Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಡಿಕೆಶಿಗೆ ನಾಳೆಯೇ ಸಿಎಂ ಆಗಬೇಕೆಂಬ ತವಕ: ಕಾಗೇರಿ

Public TV
Last updated: November 7, 2023 4:37 pm
Public TV
Share
3 Min Read
Vishweshwar Hegde Kageri 1
SHARE

ಚಿತ್ರದುರ್ಗ: ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ನಾಳೆಯೇ ಸಿಎಂ (CM) ಆಗಬೇಕೆಂಬ ತವಕವಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದರು.

ಚಿತ್ರದುರ್ಗದ (Chitradurga) ಕೊಳಾಳ್ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ (Siddaramaiah) ಅಧಿಕಾರದಲ್ಲಿ 2 ದಿನ ಇರ್ತೀನೋ ಬಿಡ್ತೀನೋ ಎಂಬ ಭಾವವಿದೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ ಯಾರಾಗಬೇಕೆಂಬ ಸ್ಪರ್ಧೆ ನಡೆಯುತ್ತಿದ್ದು, ಅಧಿಕಾರದ ದಾಹ ಹೆಚ್ಚಾಗಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದ್ದು, ಈ ಸರ್ಕಾರಕ್ಕೆ ಜನರ ಹಿತ ಕಾಪಾಡುವಲ್ಲಿ ಕಾಳಜಿಯೇ ಕಾಣುತ್ತಿಲ್ಲ ಎಂದು ಆರೋಪಿಸಿದರು.

Vishweshwar Hegde Kageri 2

ಕಾವೇರಿ ನೀರು ಈಗಲೂ ತಮಿಳುನಾಡಿಗೆ ಹರಿಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಶಿವಮೊಗ್ಗ, ಕೋಲಾರದಲ್ಲಿ ಖಡ್ಗ ಹಿಡಿದು ಟಿಪ್ಪು ಮೆರವಣಿಗೆ ನಡೆದಿದ್ದು, ಕೋಮು ಭಾವನೆ ಕೆರಳಿಸುವ ಮತ್ತು ದ್ವೇಷ ಭಾವನೆ ಹಬ್ಬಿಸುವ ಕೆಲಸಕ್ಕೆ ಸರ್ಕಾರದ ರಕ್ಷಣೆ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಎಲ್ಲೆಡೆ ಬರ ತಾಂಡವವಾಡ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ 17 ತಂಡ ರಚಿಸಿಕೊಂಡು ಬರ ಅಧ್ಯಯನ ನಡೆಸುತ್ತಿದೆ. ಇಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ನಮ್ಮ ತಂಡ ಅಧ್ಯಯನ ನಡೆಸಲಿದ್ದು, ಈ ಭಾಗದಲ್ಲಿ ಜೋಳ, ಮೆಕ್ಕೆಜೋಳ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಓರ್ವ ರೈತ ಎಕರೆಗೆ 30 ಸಾವಿರ ರೂ. ಖರ್ಚು ಮಾಡಿದ್ದು, ಆತನಿಗೆ 2 ಸಾವಿರ ರೂ. ಕೂಡ ಕೈಗೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಶೀಘ್ರವೇ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಮೇವು, ನೀರು ಪೂರೈಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದ ರೈತರು, ಸಾಕಿ ಸಲಹಿದ ದನ-ಕರುಗಳನ್ನು ಮಾರಾಟ ಮಾಡಲು ಮುಂದಾಗಿದ್ದು, ಬದುಕನ್ನು ಕಟ್ಟಿಕೊಳ್ಳಲು, ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯದ ಸಿಎಂ, ಡಿಸಿಎಂ, ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಗುತ್ತಿಗೆದಾರರ ಹಣ ಬಿಡುಗಡೆಗೊಳಿಸಿ, ಆ ಹಣ ಪಡೆಯುವಲ್ಲಿ ತಲ್ಲೀನರಾಗಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ – ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಿಜೆಪಿ ಸಂಸದ

ಸರ್ಕಾರದಿಂದ ರಾಜ್ಯದ ಜನರ ಕಷ್ಟಕ್ಕೆ ಸ್ಪಂದಿಸುವ ಚಟುವಟಿಕೆ ನಡೆದಿಲ್ಲ. ಬಿಜೆಪಿ ಅಧ್ಯಯನದ ಬಳಿಕ ಸರ್ಕಾರ ಎಚ್ಚೆತ್ತು ಜಿಲ್ಲಾ ಸಚಿವರಿಗೆ ಪ್ರವಾಸ ಮಾಡಲು ಸಿಎಂ ಸೂಚಿಸಿದ್ದು, ಪ್ರತಿ ಜಿಲ್ಲೆಗಳಿಗೆ 5, 10, 12 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಆದರೆ ಈವರೆಗೆ ಜಿಲ್ಲೆಗೆ ತಲುಪಿಲ್ಲ. ಹಣ ನೀಡುವುದಾಗಿ ಘೋಷಿಸಿದ್ದಾರಷ್ಟೇ ಎಂದು ಕಿಡಿಕಾರಿದರು.

ನಮ್ಮ ಬಿಜೆಪಿ ಸರ್ಕಾರದಲ್ಲಿ ಸಮರ್ಪಕ ವಿದ್ಯುತ್ ಪೂರೈಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ವಿದ್ಯುತ್ ಕಡಿತದಿಂದ ರೈತರಿಗೆ ಸಮಸ್ಯೆಯಾಗುತ್ತಿದೆ. ರಾತ್ರಿ ವಿದ್ಯುತ್ ಆನ್ ಹಾಗೂ ಆಫ್ ಮಾಡುವ ವೇಳೆ ರೈತರಿಗೆ ಸಮಸ್ಯೆಯಾಗುತ್ತಿದ್ದು, ಕಾಡು ಪ್ರಾಣಿಗಳಿಂದ ರೈತರಿಗೆ ಅನೇಕ ಕಡೆ ಸಮಸ್ಯೆ ಉದ್ಭವವಾಗಿದೆ. ಹೀಗಾಗಿ ನಿರಂತರ 7 ಗಂಟೆ ವಿದ್ಯುತ್ ಅನ್ನು ರೈತರ ಜಮೀನಿಗೆ ಸರಬರಾಜು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳೇ ಶಾಲೆಗೆ ಬೀಗ ಹಾಕಿ ಆಕ್ರೋಶ

ಕೇಂದ್ರ ಸರ್ಕಾರ ಈಗಾಗಲೇ ಅಧಿಕಾರಿಗಳಿಂದ ಬರ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ಅಧಿಕಾರಿಗಳು ವರದಿ ನೀಡುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದತ್ತ ಬೆರಳು ಮಾಡಿ ತೋರಿಸಲಾಗುತ್ತಿದೆ. 2014 ರಿಂದ 23 ರವರೆಗೆ 13.488 ಕೋಟಿ ರೂ. ಹಣ ಬಂದಿದೆ. ಆದರೂ ಕೇಂದ್ರದತ್ತ ಬೆರಳು ಮಾಡುವ ರಾಜ್ಯ ಸರ್ಕಾರಕ್ಕೆ ನಾಚಿಕೆ ಆಗಬೇಕು. ಮೋದಿ ಸರ್ಕಾರ ರಾಜ್ಯಕ್ಕೆ ಯಾವತ್ತೂ ಅನ್ಯಾಯ ಮಾಡಿಲ್ಲ. ಸಿದ್ದರಾಮಯ್ಯ ಈ ರೀತಿ ಆಡಳಿತ ಮಾಡಿದರೆ ಜನ ಸಹಿಸಲ್ಲ. ಮುಂದಿನ ದಿನಗಳಲ್ಲಿ ಜನ ಸೂಕ್ತ ಉತ್ತರ ಕೊಡುತ್ತಾರೆ ಎಂದರು.

TAGGED:bjpChitradurgacongressDK ShivakumarDrought StudysiddaramaiahVishweshwar Hegde Kageriಕಾಂಗ್ರೆಸ್ಚಿತ್ರದುರ್ಗಡಿಕೆ ಶಿವಕುಮಾರ್ಬರ ಅಧ್ಯಯನಬಿಜೆಪಿವಿಶ್ವೇಶ್ವರ ಹೆಗಡೆ ಕಾಗೇರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
13 minutes ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
1 hour ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
5 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
6 hours ago

You Might Also Like

N Ravikumar
Bengaluru City

ಡಿಸಿ ಬಗ್ಗೆ ವಿವಾದಾತ್ಮಕ ಹೇಳಿಕೆ | ಕರ್ನಲ್ ಸೋಫಿಯಾ ವಿರುದ್ಧದ ಹೇಳಿಕೆಗೆ ಆದೇಶ ಗೊತ್ತಾ? – ರವಿಕುಮಾರ್‌ಗೆ ಹೈಕೋರ್ಟ್ ಚಾಟಿ

Public TV
By Public TV
23 minutes ago
Abdul Rahim Murder 1
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ – ಮೂವರು ಆರೋಪಿಗಳ ಬಂಧನ

Public TV
By Public TV
24 minutes ago
tree falls in Charmady Ghat tourists just missed
Chikkamagaluru

ಕಾರು ಪಾಸ್ ಆಗ್ತಿದ್ದಂತೆ ಮುರಿದುಬಿದ್ದ ಬೃಹತ್‌ ಮರ – ಪ್ರವಾಸಿಗರು ಜಸ್ಟ್ ಮಿಸ್

Public TV
By Public TV
48 minutes ago
RCB 2 1
Cricket

RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

Public TV
By Public TV
48 minutes ago
mangaluru congress leaders
Dakshina Kannada

ಮಂಗಳೂರು| ಒತ್ತಡಕ್ಕೆ ಮಣಿದು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹಮೀದ್‌ ರಾಜೀನಾಮೆ ಘೋಷಣೆ

Public TV
By Public TV
1 hour ago
Mangaluru Murder 1
Dakshina Kannada

ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?