Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

Bengaluru City

ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

Public TV
Last updated: May 2, 2022 3:00 pm
Public TV
Share
2 Min Read
DK Shivakumar
SHARE

ಬೆಂಗಳೂರು: ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ASHWATHNARAYAN

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಜೋರಾಗಿ ಅಧಿಕಾರ ಚಲಾಯಿಸಿದರೆ ಡಿ.ಕೆ.ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಅಂತ ಸಿಎಂ ಹೇಳಿದ್ದಾರೆ. ಇದರಿಂದ ನನಗೂ ಸಹ ಭಯವಾಗುತ್ತಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ ಅಂತ ಕೇಳಿದ್ದರು. ಅವರೊಬ್ಬರೇ ಗಂಡಸರು. ರಾಮನಗರದಲ್ಲಿ ಗಂಡಸರಿಲ್ಲ ನಾವೆಲ್ಲಾ ಹೆಂಗಸರು, ನಾನು, ನನ್ನ ತಮ್ಮ ಅನಿತಾ ಕುಮಾರಸ್ಚಾಮಿ ಎಲ್ಲರು ಅವರ ಗಂಡಸ್ತನ ನೋಡಿ ಗಢ, ಗಢ ಅಂತ ನಡುಗುತ್ತಿದ್ದೇವೆ. ಇದೀಗ ಪಿಎಸ್‍ಐ ಅಕ್ರಮದಲ್ಲಿ ಸಚಿವರೊಬ್ಬರ ಹೆಸರು ಕೇಳಿ ಬರುತ್ತಿದೆ. ಅವರ ತಮ್ಮ ಅನ್ನಲ್ಲ ಅವರ ಕುಟುಂಬಸ್ಥರು ಸಂಬಂಧಿಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಬಗ್ಗೆ ಸಿಎಂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದರು.

dk suresh

ನಾನು ಆ ಸಚಿವರ ಬಗ್ಗೆ ಮಾತನಾಡುತ್ತೇನೆ ಅಂತ ನನಗೆ ಕಾಲ್ ಬರುತ್ತಿವೆ. ಅಣ್ಣ ಅವರ ಬಗ್ಗೆ ಮಾತನಾಡಬೇಡಿ ಅವರು ಈ ಬಾರಿ ಸಿಎಂ ಆಗಿ ಬಿಡುತ್ತಾರೆ. ಅವರ ಬಗ್ಗೆ ಮಾತನಾಡಿ ತೊಂದರೆ ಮಾಡಬೇಡಿ ಅಂತ ಯಾರ್ಯಾರೋ ಕಾಲ್ ಮಾಡಿದ್ದರು. ಇದನ್ನೂ ಓದಿ:  ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

DK SHIVAKUMAR 2 2

ಪಿಎಸ್‍ಐ ನೇಮಕಾತಿ ಅಕ್ರಮದ ಬಗ್ಗೆ ಸಿಎಂ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಮುಂದಾಗಬೇಕು. ಪಿಎಸ್‍ಐ ಪರೀಕ್ಷಾ ಅಕ್ರಮದಲ್ಲಿ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೆ ಅಂತ ನಾನು ಹೇಳಲ್ಲ. ಸಿಎಂ ಬೊಮ್ಮಾಯಿ ಅವರ ಕಾಲದಲ್ಲಿ ಈ ಅಕ್ರಮ ನಡೆದಿಲ್ಲ. ಅದು ನನಗೆ ಚೆನ್ನಾಗಿ ಗೊತ್ತಿದೆ. ಆದರೆ ಸಿಎಂ ಅವರು ಸಚಿವರ ರಕ್ಷಣೆ ಮಾಡಬಾರದು. ಯಾರೇ ಇರಲಿ. ಎಷ್ಟೇ ದೊಡ್ಡವರಾಗಿರಲಿ ನಿಷ್ಪಕ್ಷಪಾತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

