ವಾಸ್ತು ಪ್ರಕಾರ ಪೂಜೆ ಮಾಡ್ತಿಲ್ಲ ಅಂತಾ ಸಚಿವ ರೇವಣ್ಣರಿಂದ ಅರ್ಚಕರಿಗೆ ಕ್ಲಾಸ್

Public TV
1 Min Read
HNS REVANNA VASTU

ಹಾಸನ: ವಾಸ್ತು ಪ್ರಕಾರ ಪೂಜೆ ಮಾಡದ ಹಿನ್ನೆಲೆ ಅರ್ಚಕರಿಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕ್ಲಾಸ್ ತಗೆದುಕೊಂಡಿದ್ದಾರೆ.

ಭಾನುವಾರ ನಗರದ ಜಿಲ್ಲಾಸ್ಪತ್ರೆ ಸಮೀಪದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ ಶಂಕು ಸ್ಥಾಪನೆಗೆ ಸಚಿವ ರೇವಣ್ಣ ಆಗಮಿಸಿದ್ದರು. ಈ ವೇಳೆ ಪ್ರಾರಂಭವಾಗಿದ್ದ ಪೂಜೆ ತಡೆದು, ದಿಕ್ಕು ಬದಲಿಸುವಂತೆ ಅರ್ಚಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾಸ್ತು ಪ್ರಕಾರ ನೀವು ಪೂಜೆ ಮಾಡುತ್ತಿಲ್ಲ ಎಂದು, ತಾವೇ ಮುಂದೆ ನಿಂತು ಪೂಜೆ ಮಾಡಿಸಲು ಮುಂದಾದ ಸಚಿವರು, “ರೀ ನೀರು ಮೊದಲು ಹಾಕಿ, ನೀವು ನಮ್ಮ ತಲೆ ಬಿಸಿ ಮಾಡಬೇಡಿ” ಎಂದು ಅರ್ಚಕ ರವಿ ಅವರ ವಿರುದ್ಧ ರೇಗಾಡಿದ್ದಾರೆ.

ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಅರ್ಚಕ ರವಿ ಅವರು, ನಾವು ಮೊದಲು ಪೂಜೆ ಮಾಡುತ್ತಿದ್ದ ದಿಕ್ಕನ್ನು ಬದಲಾಯಿಸಿ, ವಾಸ್ತು ಪ್ರಕಾರ ಈಶಾನ್ಯ ದಿಕ್ಕಿಗೆ ಪೂಜೆ ಮಾಡಬೇಕು ಎಂದು ತಾಖೀತು ಮಾಡಿದರು. ಆದರೆ ನಾವು ಪೂಜೆ ಮಾಡುತ್ತಿರುವ ದಿಕ್ಕು ಸರಿಯಾಗಿದ್ದರು ಬದಲಾಯಿಸಬೇಕೆಂದು ಸಚಿವರು ಹೇಳಿದರು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *