ಬೆಂಗಳೂರು: ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ ಕೈಗೊಂಡಿದ್ದಾರೆ. ಮೇ 13, 14, 15 ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತಕರ ಸಭೆಯಲ್ಲಿ ಡಿಕೆಶಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ
ಪಕ್ಷದ ಕಾರ್ಯಕ್ರಮ ಮುಗಿದ ಬಳಿಕ ಡಿಕೆಶಿ ಉತ್ತರಾಖಂಡದಲ್ಲಿರುವ ಪವಿತ್ರ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದು, ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಅವರು ಕರ್ನಾಟಕಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