Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

Bengaluru City

ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

Public TV
Last updated: July 29, 2025 7:25 am
Public TV
Share
5 Min Read
Naga Panchami
SHARE

ಶ್ರಾವಣ ಮಾಸದ ಶುಕ್ಲಪಕ್ಷದ 5ನೇ ಇಡೀ ಭಾರತದಾದ್ಯಂತ ನಾನಾ ಕಡೆ ನಾನಾ ರೀತಿಯಲ್ಲಿ ನಾಗರ ಪಂಚಮಿಯ (Naga Panchami) ಮನೆ ಮಾಡಿರುತ್ತದೆ. ಈ ದಿನ ಮನೆಮಂದಿ ಮುಂಜಾನೆ ನಾಗನ ಗುಡಿಗೆ ಹೋಗಿ ನಾಗದೇವತೆಗೆ ಪೂಜೆ ಸಲ್ಲಿಸುತ್ತಾರೆ, ನಾಗದೇವರ ಕಲ್ಲಿಗೆ ಹಾಲೆರೆಯುತ್ತಾರೆ. ನಾಗಪೂಜೆಯ ದಿನ ಅನಂತ, ವಾಸುಕಿ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಎಂಬ ಒಂಬತ್ತು ನಾಗದೇವತೆಗಳನ್ನು ಆರಾಧಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಆಚರಣೆ ಸಂಭ್ರಮದಿಂದಲೇ ಕೂಡಿರುತ್ತದೆ. ಬೆಳ್ಳಂ ಬೆಳಗ್ಗೆ ಜನ ಹುತ್ತಕ್ಕೆ ತನಿ ಎರೆಯುವ ಮೂಲಕ ಆಚರಣೆ ಮಾಡುತ್ತಾರೆ.

ಹೌದು. ಭಾರತೀಯ ಪುರಾಣಗಳಲ್ಲಿ ನಾಗಗಳಿಗೆ ದೈವಿಕ ಸ್ಥಾನ ಇದೆ. ಬ್ರಹ್ಮನ ಮಗ ಕಶ್ಯಪ ದಕ್ಷ ಪ್ರಜಾಪತಿಯ ಹದಿನಾರು ಹೆಣ್ಣು ಮಕ್ಕಳನ್ನು ಮದುವೆಯಾಗಿದ್ದ. ಇವರಲ್ಲಿ ಅದಿತಿಯ ಮಕ್ಕಳು ದೇವತೆಗಳು, ದಿತಿಯ ಮಕ್ಕಳು ದೈತ್ಯರು ಮತ್ತು ಕದ್ರುವಿಗೆ ಜನಿಸಿದ್ದ ಸಾವಿರ ಮಕ್ಕಳು ನಾಗಗಳು. ಹೀಗಾಗಿ ನಾಗಗಳು ದೇವತೆಗಳ ಸಂಬಂಧಿಗಳಾಗಿದ್ದಾರೆ ಎಂದು ಜನರ ನಂಬಿಕೆ. ಪುರಾಣಗಳ ಪ್ರಕಾರ, ನಾಗಕುಲದವರು ಪಾತಾಳ ಲೋಕವನ್ನು ಆಳುತ್ತಿದ್ದರು. ಶೇಷ, ತಕ್ಷಕ, ವಾಸುಕಿ, ಅನಂತ, ಪದ್ಮ, ಕಂಬಲ, ಕಾರ್ಕೋಟ, ಅಶ್ವತ್ಥ, ಧೃತರಾಷ್ಟ್ರ, ಶಂಖಪಾಲ, ಕಾಲಿಯಾ, ಪಿಂಗಳ ಎಂಬ 12 ನಾಗಗಳ ಉಲ್ಲೇಖ ಪುರಾಣಗಳಲ್ಲಿ ಬರುತ್ತದೆ. ಮಹಾಭಾರತದ ಪ್ರಕಾರ ರಾಜ ಪರೀಕ್ಷಿತನನ್ನು ನಾಗರಾಜ ತಕ್ಷಕ ಕಚ್ಚಿ ಕೊಂದಿದ್ದ. ಇದಕ್ಕೆ ಪ್ರತಿಕಾರವಾಗಿ ಪರೀಕ್ಷಿತನ ಮಗ ಜನಮೇಜಯ ಸರ್ಪಗಳ ಸಂತಾನವನ್ನೇ ನಿರ್ಮೂಲ ಮಾಡಲು ಮಹಾ ಸರ್ಪಯಜ್ಞವನ್ನೇ ನಡೆಸಿದ್ದ. ನಾಗಕುಲವೇ ನಾಶವಾಗುತ್ತದೆ ಎನ್ನುವಾಗ ಆಸ್ತಿಕ ಎಂಬ ಋಷಿ ಯಾಗಶಾಲೆಗೆ ಬಂದು ಈ ಯಜ್ಞವನ್ನು ತಡೆದಿದ್ದ. ಆಸ್ತಿಕ ನಾಗಯಜ್ಞ ನಿಲ್ಲಿಸಿದ ದಿನವನ್ನೇ ನಾಗರ ಪಂಚಮಿಯಾಗಿ ಆಚರಿಸಲಾಗುತ್ತದೆ ಎಂದು ಪ್ರತೀತಿ.

