ಪಾದಯಾತ್ರೆಯಲ್ಲಿ ಒಬ್ಬರಾದರೂ ಪೊಲೀಸರು ಕೆಲಸ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

Public TV
2 Min Read
DK SHIVAKUMAR

ಬೆಂಗಳೂರು: ಕೊರೊನಾ ಪಾದಯಾತ್ರೆಯಲ್ಲಿ ಒಬ್ಬ ಪೊಲೀಸ್ ಆದರೂ ಕರ್ತವ್ಯ ನಿರ್ವಹಿಸಿದ್ದರಾ, ಎಲ್ಲಾ ಕಾರ್ಯವನ್ನು ನಮ್ಮ ಕಾರ್ಯಕರ್ತರೇ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

ಮೇಕೆದಾಟು ಪಾದಯಾತ್ರೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಕೊರೊನಾ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಒಂದೇ ಒಂದು ಬಸ್ಸು ನಿಯಂತ್ರಿಸುವ ಕೆಲಸವನ್ನಾದರೂ ಮಾಡಿದ್ದಾರಾ? ನಮ್ಮ ಕಾರ್ಯಕರ್ತರೇ ಜನರನ್ನು ನಿಯಂತ್ರಿಸಿದರು. ಊಟದ ಬಳಿಯೂ ನಮ್ಮವರೇ ಎಲ್ಲಾ ನಿಯಂತ್ರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

mekedatu padayatra dk shivakumar saleem ahmed

ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ಕಾರ್ಯಕ್ರಮಕ್ಕೆ ಯಾಕೆ ಕೇಸು ಹಾಕಿಲ್ಲ? ಮೊದಲು ಅಲ್ಲಿ ಕೇಸು ಹಾಕಲಿ ಎಂದ ಅವರು ನಿನ್ನ ವೃತ್ತಿಗೆ, ಬಟ್ಟೆಗೆ ಗೌರವ ಇದ್ದರೆ ಬಿಜೆಪಿ ಮೇಲೂ ಕೇಸು ಹಾಕಿ ಎಂದು ಡಿಜಿಗೆ ಹೇಳುತ್ತೇನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕೊರೊನಾ ಕಡಿಮೆ ಆದ ನಂತರ ಮತ್ತೆ ಪಾದಯಾತ್ರೆ ನಡೆಸುವ ಬಗ್ಗೆ ಸಂಕಲ್ಪದ ಜೊತೆಗೆ ಪ್ರತಿಜ್ಞೆಯೂ ಆಗಿದೆ. ಕೊರೊನಾ ನಿಯಮ ಸಡಿಲವಾಗುತ್ತಿದ್ದಂತೆ ಪಾದಯಾತ್ರೆ ಮುಂದುವರಿಸುತ್ತೇವೆ. 10 ಜನನೋ, 100 ಜನನೋ ಸರ್ಕಾರ ಎಷ್ಟು ಹೇಳುತ್ತಾರೋ ಅಷ್ಟು ನಡೆಯುತ್ತೇವೆ ಎಂದರು.

BJP Flag Final 6

ಬಿಜೆಪಿ ಅವರು ಏನೇನು ಟಾರ್ಗೆಟ್ ಮಾಡುತ್ತಾರೋ ಮಾಡಲಿ. ನನ್ನ ಮಗಳು ಹೇಳುತ್ತಿದ್ದಳು. ಯಾವುದೋ ಒಂದು ಸ್ಕೂಲ್ ಇದೆ ಅದಕ್ಕೂ ನೋಟಿಸ್ ಕೊಡುತ್ತಿದ್ದಾರೆ. ಅದು ತೊಂದರೆ ಕೊಡಬೇಕು ಎಂದೇ ಮಾಡುತ್ತಿದ್ದಾರೆ ಎಂದ ಅವರು, ಪಾದಯಾತ್ರೆ ವಿಚಾರದಲ್ಲೂ ಈ ರೀತಿ ಮಾಡಿದ್ದಾರೆ. ಎಲ್ಲಾ ಸೇರಿ ಒಂದು ಕೇಸು ಹಾಕಬಹುದಿತ್ತು. ಆದರೆ ದಿನ ಒಂದೊಂದು ಕೇಸು ಹಾಕಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

DK Shivakumar siddaramaiah mekedatu padayatra

ಎಲ್ಲರಿಗೂ ಒಂದು ಕಾಲ ಬರುತ್ತದೆ. ಯಾವ್ಯಾವ ಹಳೆ ಕೇಸು ರೀಓಪನ್ ಆಗ್ತಿದೆ ಎಲ್ಲಾ ಗೊತ್ತು. ನಮಗೂ ಒಂದು ಕಾಲ ಬರುತ್ತದೆ. ಅವರ ವಿರುದ್ಧ ಕೇಸು ಹಾಕಿ ಅಂತ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದ ಅವರು ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಕೆಲಸ ಮಾಡಿ 56 ಶಿಕ್ಷಕರು ಸಾವನಪ್ಪಿದರು. ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನೇತಾಜಿ ಜನ್ಮದಿನವಾದ ಜನವರಿ 23 ರಿಂದಲೇ ಗಣರಾಜ್ಯೋತ್ಸವ ಆಚರಣೆ ಪ್ರಾರಂಭ

Share This Article
Leave a Comment

Leave a Reply

Your email address will not be published. Required fields are marked *