೊಟ್ಟರು. ಆದ್ರೆ ಸೋನಿಯಾ ಗಾಂಧಿ ಒಪ್ಪದೇ ಅಧಿಕಾರ ಮುಖ್ಯವಲ್ಲ ಅಂದ್ರು. ಆರ್ಥಿಕ ತಜ್ಞ ಮನಮೋಹನ್ ಸಿಂಗ್‌ಗೆ ಪ್ರಧಾನಿ ಸ್ಥಾನವನ್ನ ಬಿಟ್ಟುಕೊಟ್ಟರು ಎಂದು ಸ್ಮರಿಸಿದರು.

ಮುಂದುವರಿದು.. ಬಡತನ ನಿವಾರಣೆಗೆ ದಿಟ್ಟ ‌ನಿರ್ಧಾರ ತೆಗೆದುಕೊಂಡರು. ಇಂದಿರಾಗಾಂಧಿಯವರ ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ರಾಜ್ಯದಲ್ಲಿ ದೇವರಾಜ ಅರಸು ಅವರು ಜಾರಿಗೆ ತಂದು ಬಡವರಿಗೆ ಭೂಮಿ ಹಂಚಿದರು. ಇದರಿಂದ‌ ಲಕ್ಷಾಂತರ ಜನ ಭೂಮಿ ಪಡೆಯುವಂತಾಯಿತು. ಪ್ರತಿಯೊಂದು ತಾಲ್ಲೂಕಿನಲ್ಲಿ 10-15 ಸಾವಿರ ರೈತರು ಇದರ ಫಲಾನುಭವಿಗಳಾದರು. ಇಡೀ ದೇಶದಲ್ಲಿಯೇ ಇಂತಹ ಭೂಕ್ರಾಂತಿ ಎಲ್ಲಿಯೂ ಆಗಿಲ್ಲ ಎಂದರು.

ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ ಜನಸಾಮಾನ್ಯರ ಬದುಕಿಗೆ ನೆರವಾದರು. ಸಣ್ಣ ಆರ್ಥಿಕ ಬೆಂಬಲಕ್ಕೂ ಕಷ್ಟ ಪಡುತ್ತಿದ್ದ ಜನರಿಗೆ ಸಾಲ ದೊರೆಯುವಂತಾಯಿತು. ಆರ್ಥಿಕ ಸಂಕಷ್ಟ ಶಮನಕ್ಕೆ ಈ ನಿರ್ಧಾರ ನಾಂದಿಯಾಯಿತು. ಇದರಿಂದ ಕೇಂದ್ರ ಸಚಿವರಾಗಿದ್ದ ಜನಾರ್ಧನ ಪೂಜಾರಿಯವರು ಸಾಲ ಮೇಳ ಏರ್ಪಡಿಸಿ ರಸ್ತೆಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ 5 ರಿಂದ 10 ಸಾವಿರದ ತನಕ ಸಾಲ ನೀಡಿ ದೊಡ್ಡ ಕ್ರಾಂತಿಕಾರಕ ನಡೆಗೆ ಕಾರಣರಾದರು. ವಿಧಾ‌ನಸಭೆ ಚುನಾವಣೆ ಸೋತಿದ್ದ ನಾನು ನನ್ನ ಕ್ಷೇತ್ರದಲ್ಲಿ ಸಾಲಮೇಳ ಏರ್ಪಡಿಸಿ ಜಿಲ್ಲಾ ಪಂಚಾಯತಿ ಚುನಾವಣೆ ಗೆದ್ದು ಬಂದೆನು ಎಂದರು.

ಭಾರತ್ ಜೋಡೋ ಯಾತ್ರೆ ವೇಳೆ ಮೊಣಕಾಲ್ಮೂರು ಬಳಿ ಅಜ್ಜಿಯೊಬ್ಬರು ಬಂದು ‘ನಿಮ್ಮ ಅಜ್ಜಿ ನೀಡಿದ ಭೂಮಿಯಲ್ಲಿ ಬೆಳೆದ ಬೆಳೆ’ ರಾಹುಲ್ ಗಾಂಧಿ ಅವರಿಗೆ ಸೌತೆಕಾಯಿ ನೀಡಿ ಆಶೀರ್ವಾದ ಮಾಡಿದ್ದರು. ಇದು ಸಾಧ್ಯವಾಗಿದ್ದು ಕಾಂಗ್ರೆಸ್ ಪಕ್ಷ ಹಾಗೂ ಇಂದಿರಾಗಾಂಧಿ ಅವರಿಂದ. ಅಂಗನವಾಡಿ ಯೋಜನೆ 50 ವರ್ಷ ಪೂರೈಸಿದೆ. 50 ವರ್ಷದ ಹಿಂದೆ ದೇಶದ ಪುಟ್ಟ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು, ಉತ್ತಮ ಪ್ರಾಥಮಿಕ ಶಿಕ್ಷಣ ನೀಡಬೇಕು ಎಂದು ಪ್ರಾರಂಭ ಮಾಡಿದರು. ಇವುಗಳನ್ನು ಯಾವ ಸರ್ಕಾರವೂ ನಿಲ್ಲಿಸಲು ಆಗಿಲ್ಲ. ವಿಧವಾ, ವೃದ್ಧಾಪ್ಯ ಪಿಂಚಣಿ ನೀಡಿದ್ದು ಇಂದಿರಾಗಾಂಧಿ ಅವರು ಎಂದು ನೆನೆದರು.

