Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

Districts

ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

Public TV
Last updated: March 22, 2022 6:03 pm
Public TV
Share
2 Min Read
dk suresh
SHARE

ಹಾಸನ: ಜನರೇ ಬಿಜೆಪಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಆದ್ದರಿಂದ ಅದರ ಬಗ್ಗೆ ನಾವು ಜಾಸ್ತಿ ಮಾತನಾಡಲ್ಲ ಎಂದು ಪೆಟ್ರೋಲ್, ಡಿಸೇಲ್, ಗ್ಯಾಸ್ ಏರಿಕೆ ಕುರಿತು ಸಂಸದ ಡಿ.ಕೆ. ಸುರೇಶ್ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಮುಗಿದಿದೆ. ಇದರಿಂದಾಗಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಸಿದ್ದಾರೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ತಡೆಯುವುದರಲ್ಲಿ ವಿಫಲವಾಗಿದೆ. ಜನ ಆರ್ಥಿಕ ಪರಿಸ್ಥಿತಿ ದುಸ್ಥಿತಿಯಲ್ಲಿದೆ. ಚುನಾವಣೆ ಇದ್ದಿದ್ದರಿಂದ ಪೆಟ್ರೋಲ್, ಡಿಸೇಲ್, ಬೆಲೆ ಏರಿಕೆ ತಡೆದಿದ್ದರು. ಒಂದೇ ಸಾರಿ ಏರಿಕೆ ಮಾಡಿದರೆ ಜನ ಪ್ರತಿಭಟನೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಸ್ವಲ್ಪ ಸ್ವಲ್ಪವೇ ಹೆಚ್ಚಿಸುತ್ತಿದ್ದಾರೆ. ಇನ್ನೂ ಕೂಡ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡುತ್ತಾರೆ ಎಂದು ಭವಿಷ್ಯ ನುಡಿದರು.

bjp flag

ದಿ ಕಾಶ್ಮೀರ ಫೈಲ್ಸ್ ಸಿನಿಮಾ ವಿಚಾರವಾಗಿ ಮಾತನಾಡಿ, ವಿ.ಪಿ.ಸಿಂಗ್ ಇದ್ದಾಗ ಕಾಶ್ಮೀರದಲ್ಲಿ ನಡೆದಿದ್ದ ಘಟನೆಯಲ್ಲಿ ಎಲ್.ಕೆ.ಅಡ್ವಾನಿ ಅವರು ಒಂದು ಭಾಗವಾಗಿದ್ದರು. ಅವರು ಮಾಡಿದ್ದೇ ಸರಿ ಅನ್ನುವ ರೀತಿಯ ಮಾಧ್ಯಮದವರು ಹೇಳುತ್ತಿದ್ದೀರಿ. ವಿರೋಧ ಪಕ್ಷಗಳು ಇರುವುದೇ ಎಲ್ಲದಕ್ಕೂ ವಿರೋಧ ಮಾಡಲು ಎನ್ನುವ ರೀತಿ ಬಿಂಬಿಸುತ್ತಿದ್ದೀರಿ. ಅವರು ನಿಮ್ಮನ್ನು ಆಳುತ್ತಿದ್ದಾರೆ, ನಾವು ನಿಮ್ಮನ್ನು ನಂಬಿ ಬಂದಿದ್ದೀವಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಗ್ಯಾಸ್, ಡೀಸೆಲ್, ಪೆಟ್ರೋಲ್‍ಗೆ ವಿಧಿಸಲಾದ ಲಾಕ್‍ಡೌನ್‍ ತೆಗೆಯಲಾಗಿದೆ: ರಾಹುಲ್ ಗಾಂಧಿ

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಿಂದ ರಾಜ್ಯಕ್ಕೆ ಚುನಾವಣೆಗಳು ಬದಲಾಗುತ್ತವೆ. ಕರ್ನಾಟಕ ರಾಜ್ಯದ ಚುನಾವಣೆ ಬಹಳ ದೂರವಿದೆ. ಮುಂದೆ ಗುಜರಾತ್, ಹಿಮಾಚಲಪ್ರದೇಶ ರಾಜ್ಯಗಳ ಚುನಾವಣೆ ಇದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಹೋರಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Congress

