Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ವಿಚಾರದಲ್ಲಿ ಬಿಜೆಪಿ ಸರ್ಕಾರ ಜನರೊಂದಿಗೆ ಚೆಲ್ಲಾಟ ಆಡುತ್ತಿದೆ: ಡಿ.ಕೆ. ಸುರೇಶ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್ ವಿಚಾರದಲ್ಲಿ ಬಿಜೆಪಿ ಸರ್ಕಾರ ಜನರೊಂದಿಗೆ ಚೆಲ್ಲಾಟ ಆಡುತ್ತಿದೆ: ಡಿ.ಕೆ. ಸುರೇಶ್

Public TV
Last updated: January 28, 2022 5:19 pm
Public TV
Share
2 Min Read
DK SURESH
SHARE

ಬೆಂಗಳೂರು: ಕೋವಿಡ್ ವಿಚಾರದಲ್ಲಿ ತಮಗೆ ಬೇಕಾದಂತೆ ವಾರಾಂತ್ಯ ಕರ್ಫ್ಯೂ, ಲಾಕ್‍ಡೌನ್ ಮಾಡುವ ಮೂಲಕ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಜನರ ಜೊತೆ ದೊಂಬರಾಟ ಆಡುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ.

CORONA 15

ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಅವರ ಜನ್ಮ ದಿನದ ಅಂಗವಾಗಿ ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣ ರಂಗಮಂದಿರದಲ್ಲಿ ಏರ್ಪಡಿಸಿದ್ದ ಕೋವಿಡ್‍ಗಾಗಿ ಉಚಿತ ಬೂಸ್ಟರ್ ಡೋಸ್, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ವಿತರಣೆ, ಆರೋಗ್ಯ ಶಿಬಿರ, ನೇತ್ರದಾನ ಮತ್ತು ರಕ್ತದಾನ ಶಿಬಿರಗಳನ್ನು ಉದ್ಘಾಟಿಸಿ ನಂತರ ಮಾತನಾಡಿದ ಡಿ.ಕೆ. ಸುರೇಶ್, ಮೇಕೆದಾಟು ಹೋರಾಟದ ಸಂದರ್ಭದಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿತು. ಒಂದು ಸಾವಿರ ಕೇಸ್‍ಗಳಿದ್ದ ಸಂದರ್ಭದಲ್ಲಿ ಲಾಕ್‍ಡೌನ್ ಮಾಡುವ ಸರ್ಕಾರ 50 ಸಾವಿರ ಕೇಸ್‍ಗಳಿರುವಾಗ ಲಾಕ್‍ಡೌನ್ ತೆರವುಗೊಳಿಸುತ್ತದೆ. ಇದು ಎಂತಹ ವಿಪರ್ಯಾಸ ನೋಡಿ. ನಾವು ಅಂದೇ ಹೇಳಿದ್ದೆವು. ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‍ಡೌನ್ ಎಂದು ಸ್ಪಷ್ಟವಾಗಿ ತೋರಿಸುತ್ತದೆ. ರಾಜ್ಯ ಸರ್ಕಾರ ಜನರ ಜೊತೆ ದೊಂಬರಾಟ ಆಡುತ್ತಿದೆ. ಅಧಿಕಾರಿಗಳು ದೊಂಬರಾಟ ಆಡಿಸುತ್ತಿದ್ದಾರೆ. ಜನರ ಆರೋಗ್ಯದ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹೊಸ ವೈರಸ್‌ NeoCoV ಬಗ್ಗೆ ಚೀನಾ ಎಚ್ಚರ – ಮೂವರು ಸೋಂಕಿತರಲ್ಲಿ ಒಬ್ಬರು ಸಾವು!

ಲಾಕ್‍ಡೌನ್ ಮಾಡಿದರೆ ಪರಿಹಾರ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಇಡೀ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಸಚಿವರು, ಅಧಿಕಾರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳ ನಡುವೆ ಯಾರಿಗೂ ಪರಸ್ಪರ ಹೊಂದಾಣಿಕೆ ಇಲ್ಲ. ಒಬ್ಬೊಬ್ಬರೂ ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೆಲ್ಲವನ್ನೂ ಜನ ಗಮನಿಸುತ್ತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಸಜ್ಜಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.ಇದನ್ನೂ ಓದಿ: ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್‌ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ

ಬಿಜೆಪಿಗೆ ಬಿಬಿಎಂಪಿ ಚುನಾವಣೆ ಬೇಕಿಲ್ಲ
ಬಿಜೆಪಿ ಪಕ್ಷವು ಆರ್‌ಎಸ್‌ಎಸ್‌ ಕಚೇರಿಯಲ್ಲೇ ಬಿಬಿಎಂಪಿ ಚುನಾವಣೆ ಮಾಡಲು ತಯಾರಾಗಿದೆ. ಆರ್‌ಎಸ್‌ಎಸ್‌ ಕಚೇರಿಯಲ್ಲಿ ಶಾಸಕರು, ಬಿಜೆಪಿ ಮುಖಂಡರು ಸೇರಿಕೊಂಡು ಬಿಬಿಎಂಪಿ ವಾರ್ಡ್ ವಿಂಗಡಣೆ ಮಾಡುವುದು, ತಮಗೆ ಬೇಕಾದಂತೆ ಮೀಸಲಾತಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇವರಿಗೆ ಬಿಬಿಎಂಪಿ ಚುನಾವಣೆ ಬೇಕಿಲ್ಲ. ಕೆಲ ಸಚಿವರು, ಶಾಸಕರು ಅವರಿಗೆ ಬೇಕಾದ ರೀತಿ ವಾರ್ಡ್‍ಗಳನ್ನು ವಿಂಗಡಣೆ ಮಾಡಿಕೊಳ್ಳುವುದು, ಮೀಸಲಾತಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಗಳೂರು 198 ವಾರ್ಡ್‍ಗಳಿದ್ದಾಗಲೇ ಇವರಿಗೆ ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ. ಈಗ 243 ವಾರ್ಡ್‍ಗಳನ್ನು ಮಾಡಲು ಹೊರಟಿದೆ. ವಾರ್ಡ್‍ಗಳ ವಿಸ್ತರಣೆಗೆ ಮಾನದಂಡ ಏನು ಎಂಬುದರ ಬಗ್ಗೆ ಮೊದಲು ಸುತ್ತೋಲೆ ಹೊರಡಿಸಬೇಕು. ತಮ್ಮದೇ ಸರ್ಕಾರ, ತಮ್ಮದೇ ಅಧಿಕಾರ ಎಂದು ತಮಗೆ ಬೇಕಾದಂತೆ ಹುಚ್ಚು ಹುಚ್ಚಾಗಿ ವಾರ್ಡ್‍ಗಳನ್ನು ಮಾಡಿ, ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಹಾಳು ಮಾಡಲು ನಾವು ಬಿಡುವುದಿಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

ಕಾಂಗ್ರೆಸ್ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಮಾತನಾಡಿ, ಕೋವಿಡ್ ಮಹಾಮಾರಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಆದರೆ ಸರ್ಕಾರ ಇಂತಹ ಸಂದರ್ಭದಲ್ಲಿ ಸಾಮಾನ್ಯ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಮ್ಮ ಪಕ್ಷ ಮತ್ತು ಅಭಿಮಾನಿಗಳು ಸೇರಿ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಮತ್ತು ಇತರರಿಗೆ ಕೋವಿಶೀಲ್ಡ್, ಕೋವ್ಯಾಕ್ಸಿನ್ ನೀಡಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರ ಜನರ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸುತ್ತದೆ ಎಂದು ಗೊತ್ತಿಲ್ಲ. ಆದರೆ ನಮ್ಮ ಸೇವೆ ನಿರಂತರವಾಗಿ ಬಡವರ ಪರ ಇರುತ್ತದೆ ಎಂದರು.

Share This Article
Facebook Whatsapp Whatsapp Telegram
Previous Article akhilesh yadav 2 ದೆಹಲಿಯಲ್ಲಿ ನನ್ನ ಹೆಲಿಕಾಪ್ಟರ್ ತಡೆಯಲಾಗಿದೆ, ಇದು ಬಿಜೆಪಿ ಪಿತೂರಿ: ಅಖಿಲೇಶ್ ಯಾದವ್
Next Article blg suicide ಪತಿಯಿಂದ ನಿತ್ಯವೂ ಟಾರ್ಚರ್ – ಮಗನೊಂದಿಗೆ ಕರೆಗೆ ಹಾರಿ ಪತ್ನಿ ಆತ್ಮಹತ್ಯೆ

Latest Cinema News

Suhana syed
ನಿತಿನ್ ಶಿವಾಂಶ್ ಜೊತೆ ಪ್ರೀತಿ ಗುಟ್ಟು ರಟ್ಟು ಮಾಡಿದ ಖ್ಯಾತ ಗಾಯಕಿ ಸುಹಾನಾ ಸಯ್ಯದ್
Cinema Latest Sandalwood Top Stories
bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories

You Might Also Like

Banu Mushtaq 1
Districts

ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

11 minutes ago
Man Strangles Live In Partner Stuffs Body In Bag. Then Takes Selfie With It
Crime

ಲಿವ್ ಇನ್ ಗೆಳತಿಯ ಕೊಂದು ನದಿಗೆಸೆದ ಪ್ರಿಯಕರ – ಶವದ ಜೊತೆ ಸೆಲ್ಫಿ ಕ್ಲಿಕ್ಕಿಸಿ ವಿಕೃತಿ ಮೆರೆದವ ಅಂದರ್‌

14 minutes ago
Banu Mushtaq
Districts

ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ

1 hour ago
Banu Mushtaq participates in the Dasara worship at Chamundi Temple in Mysuru
Districts

ಮೈಸೂರು ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್‌

2 hours ago
Tumakuru dasara
Districts

ತುಮಕೂರು ದಸರಾ ಉದ್ಘಾಟಿಸಿದ ಪರಮೇಶ್ವರ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?