ಟ್ರಂಪ್ ಹೇಳಿದ್ದೇ ಒಂದು ಮೋದಿ ಹೇಳಿದ್ದೇ ಇನ್ನೊಂದು
ಕದನ ವಿರಾಮದ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದೇ ಒಂದು ಮೋದಿಯವರು ಹೇಳಿದ್ದೇ‌ ಒಂದು. ಆದರೆ ಇಂದಿರಾಗಾಂಧಿ ಅವರು ‘ನನ್ನನ್ನು ಹಾಗೂ ಈ ದೇಶವನ್ನೂ ಯಾರೂ ಸಹ ಹೆದರಿಸಲು ಸಾಧ್ಯವಿಲ್ಲ’ ಎಂದು ಗುಡುಗಿದ್ದರು. ನನ್ನ ಕೊನೆಯ ರಕ್ತದ‌ ಹನಿ ಈ ದೇಶದ ಐಕ್ಯತೆ, ‌ಸಮಗ್ರತೆ,‌ ಶಾಂತಿಗೆ ಮೀಸಲು ಎಂದಿದ್ದರು” ಎಂದರು.

“ಪ್ರಪಂಚದ ನೂರಾರು ದೇಶಗಳು ಇಂದಿರಾಗಾಂಧಿಯವರಿಗೆ ಗೌರವ ನೀಡುತ್ತಿದ್ದವು. ಉಕ್ಕಿನ ಮಹಿಳೆ ಎಂದು ಕರೆದವು. ಇವರು ಎಂದಿಗೂ ಸೋಲು ಗೆಲುವಿನ ಬಗ್ಗೆ ಚಿಂತೆ ಮಾಡಲಿಲ್ಲ. ಚಿಕ್ಕಮಗಳೂರಿನಲ್ಲಿ ಉಪಚುನಾವಣೆಯಗೆ ನಿಂತು ಗೆಲುವು ಸಾಧಿಸಿ ಮತ್ತೆ ದೇಶದಲ್ಲಿ ಪಕ್ಷ ಕಟ್ಟಿದರು. ಅಂದು‌‌ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದ ಜನತಾದಳದವರಿಗೆ ದೇಶ ಮುನ್ನಡೆಸಲು ಆಗಲಿಲ್ಲ. ನಂತರ ಇಂದಿರಾಗಾಂಧಿ ಅವರು ಮತ್ತೆ ಚುನಾವಣೆ ಗೆದ್ದು ಈ‌‌‌ ದೇಶದ ಚುಕ್ಕಾಣಿ ಹಿಡಿದರು” ಎಂದರು.

ಭಾವಚಿತ್ರ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ
“ಕಾಂಗ್ರೆಸ್ ಪಕ್ಷಕ್ಕೆ ಇಂದಿರಾಗಾಂಧಿ ಅವರ ಹೆಸರೆಂದರೆ ಉಸಿರಿದ್ದಂತೆ.‌ ಗ್ರಾಮೀಣ ಭಾಗದ ಹಲವಾರ ಮನೆಗಳಲ್ಲಿ ‌ಈಗಲೂ ಇಂದಿರಾಗಾಂಧಿಯವರು ಭಾವಚಿತ್ರ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ.‌ ನಾನು ಸಹ ನನ್ನ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಇಂದಿರಾಗಾಂಧಿ ಚಿತ್ರಮಂದಿರ ಪ್ರಾರಂಭ ಮಾಡಿದ್ದೆ. ಇವರ ನಿಧನದ ನಂತರ ರಾಜೀವ್ ಗಾಂಧಿಯವರು ಅಂದು ನನ್ನನ್ನು ಸೇರಿದಂತೆ ವಿನಯ್ ಕುಮಾರ್ ಸೊರಕೆಯಾಗಿದಾಗಿ ಸುಮಾರು‌ 50ಕ್ಕೂ ಹೆಚ್ಚು ಯುವಕರಿಗೆ ಅವಕಾಶ ನೀಡಿ ಬೆಳೆಸಿದರು” ಎಂದರು.

