Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಹೇಳಿದ್ದು ಆರ್. ಆಶೋಕ್‍ಗೆ ನನಗಲ್ಲ: ಎಂಬಿಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಡಿಕೆಶಿ ಹೇಳಿದ್ದು ಆರ್. ಆಶೋಕ್‍ಗೆ ನನಗಲ್ಲ: ಎಂಬಿಪಿ

Karnataka

ಡಿಕೆಶಿ ಹೇಳಿದ್ದು ಆರ್. ಆಶೋಕ್‍ಗೆ ನನಗಲ್ಲ: ಎಂಬಿಪಿ

Public TV
Last updated: August 17, 2019 12:46 pm
Public TV
Share
3 Min Read
M. B. Patil DKShi
SHARE

-ಮಾಧ್ಯಮಗಳ ಮೇಲೆ ಕಿಡಿ
-ನಮ್ಮಿಬ್ಬರ ಮಧ್ಯೆ ಜುಗಲ್‍ಬಂದಿ ಇರುತ್ತೆ

ವಿಜಯಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದು ಆರ್.ಅಶೋಕ್ ಬಗ್ಗೆ ನನಗಲ್ಲ. ಮಾಧ್ಯಮಗಳಲ್ಲಿ ಈ ಕುರಿತು ತಪ್ಪು ಪ್ರಚಾರವಾಗಿದೆ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಮಾಧ್ಯಮಗಳ ವಿರುದ್ಧ ಕಿಡಿಕಾರಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ನಾನು ಡಿ.ಕೆ.ಶಿವಕುಮಾರ್ ಒಳ್ಳೆಯ ಸ್ನೇಹಿತರು, ನಮ್ಮಿಬ್ಬರ ಮಧ್ಯೆ ಆಗಾಗ ಜುಗಲ್ ಬಂದಿ ನಡೆಯುತ್ತದೆ. ಈ ಕುರಿತು ನಾನು ಡಿ.ಕೆ.ಶಿವಕುಮಾರ್ ಜೊತೆ ಫೋನ್ ಮಾಡಿ ಮಾತನಾಡುತ್ತೇನೆ. ಅನಾವಶ್ಯಕವಾಗಿ ನಮ್ಮಿಬ್ಬರ ಮಧ್ಯೆ ಗೊಂದಲ ಮೂಡಿಸಲಾಗುತ್ತಿದೆ. ಮಾಧ್ಯಮದವರು ಮಾಡಿರುವ ತಪ್ಪಿನಿಂದಾಗಿ ಈ ರೀತಿ ಆಗಿದೆ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

mys ashok

ನಾನು ಗೃಹ ಸಚಿವನಾಗಿದ್ದಾಗ ಫೋನ್ ಟ್ಯಾಪಿಂಗ್ ಕುರಿತು ಅಧಿಕಾರಿಗಳು ಸೇರಿದಂತೆ ಯಾರೂ ನನ್ನ ಜೊತೆ ಮಾಹಿತಿ ಹಂಚಿಕೊಂಡಿಲ್ಲ. ನನ್ನ ಆಪ್ತ ಕಾರ್ಯದರ್ಶಿ ಭೀಮಾಶಂಕರ್ ಹಾಗೂ ವಿಶೇಷ ಅಧಿಕಾರಿಯಾಗಿದ್ದ ಶಶಿ ಅವರ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಫೋನ್ ಟ್ಯಾಪಿಂಗ್ ಅಷ್ಟು ಸಲಿಸಾದ ಕೆಲಸವಲ್ಲ. ಹೀಗಾಗಿ ಫೋನ್ ಟ್ಯಾಪಿಂಗ್ ಮಾಡಿರಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ನಡೆದ ಫೋನ್ ಟ್ಯಾಪಿಂಗ್ ಪ್ರಕರಣವನ್ನು ನೋಡಿದ್ದೇವೆ. ಹೀಗಾಗಿ ಯಾವುದೇ ರಾಜಕಾರಣಿ ಫೋನ್ ಟ್ಯಾಪಿಂಗ್ ಮಾಡುವ ಕೆಲಸಕ್ಕೆ ಕೈ ಹಾಕೋದಿಲ್ಲ. ಅಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತಾಡಿ ಮಾಹಿತಿ ಪಡೆದಿದ್ದೇನೆ. ಯಾವುದೇ ರೀತಿಯ ಫೋನ್ ಟ್ಯಾಪಿಂಗ್ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಅಧಿಕಾರಿಗಳು ಫೋನ್ ಟ್ಯಾಪಿಂಗ್ ಆಗಿರೋ ಬಗ್ಗೆ ಅನುಮಾನ ಇದೆ ಎಂದಿದ್ದಾರೆ. ಹೀಗಾಗಿ ಪ್ರಕರಣದ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

CM BSY

ನಾನು ತಪ್ಪು ಮಾಡಿದ್ದಲ್ಲಿ ನನಗೂ ಶಿಕ್ಷೆಯಾಗಲಿ, ಫೋನ್ ಟ್ಯಾಪಿಂಗ್ ತನಿಖೆ ಬಗ್ಗೆ ಸಿದ್ದರಾಮಯ್ಯ ಅವರದು ವೈಯಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ಅವರ ಸಹಾಯಕ ವೆಂಕಟೇಶ್ ಅವರ ಫೋನ್‍ನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ತನಿಖೆಗೆ ಆಗ್ರಹಿಸಿದ್ದಾರೆ. ಸಿಬಿಐ ತನಿಖೆ ಬಗ್ಗೆ ನಮಗೆ ನಂಬಕೆಯಿಲ್ಲ. ರಾಜ್ಯದಲ್ಲೇ ಅತ್ಯುತ್ತಮ ಅಧಿಕಾರಿಗಳಿದ್ದಾರೆ, ಅವರೇ ತನಿಖೆ ಮಾಡಲು ಸಮರ್ಥರಾಗಿದ್ದಾರೆ ಎಂದರು.