ಜೆಡಿಎಸ್‍ನ ಕೆಲ ಶಾಸಕರು ಕಾಂಗ್ರೆಸ್ ನಾಯಕರ ಭೇಟಿ ವಿಚಾರವಾಗಿ ಮಾತನಾಡಿ, ಇದುವರೆಗೂ ಹಾಸನ ಜಿಲ್ಲೆಯ ಜೆಡಿಎಸ್ ಶಾಸಕರು ಯಾರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ಟಿಕೆಟ್‍ಗಾಗಿ ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬರುವುದು ಬೇಡ. ಸಾಮಾನ್ಯ ಕಾರ್ಯಕರ್ತನಾಗಿ ಬಂದರೆ ಸ್ವಾಗತ ಎಂದರು.

jds logo

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿ ವಿಚಾರವಾಗಿ ಮಾತನಾಡಿ, ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಏನೇ ಮಾತನಾಡಲಿ. ತಮಿಳುನಾಡಿನ ಅನುಮತಿ ಬೇಕಾಗಿಲ್ಲ. ಮುಖ್ಯಮಂತ್ರಿಗಳು ಪರಿಸರ ಇಲಾಖೆ ಅನುಮತಿ ಪಡೆದರೆ ಸಾಕು ಎಂದು ಹೇಳಿದರು. ಇದನ್ನೂ ಓದಿ: ಹಲವು ಪಾಕಿಸ್ತಾನಗಳನ್ನು ಹುಟ್ಟುಹಾಕಲು ಬಿಜೆಪಿ ಬಯಸುತ್ತಿದೆ: ಮೆಹಬೂಬಾ ಮುಫ್ತಿ

mekedatu 1 1

ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಬಿಜೆಪಿ ಸರ್ಕಾರವಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗುತ್ತೋ ಹೊರೆತು ಅನಾನೂಕೂಲ ಆಗುವುದಿಲ್ಲ. 25 ಸಂಸದರನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಿಸರ ಇಲಾಖೆಯ ಅನುಮತಿ ಪಡೆಯದಿದ್ದರೆ ಸಂಸದರು ಕರ್ನಾಟಕ ರಾಜ್ಯಕ್ಕೆ ಮಾಡಿದ ದೊಡ್ಡ ದ್ರೋಹವಾಗುತ್ತದೆ. ನೀರನ್ನು ಸಮುದ್ರ ಪಾಲು ಮಾಡಲು ಇವರೇ ಕಾರಣವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗಿಡಲು ಸಾಧ್ಯವಿಲ್ಲ: ಮುನಿರತ್ನ

TAGGED:bjpcongressdieseldk sureshpetrolಕಾಂಗ್ರೆಸ್ಡಿ.ಕೆ.ಸುರೇಶ್ಡಿಸೇಲ್ಪೆಟ್ರೋಲ್ಬಿಜೆಪಿಬೆಲೆ ಏರಿಕೆ
Share This Article
Facebook Whatsapp Whatsapp Telegram

Cinema news

Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories

You Might Also Like

Prahlad Joshi 1
Latest

ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಪ್ರಚೋದನಕಾರಿ ನೀತಿ: ಕಾಂಗ್ರೆಸ್‌ ವಿರುದ್ಧ ಜೋಶಿ ಕಿಡಿ

Public TV
By Public TV
1 minute ago
Vijayapura Plane crash
Districts

ಖಾಸಗಿ ವಿಮಾನ ಪತನವಾದ ಜಮೀನು ಮಾಲೀಕರ ಗೋಳಾಟ – 5 ಲಕ್ಷ ರೂ. ಪರಿಹಾರಕ್ಕೆ ಮನವಿ

Public TV
By Public TV
36 minutes ago
Leopard 1
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ

Public TV
By Public TV
45 minutes ago
Gen Naravane memoir
Latest

ಮೇಜರ್‌ ನರವಣೆ ʻಅಪ್ರಕಟಿತ ಆತ್ಮಚರಿತ್ರೆʼ ಎಬ್ಬಿಸಿದ ಬಿರುಗಾಳಿ – 2020 ಆಗಸ್ಟ್‌ 31ರ ರಾತ್ರಿಗೂ ಮುನ್ನ ಏನಾಯ್ತು?

Public TV
By Public TV
1 hour ago
udupi death case
Latest

ಉಡುಪಿ| ವಸತಿಗೃಹದಲ್ಲಿ ಯಾತ್ರಾರ್ಥಿ ಕುಳಿತ ಕುರ್ಚಿಯಲ್ಲೇ ಸಾವು

Public TV
By Public TV
1 hour ago
Basanagouda Daddal
Bengaluru City

ಸಿಎಂ-ಡಿಸಿಎಂ ನಡುವೆ ಕುರ್ಚಿ ಗಲಾಟೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ: ಬಸನಗೌಡ ದದ್ದಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?