“ಯುವ ಕಾಂಗ್ರೆಸ್ ಸಮಾವೇಶಕ್ಕೆ ನಾವು ರೈಲಿನಲ್ಲಿ ಹೊರಟಿದ್ದೆವು. ಬೆಂಗಳೂರು ಬಿಟ್ಟು 15 ಕಿಲೋಮೀಟರ್ ದೂರ ಹೋಗಿದ್ದೆವು. ಆ ಸಮಯದಲ್ಲಿ ಇಂದಿರಾಗಾಂಧಿ ಅವರ ಮೇಲೆ ಗುಂಡಿನ ದಾಳಿಯಾಗಿದೆ ಎನ್ನುವ ಸುದ್ದಿ ಬಂದಿತು. ಈ ಘಟನೆಯಿಂದ ಇಡೀ ದೇಶ, ಪ್ರಪಂಚವೇ ದಿಗ್ಬ್ರಮೆಗೆ ಒಳಗಾಯಿತು. ನಂಬಿದ ಆರಕ್ಷಕರೇ ಹತ್ಯೆ ಮಾಡಿದಾಗ ಯಾರನ್ನು ನಂಬುವುದು ಎನ್ನುವ ಪ್ರಶ್ನೆ ಎದುರಾಯಿತು” ಎಂದರು.

“ನೆಹರು ಅವರ ಕುಟುಂಬದ ಇಂದಿರಾಗಾಂಧಿ ಹಾಗೂ ರಾಜೀವ್ ಯವರ ಜೀವಗಳು ದೇಶಕ್ಕಾಗಿ ಹುತಾತ್ಮವಾಗಿವೆ.‌‌ ದೇಶದಲ್ಲಿಯೇ ಕಾಂಗ್ರೆಸ್ ‌ಪಕ್ಷ ಮುಳುಗಿ ಹೋಗುತ್ತಿದೆ ಎನ್ನುವ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದ ಸೋನಿಯಾ ಗಾಂಧಿಯವರು ಪ್ರಧಾನಿ‌ ಪಟ್ಟ ನಿರಾಕರಿಸಿ ಪಕ್ಷ‌ ಕಟ್ಟಿದರು. ಇಂದಿರಾಗಾಂಧಿಯವರ ಹಾದಿಯಲ್ಲಿಯೇ ನಡೆದರು” ಎಂದರು.

ಸೋಲನ್ನು ಒಪ್ಪಿಕೊಳ್ಳಲು ಬಿಜೆಪಿ ತಯಾರಿಲ್ಲ
“ಸೌಮ್ಯ ರೆಡ್ಡಿ ಅವರು ಈ ಭಾಗದಲ್ಲಿ ಅತ್ಯುತ್ತಮ ‌ಕೆಲಸ ಮಾಡಿದ್ದಾರೆ. ಆದರೆ ಮೋಸದಿಂದ ಅವರಿಗೆ ಸೋಲಾಗಿದೆ. ಮತ್ತೊಮ್ಮೆ ‌ಗೆದ್ದು ವಿಧಾನಸಭೆಗೆ ಬರುತ್ತಾರೆ ಎನ್ನುವ ವಿಶ್ವಾಸವಿದೆ. ಮಾಲೂರಿನಲ್ಲಿ ಮರು ಎಣಿಕೆ ಮಾಡಬೇಕು ಎಂದು ತೀರ್ಪು ನೀಡಿದೆ. ಚಿಕ್ಕಮಗಳೂರಿನ ವಿಧಾನ ಪರಿಷತ್ ಕ್ಷೇತ್ರದ ಮರು ಎಣಿಕೆ ನಡೆದಿದೆ. ಆದರೆ ಅದನ್ನು ಘೋಷಣೆ ಮಾಡಲು ಬಿಡುತ್ತಿಲ್ಲ. ಬಿಜೆಪಿಯವರು ಸೋಲನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಪ್ರಜಾಪ್ರಭುತ್ವಕ್ಕೆ ನ್ಯಾಯಾಲಯಗಳು ಗೌರವ ‌ನೀಡುತ್ತವೆ ಎನ್ನುವ ವಿಶ್ವಾಸವಿದೆ” ಎಂದರು.

TAGGED:congressDK ShivakumarSonia Gandhiಕಾಂಗ್ರೆಸ್ಡಿಕೆ ಶಿವಕುಮಾರ್ಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
5 minutes ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
25 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
1 hour ago
Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
2 hours ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
2 hours ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?