ಶುಕ್ರವಾರ ಭಿನ್ನ ಹೇಳಿಕೆ:
ಫೋನ್ ಟ್ಯಾಪಿಂಗ್ ಕುರಿತು ಶುಕ್ರವಾರ ಹೇಳಿಕೆ ನೀಡಿದ್ದ ಇಬ್ಬರೂ ನಾಯಕರೂ ಸಹ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಎಂ.ಬಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದರು. ಫೋನ್ ಕದ್ದಾಲಿಕೆ ಆಗಿದ್ದರೆ ತನಿಖೆ ಆಗಲಿ. ಅದರಲ್ಲಿ ರಾಜಕೀಯ ಏನಿದೆ? ಜಾತಿ ರಾಜಕಾರಣದ ಆಧಾರದ ಮೇಲೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದ ಓಲೈಕೆಗಾಗಿ ಹೇಳಿಕೆ ಡಿಕೆಶಿ ಇಂತಹ ಹೇಳಿಕೆ ನೀಡಿರಬಹುದು ಎಂದು ಎಂಬಿಪಿ ಹರಿಹಾಯ್ದಿದ್ದರು.

427133

ನಾನು ಸಹ ಒಬ್ಬ ಜವಾಬ್ದಾರಿಯುತ ನಾಯಕ, ಡಿಕೆ ಶಿವಕುಮಾರ್ ಕೂಡ ಒಬ್ಬ ಪ್ರಭಾವಿ ನಾಯಕರಾಗಿದ್ದಾರೆ. ಅವರು ನನ್ನ ಬಗ್ಗೆ ಹಗುರವಾಗಿ ಮಾತನಾಡದಂತೆ ಸಲಹೆ ನೀಡುತ್ತೇನೆ ಎಂದು ಗುಡುಗಿದ್ದರು. ಸ್ನೇಹಿತ ಡಿ.ಕೆ.ಶಿವಕುಮಾರ್ ಹಾಗೂ ನಾನು ಒಂದೇ ಪಕ್ಷದಲ್ಲಿ ಇದ್ದೇವೆ. ಒಕ್ಕಲಿಗರು, ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಓಲೈಸುವ ಆಸೆ ಡಿಕೆ ಶಿವಕುಮಾರ್ ಅವರಿಗೆ ಇರಬಹುದು. ಆದರೆ ನಾನು ಯಾವತ್ತೂ ಅದನ್ನು ಬಯಸಿಲ್ಲ. ನನ್ನ ವಿರುದ್ಧ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಲಿ ಎಂದು ಕಿಡಿಕಾರಿದ್ದರು.

ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸಿ, ವರದಿ ಪಡೆದ ಮೇಲೆ ಸತ್ಯ ಬೆಳಕಿಗೆ ಬರುತ್ತದೆ. ಸತ್ಯಾಸತ್ಯತೆ ತಿಳಿಯದೆ ಆರೋಪ ಮಾಡುವುದು, ಹಗುರವಾಗಿ ಮಾತನಾಡುವುದು ಸೂಕ್ತವಲ್ಲ ಎಂದು ಅಸಮಾಧಾನ ಹೊರ ಹಾಕಿದ್ದರು.

ಡಿಕೆಶಿ ಹೇಳಿದ್ದೇನು?
ಸದಾಶಿವನಗರ ನಿವಾಸದಲ್ಲಿ ಮಾತನಾಡಿದ್ದ ಡಿಕೆಶಿವಕುಮಾರ್, ಯಾವ ಫೋನ್ ಕೂಡ ಟ್ಯಾಪಿಂಗ್ ಆಗಿಲ್ಲ. ಮಾಧ್ಯಮಗಳಿಗೆ ಅದು ಹೇಗೆ ಸಿಗ್ತೋ ಗೊತ್ತಿಲ್ಲ. ನಾನು ಇದರ ಬಗ್ಗೆ ವಿಚಾರಿಸಿದ್ದೇನೆ. ಸಿಎಂ ಇದರ ಬಗ್ಗೆ ಯಾವ ತನಿಖೆ ಬೇಕಾದರೂ ಮಾಡಲಿ ಎಂದು ಹೇಳಿದ್ದರು.

HDK DEEKESHI

ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಹಿಂದಿನ ಗೃಹ ಸಚಿವರಿಗೆ ರಾಜಕಾರಣ ಬೇಕಾಗಿದೆ. ಹಾಗಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಮೇಲೆಲ್ಲ ರೇಡ್ ಗಳು ನಡೆದಿದೆ. ಆಗ ನಮ್ಮ ಮೇಲೆ ಸುಖಾಸುಮ್ಮನೆ ಟ್ಯಾಪಿಂಗ್ ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ. ಅವರು ಏನೇನು ಮಾಡಿದ್ದಾರೆ ಅನ್ನೋದು ಗೊತ್ತಿದೆ, ಏನ್ ಬೇಕೋ ಮಾಡಲಿ, ಹೇಳಲಿ. ಬಿಜೆಪಿಯವರು ನಮ್ಮ ಫೋನ್ ಕದ್ದಾಲಿಸಿದ್ದಾರೆ ಎಂದಿದ್ದರು.

TAGGED:bjpbs yeddyurappacongressDK Shivakumarhd kumaraswamyjdsMB PatilPhone TappingPublic TVಎಂ.ಬಿ.ಪಾಟೀಲ್ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಫೋನ್ ಟ್ಯಾಪಿಂಗ್ಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
19 minutes ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
49 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
2 hours ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
2 hours ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
2 hours ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?