Basavaraj Bommai 1

ಸಿಒಡಿ ಅಧಿಕಾರಿಗಳು ಆಯ್ಕೆಯಾದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಹೋಗಿದ್ದಾರಾ, ಅವರೆಲ್ಲ ಎಷ್ಟು ದುಡ್ಡು ಕೊಟ್ಟಿದ್ದಾರೆ ಎಂಬ ಮಾಹಿತಿ ಕಲೆಹಾಕಬಹುದಿತ್ತು. ಆದರೆ ಯಾವ ಅಧಿಕಾರಿಗಳು ಮಾಡಲಿಲ್ಲ. ಸರ್ಕಾರ ಅಕ್ರಮವನ್ನು ಮುಚ್ವಿಹಾಕಲು ಹೊರಟಿದೆ ಅನಿಸುತ್ತಿದೆ. ಪ್ರಭಾವಿ ಸಚಿವರೊಬ್ಬರು ಕರೆ ಮಾಡಿ, ಅಕ್ರಮದಲ್ಲಿರುವರೊಬ್ಬರನ್ನು ಪೊಲೀಸರಿಂದ ಬಿಡಿಸಿದ್ದಾರೆ ಎಂಬ ಮಾಹಿತಿ ಇದೆ. ಯಾರು ಕರೆ ಮಾಡಿದ್ದು, ಏಕೆ ಮಾಡುತ್ತಿದ್ದಾರೆ. ಅವರ ಪಾತ್ರ ಏನು ತನಿಖೆ ನಡೆಸಲಿ. ಭ್ರಷ್ಟಾಚಾರವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ. ಅದು ಹೊರಗೆ ಬಂದೇ ಬರುತ್ತದೆ ಎಂದು ವಾಗ್ದಳಿ ನಡೆಸಿದರು. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

ಈ ವಿಚಾರದ ಬಗ್ಗೆ ಡಿ.ಜಿ ಹಾಗೂ ಗೃಹ ಸಚಿವರು ಬೇರೆ, ಬೇರೆ ಮಾಹಿತಿ ನೀಡಿದ್ದಾರೆ. ನನಗೆ ಮಾಹಿತಿ ಇರುವ ಪ್ರಕಾರ ಕೆಲವರ ಹೆಸರು ತನಿಖೆ ವೇಳೆ ಗೊತ್ತಾಗಿದೆ. ಆದರೆ ಸಿಐಡಿ ಯಾರ ಮನೆಗೆ ಹೋಗಿದ್ದರು. ಅವರ ತನಿಖೆ ಮಾಡಿದ್ದಾರಾ? ನೋಡೋಣ ಸರ್ಕಾರ ಯಾರ, ಯಾರ ರಕ್ಷಣೆ ಮಾಡುತ್ತಾರೆ. ಸಿಎಂಗೆ ಬದ್ದತೆ ಇದ್ದರೆ ನಿರ್ದಾಕ್ಷಣ್ಯ ಕೈಗೊಳ್ಳುವುದೇ ಆಗಿದ್ದರೆ, ಮೊದಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

TAGGED:ashwath narayanabengaluruDK ShivakumarPSI recruitment illegalಅಶ್ವಥ್ ನಾರಾಯಣಡಿ.ಕೆ.ಶಿವಕುಮಾರ್ಪಿಎಸ್‌ಐ ನೇಮಕಾತಿ ಅಕ್ರಮಬೆಂಗಳೂರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Masoud Pezeshkian
Latest

US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

Public TV
By Public TV
24 minutes ago
Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
1 hour ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
1 hour ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
2 hours ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
2 hours ago
trump tariffs
Latest

ಸುಂಕ ಸಮರ ಆಯ್ತು ಈಗ ಭಾರತ ಸೇರಿದಂತೆ 16 ದೇಶಗಳ ಮೇಲೆ ಟ್ರಂಪ್‌ ವ್ಯಾಪಾರ ತನಿಖೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?