Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ: ಡಿಕೆಶಿ

Districts

ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ: ಡಿಕೆಶಿ

Public TV
Last updated: December 7, 2019 8:07 pm
Public TV
Share
3 Min Read
BSY DKSHI
SHARE

ರಾಮನಗರ: ಉಪಚುನಾವಣೆಗೂ ಮೊದಲು ಭಾರೀ ಸುದ್ದಿಯಾಗಿದ್ದ ಕನಕಪುರ ಮೆಡಿಕಲ್ ಕಾಲೇಜು ವಿಚಾರ, ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರುತ್ತಿದಂತೆ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಡಾ.ಸುಧಾಕರ್ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ನಡುವಿನ ಕಾಳಗಕ್ಕೂ ಕಾರಣವಾಗಿತ್ತು. ಆದರೆ ಇದೀಗ ಡಿಕೆ ಶಿವಕುಮಾರ್ ಮತ್ತೆ ಮೆಡಿಕಲ್ ವಿಚಾರವಾಗಿ ಸಿಡಿದೆದ್ದಿದ್ದು, ಕನಕಪುರ ಮೆಡಿಕಲ್ ಕಾಲೇಜು ರದ್ದುಗೊಳಿಸಿದ ಬಗ್ಗೆ ಮರು ಪರಿಶೀಲನೆ ನಡೆಸಿ ಮರು ಆದೇಶಕ್ಕಾಗಿ ಪಟ್ಟು ಹಿಡಿದು ಶನಿವಾರ ಸಿಎಂಗೆ ಪತ್ರ ಬರೆದಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆ ಮರು ಆದೇಶ ಹೊರಡಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಹೋರಾಟಕ್ಕೆ ಆಸ್ಪದ ನೀಡುವುದಿಲ್ಲವೆಂದು ಸಿಎಂ ಯಡಿಯೂರಪ್ಪರನ್ನ ನಂಬಿರುವುದಾಗಿ ಎಂದು ಶಿವಕುಮಾರ್ ಅವರು ಯಡಿಯೂರಪ್ಪನವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

DKSHI LETTER copy

ಮೆಡಿಕಲ್ ಕಾಲೇಜಿಗೆ ಒತ್ತಾಯಿಸಿ ಶನಿವಾರ ಬರೆದ ಪತ್ರದಲ್ಲಿ ಡಿಕೆ ಶಿವಕುಮಾರ್, ಯಡಿಯೂರಪ್ಪನವರಿಗೆ ಅವರ ದಾಟಿಯಲ್ಲಿದೇ ತಿವಿಯುವುದರ ಮೂಲಕ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಕನಕಪುರದ ಜನತೆಗಾಗಿ ಸರ್ಕಾರ ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಕಾಲೇಜು ಕಟ್ಟಡ ನಿರ್ಮಾಣದ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸಬೇಕು. ಒಂದು ವೇಳೆ ನಿಮ್ಮ ಸರ್ಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು. ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ. ಇದಕ್ಕೆ ನೀವು ಅವಕಾಶ ನೀಡುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
‘ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ತಾವು ದ್ವೇಷದ ರಾಜಕಾರಣ ಮಾಡುವುದಿಲ್ಲ, ಜನರ ಹಿತದೃಷ್ಟಿ ಹಾಗೂ ಅಭಿವೃದ್ಧಿ ವಿಚಾರವಾಗಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಯಡಿಯೂರಪ್ಪನವರು ಬಸವ ತತ್ವಗಳನ್ನು ಪಾಲಿಸುವುದಾಗಿ ಹೇಳಿಕೊಳ್ಳುವ ಅವರು ಈ ಹಿಂದೆ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೆ. ಆದರೆ ನಂತರದ ದಿನಗಳಲ್ಲಿ ಅವರು ತಮ್ಮ ಮಾತಿಗೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕನಕಪುರ ವೈದ್ಯಕೀಯ ವಿಜ್ಞಾನ ಕಾಲೇಜು ಆದೇಶವನ್ನು ರದ್ದುಗೊಳಿಸಿರುವುದು ಮುಖ್ಯಮಂತ್ರಿಗಳು ತಮ್ಮ ಮಾತು ತಪ್ಪಿರುವುದಕ್ಕೆ ಸಾಕ್ಷಿಯಾಗಿದೆ.

Sudhakar DKSHI

ಕಳೆದ ಸರ್ಕಾರ 2018-19ನೇ ಸಾಲಿನ ಬಜೆಟ್‍ನಲ್ಲಿ ಕನಕಪುರ ವೈದ್ಯಕೀಯ ಕಾಲೇಜಿಗೆ ಅನುಮೋದನೆ ನೀಡಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ನೀವು ನಿಮ್ಮ ಅಭಿಪ್ರಾಯ ಹಾಗೂ ಒಪ್ಪಿಗೆಯನ್ನೂ ಸೂಚಿಸಿದ್ದಿರಿ. ನಂತರ ಯೋಜನಾ ಇಲಾಖೆ, ಆರ್ಥಿಕ ಇಲಾಖೆ, ಕಾನೂನು ಮತ್ತು ಸಂಸದೀಯ ಇಲಾಖೆ ಈ ಪ್ರಸ್ತಾವನೆ ಪರಿಶೀಲಿಸಿ 2018ರ ಡಿಸೆಂಬರ್ 13 ರಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದಾದ ನಂತರ ಮೆಡಿಕಲ್ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಕನಕಪುರದ ರಾಯಸಂಧ್ರ ಹಳ್ಳಿಯಲ್ಲಿ 25 ಎಕರೆ ಜಮೀನು ನಿಗದಿ ಮಾಡಲಾಗಿತ್ತು. ನಂತರ ಟೆಂಡರ್ ಕರೆದು ಗುದ್ದಲಿ ಪೂಜೆ ಮಾತ್ರ ಬಾಕಿ ಉಳಿದಿತ್ತು.

ಟೆಂಡರ್ ಕರೆದು ಗುದ್ದಲಿ ಪೂಜೆ ನಡೆಸುವ ಹಂತದಲ್ಲಿರುವ ಯೋಜನೆಯನ್ನು ನಿಮ್ಮ ಏಕವ್ಯಕ್ತಿ ಸಂಪುಟ ಹಿಂಪಡೆದು ಹಿಂದಿನ ಸರ್ಕಾರದ ಆದೇಶ ರದ್ದುಗೊಳಿಸಿ ಯೋಜನೆಯನ್ನು ರಾತ್ರೋರಾತ್ರಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ನೀವು ಇಂತಹ ನಿರ್ಧಾರ ಕೈಗೊಂಡಿರುವುದು ನನ್ನ ಮನಸ್ಸಿಗೆ ನೋವು ತಂದಿದೆ. ಯಾವುದೇ ಬೇರೆ ಕ್ಷೇತ್ರಕ್ಕೆ ನೀಡಿದ್ದ ಕಾಲೇಜನ್ನು ರದ್ದುಗೊಳಿಸಿ ಕನಕಪುರಕ್ಕೆ ಕಾಲೇಜು ಅನುಮೋದನೆ ನೀಡಿರಲಿಲ್ಲ ಎಂದು ನಿಮಗೆ ನೆನಪಿಸಲು ಇಚ್ಚಿಸುತ್ತೇನೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಿರುವ ಬಗ್ಗೆ ನಾನು ಯಾವುದೇ ಪ್ರಶ್ನೆ ಮಾಡುವುದಿಲ್ಲ.

ಸರ್ಕಾರ ತನಗೆ ಇಚ್ಛೆ ಬಂದ ಪ್ರದೇಶಗಳಿಗೆ ಎಷ್ಟು ಕಾಲೇಜುಗಳನ್ನು ಬೇಕಾದರೂ ನೀಡಲಿ. ಆದರೆ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂಬುದು ನಮ್ಮ ವಾದ. ಇತ್ತೀಚೆಗೆ ನೀವು ಮಾಗಡಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವುದಾಗಿ ಕೊಟ್ಟಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಅಲ್ಲದೆ ಕಾಲೇಜು ಕಟ್ಟಡ ನಿರ್ಮಾಣದ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸಬೇಕು. ಒಂದು ವೇಳೆ ನಿಮ್ಮ ಸರ್ಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದೆ. ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಒಂದು ವೇಳೆ ಸಿಎಂ ಯಡಿಯೂರಪ್ಪನವರು ಏನಾದ್ರೂ ಕನಕಪುರ ಮೆಡಿಕಲ್ ಕಾಲೇಜನ್ನು ಮರು ಪರಿಶೀಲಿಸಿ ಮರು ಆದೇಶ ಹೊರಡಿಸದೇ ಇದ್ದರೆ, ಡಿಕೆ ಶಿವಕುಮಾರ್ ತಮ್ಮ ಹೋರಾಟ ಶುರು ಮಾಡುವುದು ಪಕ್ಕಾ ಆದಂತಿದೆ. ಅದು ಯಾವ ರೀತಿ ಅನ್ನೋದನ್ನ ಕೂಡಾ ತಿಳಿಸಿರುವುದು ಇದೀಗ ಜಿಲ್ಲೆಯ ಜನರಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.

TAGGED:ChikkaballapuraCM BS YeddyurappaDK Shivakumarkanakapuramedical collegePublic TVramanagaraಕನಕಪುರಚಿಕ್ಕಬಳ್ಳಾಪುರಡಿಕೆ ಶಿವಕುಮಾರ್ಪಬ್ಲಿಕ್ ಟಿವಿಮೆಡಿಕಲ್ ಕಾಲೇಜುರಾಮನಗರಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
5 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
5 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
5 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?