ಅದಕ್ಕಾಗಿಯೇ ಈ ದಿನ ಭಾರತದಂತಹ ದೇಶದಲ್ಲಿ ಹಳ್ಳಿ ಹಳ್ಳಿಗಳಲ್ಲೂ ನಾಗರ ಕಲ್ಲುಗಳು, ನಾಗದೇವರ ಗುಡಿಗಳು, ಶಿವ ಮತ್ತು ವಿಷ್ಣುವಿನ ದೇವಾಲಗಳಲ್ಲೂ ನಾಗದೇವರಿಗಾಗಿ ಗುಡಿಗಳು ಕಾಣುತ್ತೇವೆ. ಅಲ್ಲದೇ ಕೆಲ ದೇವಾಲಯಗಳಲ್ಲಿ ಕಾಲಸರ್ಪ ಬಾಧೆ, ಸರ್ಪದೋಷ ಪರಿಹಾರಕ್ಕಾಗಿ ಪೂಜಾ ವಿಧಿವಿಧಾನಗಳನ್ನೂ ನೆರವೇರಿಸಲಾಗುತ್ತದೆ. ಕರ್ನಾಟಕದಲ್ಲಿ ನಾಗದೈವಾರಾಧನೆ ಹೆಚ್ಚಾಗಿಯೇ ಇದೆ. ಕರ್ನಾಟಕದಲ್ಲಿ ಅನೇಕ ನಾಗ ದೇವಾಲಯಗಳಿವೆ, ಆದರೆ ಕುಕ್ಕೆ ಸುಬ್ರಹ್ಮಣ್ಯ ಮತ್ತು ಮುಕ್ತಿನಾಗ ಕ್ಷೇತ್ರಗಳು ಪ್ರಮುಖವಾಗಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪ ದೋಷ ನಿವಾರಣೆಗೆ ಹೆಸರುವಾಸಿಯಾಗಿದೆ ಮತ್ತು ಮುಕ್ತಿನಾಗ ಕ್ಷೇತ್ರವು ನಾಗದೋಷ ಪರಿಹಾರಕ್ಕಾಗಿ ಪ್ರಸಿದ್ಧವಾಗಿದೆ. ಕರ್ನಾಟಕ ಹೊರತುಪಡಿಸಿಯೂ ದೇಶದ ವಿವಿಧ ಭಾಗಗಳಲ್ಲಿ ಜನರಿಂದ ಅಗಾಧ ನಂಬಿಕೆ ಗಳಿಸಿರುವ ದೇವಾಲಯಗಳು ಇವೆ. ಮೊದಲಿಗೆ ಕರ್ನಾಟಕದ ಪವರ್‌ಫುಲ್‌ ನಾಗ ದೇವಾಲಯಗಳ ಬಗ್ಗೆ ತಿಳಿಯೋಣ. ಅವುಗಳ ವಿಶೇಷತೆ ಏನೆಂದು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

nagara panchami 9

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಈ ದೇವಾಲಯವು ಕುಮಾರ ಪರ್ವತದ ತಪ್ಪಲಿನಲ್ಲಿ, ಕುಮಾರಧಾರಾ ನದಿಯ ದಡದಲ್ಲಿದೆ. ಇಲ್ಲಿ ವಾಸುಕಿ ಮತ್ತು ಶೇಷನಾಗನನ್ನು ಪೂಜಿಸಲಾಗುತ್ತದೆ. ಸರ್ಪ ದೋಷ ನಿವಾರಣೆಗೆ ಈ ದೇವಸ್ಥಾನಕ್ಕೆ ಭೇಟಿ ನೀಡುವುದು ಬಹಳ ಮುಖ್ಯ ಎಂದು ನಂಬಲಾಗಿದೆ.

ಮುಕ್ತಿನಾಗ ಕ್ಷೇತ್ರ:
ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿದೆ. ಈ ಕ್ಷೇತ್ರವನ್ನು ನವಸುಬ್ರಹ್ಮಣ್ಯ ದೇವಸ್ಥಾನವೆಂದೂ ಕರೆಯುತ್ತಾರೆ. ಇಲ್ಲಿ 16 ಅಡಿ ಎತ್ತರದ ಏಳು ಹೆಡೆಯ ನಾಗಮೂರ್ತಿಯನ್ನು ಕಾಣಬಹುದು. ನಾಗದೋಷ ಪರಿಹಾರಕ್ಕಾಗಿ ಈ ಕ್ಷೇತ್ರಕ್ಕೆ ಭಕ್ತರು ಭೇಟಿ ನೀಡುತ್ತಾರೆ. ಮುಕ್ತಿ ಎಂಬ ಹೆಸರೇ ಸೂಚಿಸುವಂತೆ, ಇಲ್ಲಿ ನಾಗದೋಷಗಳಿಗೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ.

Nagara Panchami 7

ಇತರ ನಾಗ ದೇವಾಲಯಗಳು:
ಘಾಟಿ ಸುಬ್ರಹ್ಮಣ್ಯ ಮತ್ತು ನಾಗಲಮಡಿಕೆ ಕೂಡ ಕರ್ನಾಟಕದ ಪ್ರಮುಖ ನಾಗ ದೇವಾಲಯಗಳಾಗಿವೆ. ಈ ಮೂರು ದೇವಾಲಯಗಳು ರಾಜ್ಯದಲ್ಲಿ ತ್ರಿಕೋನವನ್ನು ಸೃಷ್ಟಿಸುತ್ತವೆ. ವಿವಿಧ ಪ್ರದೇಶಗಳ ಭಕ್ತರು ಈ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ವಿದುರಾಶ್ವಥದಲ್ಲಿ ನಾಗಾರಾಧನೆಯು ಪ್ರಚಲಿತದಲ್ಲಿದೆ, ಇದು ಕೂಡ ನಾಗದೇವತೆಗೆ ಸಂಬಂಧಿಸಿದ ಸ್ಥಳವಾಗಿದೆ.

ಕಾಶ್ಮೀರದ ಶೇಷನಾಗ ದೇವಾಲಯ
ಕಾಶ್ಮೀರದಲ್ಲಿ ಹಿಂದಿನ ಕಾಲದಲ್ಲಿ 700ಕ್ಕೂ ಹೆಚ್ಚು ನಾಗಾರಾಧನೆಯ ಕೇಂದ್ರಗಳಿದ್ದವು. ಇಂದಿಗೂ ಸಹ ಇಲ್ಲಿನ ಮನ್ಸಾರ್ ಸರೋವರದ ಪರಿಸರದಲ್ಲಿ ಶೇಷನಾಗಿಗಳು ಎಂಬ ಅಲೆಮಾರಿ ಜನರಿದ್ದಾರೆ. ಇವರು ನಾಗಪೂಜಕರು, ಮನ್ಸಾರ್ ಸರೋವರದ ಪೂರ್ವ ತೀರದ ಸಮೀಪದಲ್ಲಿ ಒಂದು ಸುಪ್ರಸಿದ್ಧ ಶೇಷನಾಗ ದೇವಾಲಯ (Sheshnag Temple) ಇದೆ. ಈ ದೇವಾಲಯ 5 ಶತಮಾನಗಳಷ್ಟು ಪುರಾತನ ಎಂದು ಇಲ್ಲಿನ ಜನ ಹೇಳುತ್ತಾರೆ.

Sheshnag Temple

ಈ ದೇವಾಲಯ ನೆಲದಿಂದ ಸುಮಾರು 200 ಅಡಿ ಎತ್ತರದಲ್ಲಿದೆ. ಈ ದೇವಾಲಯದಲ್ಲಿ 6 ತಲೆಗಳ ಶೇಷನಾಗನ ವಿಗ್ರಹ ಇದೆ. ಇವನ ಸುತ್ತ ಹಲವಾರು ಚಿಕ್ಕ ನಾಗಗಳಿವೆ. ವಧು-ವರರು ಇಲ್ಲಿ ಪೂಜೆ ಸಲ್ಲಿಸಿದರೇ ಅವರಿಗೆ ನಾಗರಾಜನ ಆಶೀರ್ವಾದ ಸಿಗುತ್ತದೆ, ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂದು ಇಲ್ಲಿನವರ ನಂಬಿಕೆ. ಹೀಗಾಗಿ ಕಾಶ್ಮೀರದ ದೂರ ದೂರದ ಭಾಗಗಳಿಂದ ನವವಿವಾಹಿತರು ಶೇಷನಾಗನ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ.

ಈ ಸ್ಥಳದ ಇತಿಹಾಸದ ಪ್ರಕಾರ ಮನ್ಸಾರ್ ಸರೋವರವನ್ನು ನಾಗದೇವ ಶೇಷನಾಗ ಸ್ವತಃ ನಿರ್ಮಿಸಿದ್ದ. ವಿಶಾಲ ಮನ್ಸಾರ್ ಕೆರೆಯ ನಡುವೆ ಹಲವಾರು ದ್ವೀಪಗಳಿವೆ. ಇವುಗಳಲ್ಲಿ ಶೇಷನಾಗ ದ್ವೀಪವೂ ಒಂದಾಗಿದೆ. ಪ್ರವಾಸಿಗಳು ಇಲ್ಲಿಗೆ ದೋಣಿಗಳಲ್ಲಿ ಹೋಗಬಹುದು. ಈ ದ್ವೀಪದಲ್ಲಿ 14ನೇ ಶತಮಾನದ ಶೇಷನಾಗದೇವಿಯ ದೇವಾಲಯ ಇದೆ. ಜಮ್ಮು ವಿಮಾನ ನಿಲ್ದಾಣದಿಂದ ಮನ್ಸಾರ್ ಕೆರೆಗೆ 69 ಕಿಮೀ ದೂರವಿದ್ದು, ಉಧಮ್‌ಪುರದಿಂದ 25 ಕಿಮೀ ದೂರ. ಸಾಂಬಾ ಪಟ್ಟಣದಿಂದ ಇಲ್ಲಿಗೆ ನಡೆದುಕೊಂಡು ಹೋಗಬಹುದು.

Nagchandreshwar Mandir

ಉಜ್ಜಯಿನಿ ನಾಗಚಂದ್ರೇಶ್ವರ ದೇವಾಲಯ
ಉಜ್ಜಯಿನಿ ಬಾಬಾ ಮಹಾಕಾಲೇಶ್ವರನ ಪವಿತ್ರ ಸ್ಥಾನ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಪ್ರಧಾನಕ್ಷೇತ್ರ ಇದು. ಇಲ್ಲಿರುವ ಮಹಾಕಾಲ ಶಿವಲಿಂಗವನ್ನು ಸ್ವಯಂಭು ಎಂದು ಕರೆಯಲಾಗುತ್ತದೆ. ಉಜ್ಜಯಿನಿಯ ಭವ್ಯ ಮಹಾಕಾಲೇಶ್ವರ ದೇವಾಲಯವನ್ನು ಪರ್ಮಾರ್ ಮನೆತನದ ರಾಜಾ ಭೋಜ 1050ರ ಸುಮಾರಿಗೆ ನಿರ್ಮಿಸಿದ್ದ. ಈ ದೇವಾಲಯದಲ್ಲಿ ಐದು ಅಂತಸ್ತುಗಳಿವೆ. ಎಲ್ಲಕ್ಕಿಂತ ಕೆಳಗೆ ನೆಲಮಾಳಿಗೆ. ಅದರ ಮೇಲಿನ ಅಂತಸ್ತಿನಲ್ಲಿ ಮಹಾಕಾಲೇಶ್ವರ ಲಿಂಗ. ಮಧ್ಯದ ಅಂತಸ್ತಿನಲ್ಲಿರುವುದು ಓಂಕಾರೇಶ್ವರ. 3ನೇ ಮಾಳಿಗೆಯಲ್ಲಿ ನಾಗಚಂದ್ರೇಶ್ವರ (Nagchandreshwar Mandir) ಲಿಂಗವಿದೆ. ಇಲ್ಲಿ 10 ತಲೆಯ ನಾಗನ ಮೇಲೆ ಕುಳಿತಿರುವ ಶಿವನ ವಿಗ್ರಹ ಇದೆ.

ನಾಗನ ಮೇಲೆ ವಿಷ್ಣುವಿನ ಬದಲು ಶಿವನನ್ನು ತೋರಿಸುವ ಏಕಮಾತ್ರ ದೇವಾಲಯ ಇದು. ಈ ಏಕಶಿಲಾ ಮೂರ್ತಿಯಲ್ಲಿ ಶಿವ, ಪಾರ್ವತಿ ಗಣೇಶ, ಭೈರವ ಮತ್ತು ನಂದಿಯನ್ನೂ ಕಾಣಬಹುದು. ಈ ವಿಗ್ರಹವನ್ನು ಶತಮಾನಗಳ ಹಿಂದೆ ನೇಪಾಳದಿಂದ ತರಲಾಗಿತ್ತು ಎನ್ನುತ್ತದೆ ಪುರಾಣ. ದೇವಾಲಯದ ಬಾಗಿಲನ್ನು ವರ್ಷಕ್ಕೆ ಒಮ್ಮೆ ನಾಗರ ಪಂಚಮಿಯ ದಿನ ಮಾತ್ರ ತೆರೆಯಲಾಗುತ್ತದೆ. ಆ ದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ನಾಗಚಂದ್ರೇಶ್ವರ ದೇವಾಲಯದಲ್ಲಿ ಸರ್ಪಶಯನ ಶಿವನನ್ನು ಆರಾಧಿಸುವುದರಿಂದ ಎಲ್ಲ ಸರ್ಪದೋಷಗಳು ನಿವಾರಣೆಯಾಗುತ್ತವೆ ಎಂದು ಭಕ್ತರು ನಂಬಿದ್ದಾರೆ. ಈ ದಿನ ಸ್ವಯಂ ನಾಗರಾಜ ತಕ್ಷಕನೇ ಇಲ್ಲಿಗೆ ಬಂದು ಭಕ್ತರ ಪೂಜೆ ಸ್ವೀಕರಿಸುತ್ತಾನೆ, ನಮ್ಮನ್ನು ಆಶೀರ್ವಧಿಸುತ್ತಾನೆ ಎಂಬುದು ಸಹ ಭಕ್ತರ ನಂಬಿಕೆ.

Bhujang Naga Temple

ಗುಜರಾತ್‌ನ ಭುಜಂಗ ನಾಗ ದೇವಾಲಯ:
ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿರುವ ಭುಜ್ ಪಟ್ಟಣದ ಹೊರಗೆ ಭುಜಿಯಾ ಡುಂಗರ್ ಎಂಬ ಬೆಟ್ಟ ಇದೆ. ಈ ಬೆಟ್ಟದ ಮೇಲೆ ಒಂದು ಪ್ರಾಚೀನ ಕೋಟೆ ಇದೆ. ಸುಪ್ರಸಿದ್ದ ಭುಜಂಗ ನಾಗ ದೇವಾಲಯ (Bhujang Naga Temple) ಇರುವುದು ಇಲ್ಲಿಯೇ. ಪುರಾಣದ ಪ್ರಕಾರ ಹಿಂದೆ ಕಛ್‌ ಪ್ರಾಂತ್ಯವನ್ನು ದೈತ್ಯವಂಶದ ರಾಕ್ಷಸರು ಆಳುತ್ತಿದ್ದರು. ಕಾಠೇವಾಡದಿಂದ ಬಂದಿದ್ದ ಭುಜಂಗ ನಾಗ ಎಂಬ ರಾಜ ಜನರನ್ನು ರಾಕ್ಷಸರ ಆಳ್ವಿಕೆಯಿಂದ ಬಿಡುಗಡೆ ಮಾಡಿ ತನ್ನ ರಾಜ್ಯ ಸ್ಥಾಪಿಸಿದ್ದ.

Nagamandala

ಭುಜಂಗನನ್ನು ಜನರು ನಾಗರಾಜ ಎಂದು ಪೂಜಿಸಲು ಆರಂಭಿಸಿದರು. ಈತನನ್ನು ಶೇಷನಾಗನ ಸಹೋದರ ಎಂದು ನಂಬಲಾಯಿತು. ಅವನ ಪೂಜೆಗಾಗಿ ಭುಜಂಗ ದೇವಾಲಯವನ್ನು ನಿರ್ಮಿಸಲಾಗಿತ್ತು. 1715ರಲ್ಲಿ ಜಡೇಜಾ ಮನೆತನದ ರಾಜರು ಇಲ್ಲಿ ಭುಜಿಯಾ ಕೋಟೆಯನ್ನು ನಿರ್ಮಿಸಿದ್ದರು. ಈ ಕೋಟೆಯ ನಡುವೆ ಭುಜಂಗ ನಾಗ ದೇವಾಲಯ ಇದೆ. ನಾಗಾ ಸಾಧುಗಳು ಈ ದೇವಾಲಯದಲ್ಲಿ ನಾಗದೇವತೆಯನ್ನು ಆರಾಧಿಸುತ್ತಿದ್ದರು. ದೇಶಾಲ್ಜೀ ಎಂಬ ರಾಜ 1723ರಲ್ಲಿ ಈ ದೇವಾಲಯದ ಮೇಲೆ ಮಂಟಪ ನಿರ್ಮಿಸಿದ್ದ. ಅಂದಿನಿಂದ ಇಲ್ಲಿ ಶ್ರಾವಣ ಮಾಸದಲ್ಲಿ ನಾಗರಪಂಚಮಿಯ ಉತ್ಸವ ಸಂಭ್ರಮದಿಂದ ಆಚರಿಸಲಾಗುತ್ತದೆ.

TAGGED:Naga PanchamiNaga TempleNagar PanchamiNagar Panchami Celebrationನಾಗ ಪಂಚಮಿನಾಗದೇವತೆನಾಗರ ಪಂಚಮಿ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Raichuru Water Protest
Districts

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Public TV
By Public TV
7 minutes ago
siddu dkshi
Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
By Public TV
8 minutes ago
CJ Roy 1 3
Bengaluru City

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಂತಿಮ ಹಂತಕ್ಕೆ ಎಸ್‌ಐಟಿ ತನಿಖೆ

Public TV
By Public TV
13 minutes ago
New Zealand 2
Cricket

T20 World Cup | ಫಿಲಿಪ್ಸ್ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – ಸೂಪರ್‌-8 ಗೆ ಜಿಗಿದ ಕಿವೀಸ್‌

Public TV
By Public TV
20 minutes ago
Bengaluru Mysuru Expressway 2
Bellary

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ

Public TV
By Public TV
34 minutes ago
Siddu H.Vishwanath
Bengaluru City

ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?